ಅಣ್ಣಾಮಲೈ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ : ತಮಿಳುನಾಡಿನ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ !

 ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಾರ್ಟಿಯಲ್ಲಿ (BJP) ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಪಕ್ಷದ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿ ಹೊರನಡೆದಿದ್ದು, ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued

ತಮಿಳುನಾಡು ಚುನಾವಣೆ | ವಿದೇಶಿ ಪ್ರಜೆಗಳಿಂದ ಅಕ್ರಮ ಮತದಾನದ ಆರೋಪ; 10 ಜನರ ಬಂಧನ: ತನಿಖೆಗೆ ಚುನಾವಣಾ ಆಯೋಗ ಆದೇಶ

ಚೆನ್ನೈ: ಕಳೆದ ಏಪ್ರಿಲ್ 23 ರಂದು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿ ಪ್ರಜೆಗಳು “ಮೋಸದಿಂದ” ಮತದಾನ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಭಾರತೀಯ ಚುನಾವಣಾ ಆಯೋಗ (EC) ಆದೇಶಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ಮಂದಿ ವಿದೇಶಿ ಪ್ರಜೆಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. … Continued

ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

ಮೈತ್ರಿಪಕ್ಷಗಳ ವಿರೋಧಕ್ಕೆ ಮಣಿದ ಸಿಎಂ ವಿಜಯ : ಜ್ಯೋತಿಷಿ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಆದೇಶ ವಾಪಸ್

ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಹುದ್ದೆಗೆ ನೇಮಿಸಿದ ಕೇವಲ 24 ಗಂಟೆಗಳಲ್ಲಿ ವಿಜಯ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ. ಮೈತ್ರಿಕೂಟದ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮೇ 12, 2026 ರಂದು … Continued

ಸಿಎಂ ವಿಜಯ ವಿಶೇಷಾಧಿಕಾರಿಯಾಗಿ ಜ್ಯೋತಿಷಿ ವೆಟ್ರಿವೇಲ್ ನೇಮಕ ; ಕಾಂಗ್ರೆಸ್‌ ಅಸಮಾಧಾನ

 ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ  ವಿಜಯ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ (OSD) ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ತಮಿಳುನಾಡು ಸರ್ಕಾರದ ಸಾರ್ವಜನಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ವೆಟ್ರಿವೇಲ್ ಅವರು ಮುಖ್ಯಮಂತ್ರಿಯವರ ರಾಜಕೀಯ ವಿಭಾಗದ ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಅಧಿಕಾರ ವಹಿಸಿಕೊಂಡ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ; ಇದು ಅಪ್ಪಟ ವಿಶ್ವಾಸ ದ್ರೋಹ ಎಂದ ಡಿಎಂಕೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಶಕಗಳ ಕಾಲದ ಡಿಎಂಕೆ ಮತ್ತು ಎಐಎಡಿಎಂಕೆ ಏಕಸ್ವಾಮ್ಯವನ್ನು ಮುರಿದು ಇತಿಹಾಸ ಸೃಷ್ಟಿಸಿರುವ ನಟ ವಿಜಯ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿಗೆ ಮುಂದಾಗಿರುವುದು ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತನ್ನ ದೀರ್ಘಕಾಲದ ಮಿತ್ರಪಕ್ಷವಾದ ಕಾಂಗ್ರೆಸ್‌ನ ಈ ನಡೆಯನ್ನು ಡಿಎಂಕೆ “ಅಪ್ಪಟ ವಿಶ್ವಾಸದ್ರೋಹ” ಎಂದು ಕರೆದಿದೆ. … Continued