ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ ದಂತಚೋರ-ಕಾಡುಗಳ್ಳ ವೀರಪ್ಪನ್‌ ಪುತ್ರಿ

ಚೆನ್ನೈ : ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ದಂತ ಚೋರ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಮೊದಲನೇ ಹಂತದ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ … Continued

ಪೊಲೀಸರು ಅನುಮತಿ ನಿರಾಕರಿಸಿದ ನಂತರ ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಮಾರ್ಚ್ 18 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ಕಿಮೀ ರೋಡ್ ಶೋ ನಡೆಸಲು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಆನಂದ ವೆಂಕಟೇಶ ಅವರು ರೋಡ್ ಶೋಗೆ ವ್ಯವಸ್ಥೆ ಮಾಡುವಂತೆ ಕೊಯಮತ್ತೂರು ಪೊಲೀಸರಿಗೆ ಆದೇಶಿಸಿದರು. ರೋಡ್ ಶೋ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರ … Continued

ವೀಡಿಯೊ..| ತನ್ನ ಮರಿಯನ್ನು ಕಾಪಾಡಿದ ಅರಣ್ಯ ಸಿಬ್ಬಂದಿಗೆ ‘ಕೃತಜ್ಞತೆ’ ಸಲ್ಲಿಸಿದ ಕಾಡಾನೆ

ಚೆನ್ನೈ: ಕಾಡು ಪ್ರಾಣಿಗಳಿಗೆ ಭಾವನೆಗಳು ಇರುತ್ತವೆ ಎಂಬುದುಕ್ಕೆ ಆನೆಯ ವರ್ತನೆಯೊಂದು ಪುಷ್ಟೀಕರಿಸಿದೆ. ಆನೆ ಮರಿ ಜತೆ ಇರುವಾಗ ಬಹಳ ಅಪಾಯಕಾರಿ. ಆದರೆ, ಇಲ್ಲಿ ಕಾಡಾನೆ ತನ್ನ ಮಗುವನ್ನು ಕಾಪಾಡಿದ ವ್ಯಕ್ತಿಗೆ ಧನ್ಯವಾದ ಸಲ್ಲಿಸಿದ ವಿಶಿಷ್ಟ ಹಾಗೂ ಹೃದಯಸ್ಪರ್ಶಿ ಘಟನೆ ವೀಡಿಯೊದಲ್ಲಿ ಸೆರೆಯಾಗಿದೆ. ಮರಿಯಾನೆ ರಕ್ಷಿಸಿ, ಅದರ ತಾಯಿ ಜತೆ ಸೇರಿಸುವ ಅಸಾಧಾರಣ ಬದ್ಧತೆ ಹಾಗೂ ಧೈರ್ಯ … Continued

ತಮಿಳು ಸೂಪರ್‌ಸ್ಟಾರ್‌ ದಳಪತಿ ವಿಜಯ ರಾಜಕೀಯಕ್ಕೆ ಪದಾರ್ಪಣೆ : ಹೊಸ ʼರಾಜಕೀಯ ಪಕ್ಷʼ ಘೋಷಣೆ

ಚೆನ್ನೈ: ತಮಿಳು ನಟ ದಳಪತಿ ವಿಜಯ ಅವರು ಶುಕ್ರವಾರ ತಮ್ಮ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದು, ‘ತಮಿಳಗ ವೆಟ್ರಿ ಕಳಗಂ’ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ “ಮೂಲಭೂತ ರಾಜಕೀಯ ಬದಲಾವಣೆ” ಯ ಬದ್ಧತೆ ತಮ್ಮ ರಾಜಕೀಯ ಪಕ್ಷದ ಉದ್ದೇಶ ಎಂದು ಹೇಳಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ … Continued

ಖ್ಯಾತ ನಟ- ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ ನಿಧನ

ಚೆನ್ನೈ: ಡಿಎಂಡಿಕೆ ಪಕ್ಷದ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ವಿಜಯಕಾಂತ ಅವರು ವಿಜಯಕಾಂತ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ … Continued

ಭ್ರಷ್ಟಾಚಾರ ಪ್ರಕರಣ : ತಮಿಳುನಾಡಿನ ಹಿರಿಯ ಸಚಿವರಿಗೆ 3 ವರ್ಷ ಜೈಲು

ಚೆನ್ನೈ:  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿದೆ ಸಚಿವರು ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದರು ಮತ್ತು ಪ್ರಕರಣವು ತುಂಬಾ ಹಳೆಯದಾಗಿದ್ದು, ಈಗ ಸಚಿವರಿಗೆ … Continued

ತಮಿಳುನಾಡು ಮಳೆ: 7,500 ಜನರ ಸ್ಥಳಾಂತರ, ರೈಲ್ವೆ ನಿಲ್ದಾಣದಲ್ಲಿ ಸಿಲುಕಿದ 800 ಜನ, ಕಾಯಲ್‌ಪಟ್ಟಿಣಂನಲ್ಲಿ ಒಂದೇ ದಿನ 95 ಸೆಂಮೀ ದಾಖಲೆ ಮಳೆ…!

ಚೆನ್ನೈ: ಕಳೆದ ದಿನದಿಂದ ಸುರಿದ ಭಾರೀ ಮಳೆಯ ನಂತರ ತಿರುನಲ್ವೇಲಿ ಮತ್ತು ತೂತುಕುಡಿ ಸೇರಿದಂತೆ ದಕ್ಷಿಣ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿನ ಹಳ್ಳಿಗಳು, ಪಟ್ಟಣಗಳು, ರಸ್ತೆಗಳು ಮತ್ತು ಹೆದ್ದಾರಿಗಳು ಜಲಾವೃತಗೊಂಡು ನದಿಗಳನ್ನು ಹೋಲುತ್ತಿವೆ. ಧಾರಾಕಾರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ನಾಲ್ಕು ದಕ್ಷಿಣ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ … Continued

ವೀಡಿಯೊಗಳು…| ʼಮೈಚಾಂಗ್ʼ ಚಂಡಮಾರುತ : ಭಾರೀ ಮಳೆಗೆ ಚೆನ್ನೈನಲ್ಲಿ ಜನಜೀವನ ಸ್ಥಗಿತ, ತೇಲುವ ಕಾರುಗಳು, ರಸ್ತೆಯಲ್ಲಿ ಮೊಸಳೆ, ಏರ್‌ಪೋರ್ಟ್ ರನ್‌ ವೇಯಲ್ಲಿ ನೀರೋ ನೀರು

ಚೆನ್ನೈ: ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ರಚನೆಯಾಗಿರುವ ʼಮೈಚಾಂಗ್ʼ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಕರಾವಳಿಯ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ತಿರುವಳ್ಳೂರು ಮತ್ತು ಕಡಲೂರು ಜಿಲ್ಲೆಗಳನ್ನು ಒಳಗೊಂಡಂತೆ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಹೊಸದಿಲ್ಲಿ: ನಾಳೆ ಭೂಕುಸಿತಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತವು ಇನ್ನಷ್ಟು ತೀವ್ರತೆ ತರುವ ಭೀತಿಯಿದ್ದು, … Continued