ಭ್ರಷ್ಟಾಚಾರ ಪ್ರಕರಣ : ತಮಿಳುನಾಡಿನ ಹಿರಿಯ ಸಚಿವರಿಗೆ 3 ವರ್ಷ ಜೈಲು

ಚೆನ್ನೈ:  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿದೆ ಸಚಿವರು ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದರು ಮತ್ತು ಪ್ರಕರಣವು ತುಂಬಾ ಹಳೆಯದಾಗಿದ್ದು, ಈಗ ಸಚಿವರಿಗೆ … Continued

ತಮಿಳುನಾಡು ಮಳೆ: 7,500 ಜನರ ಸ್ಥಳಾಂತರ, ರೈಲ್ವೆ ನಿಲ್ದಾಣದಲ್ಲಿ ಸಿಲುಕಿದ 800 ಜನ, ಕಾಯಲ್‌ಪಟ್ಟಿಣಂನಲ್ಲಿ ಒಂದೇ ದಿನ 95 ಸೆಂಮೀ ದಾಖಲೆ ಮಳೆ…!

ಚೆನ್ನೈ: ಕಳೆದ ದಿನದಿಂದ ಸುರಿದ ಭಾರೀ ಮಳೆಯ ನಂತರ ತಿರುನಲ್ವೇಲಿ ಮತ್ತು ತೂತುಕುಡಿ ಸೇರಿದಂತೆ ದಕ್ಷಿಣ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿನ ಹಳ್ಳಿಗಳು, ಪಟ್ಟಣಗಳು, ರಸ್ತೆಗಳು ಮತ್ತು ಹೆದ್ದಾರಿಗಳು ಜಲಾವೃತಗೊಂಡು ನದಿಗಳನ್ನು ಹೋಲುತ್ತಿವೆ. ಧಾರಾಕಾರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ನಾಲ್ಕು ದಕ್ಷಿಣ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ … Continued

ವೀಡಿಯೊಗಳು…| ʼಮೈಚಾಂಗ್ʼ ಚಂಡಮಾರುತ : ಭಾರೀ ಮಳೆಗೆ ಚೆನ್ನೈನಲ್ಲಿ ಜನಜೀವನ ಸ್ಥಗಿತ, ತೇಲುವ ಕಾರುಗಳು, ರಸ್ತೆಯಲ್ಲಿ ಮೊಸಳೆ, ಏರ್‌ಪೋರ್ಟ್ ರನ್‌ ವೇಯಲ್ಲಿ ನೀರೋ ನೀರು

ಚೆನ್ನೈ: ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ರಚನೆಯಾಗಿರುವ ʼಮೈಚಾಂಗ್ʼ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಕರಾವಳಿಯ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ತಿರುವಳ್ಳೂರು ಮತ್ತು ಕಡಲೂರು ಜಿಲ್ಲೆಗಳನ್ನು ಒಳಗೊಂಡಂತೆ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಹೊಸದಿಲ್ಲಿ: ನಾಳೆ ಭೂಕುಸಿತಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತವು ಇನ್ನಷ್ಟು ತೀವ್ರತೆ ತರುವ ಭೀತಿಯಿದ್ದು, … Continued

ಮೈಚಾಂಗ್ ಚಂಡಮಾರುತ ತೀವ್ರ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ತೀವ್ರ ಮುನ್ನೆಚ್ಚರಿಕೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ಮೈಚಾಂಗ್ ಚಂಡಮಾರುತವಾಗಿ ತೀವ್ರಗೊಂಡಿದ್ದು, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಿಗೆ ಸಂಭಾವ್ಯ ಅಪಾಯವನ್ನುಂಟುಮಾಡಿದೆ. ಇದೇ ತಿಂಗಳ 5ರಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ … Continued

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued

ಚೆನ್ನೈ: ಭಾರೀ ಮಳೆ, ನವೆಂಬರ್‌ 30 ರಂದು ಶಾಲೆಗಳಿಗೆ ರಜೆ

ಚೆನ್ನೈ: ಭಾರೀ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿರುವುದರಿಂದ ಗುರುವಾರ (ನವೆಂಬರ್‌ 30) ಚೆನ್ನೈನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಡಿಸೆಂಬರ್ 2 ಮತ್ತು 3 ರಂದು ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಹವಾಮಾನ ಇಲಾಖೆ ಪ್ರಕಾರ, ತಮಿಳುನಾಡಿನ … Continued

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು, ಗುರುವಾರ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC), ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ … Continued

ವೀಡಿಯೊ…| ಬೈಕ್‌ ಓಡಿಸುತ್ತಿರುವಾಗಲೇ ಪಟಾಕಿ ಸಿಡಿಸುತ್ತ ಬೈಕ್‌ ಸಾಹಸದ ಸ್ಟಂಟ್‌ ಮಾಡಿದ ವ್ಯಕ್ತಿ : ವೀಡಿಯೊ ವೈರಲ್ ಆದ ನಂತರ ಬಂಧನ

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಸ್ಟಂಟ್‌ ಮಾಡುತ್ತಿದ್ದು, ಬೈಕ್‌ ನಲ್ಲಿ ಪಟಾಕಿ ಸಿಡಿಸುತ್ತಲೇ ಬೈಕ್‌ ಸ್ಟಂಟ್‌ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಈತನ ಬೈಕ್ ಸ್ಟಂಟ್ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ತಮಿಳುನಾಡಿನ ತಿರುಚ್ಚಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ವೀಡಿಯೊದಲ್ಲಿ ವ್ಯಕ್ತಿ ತನ್ನ ಮೋಟಾರು ಬೈಕ್‌ಗೆ ಪಟಾಕಿಗಳನ್ನು ಜೋಡಿಸಿ, … Continued

ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued

2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ … Continued