‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ : ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಭಯೋತ್ಪಾದಕ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಂಗಳವಾರ ಚುನಾವಣಾ ಆಯೋಗಕ್ಕೆ (EC) ದೂರು ನೀಡಿದೆ. ಖರ್ಗೆ ಅವರು ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ … Continued

ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

ಉತ್ತರ ಭಾರತದ ಮಹಿಳೆಯರ ಕುರಿತು ಡಿಎಂಕೆ ನಾಯಕ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತ ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಕೆ ಮಾಡಿ ನೀಡಿರುವ ಹೇಳಿಕೆಯೊಂದು ಇದೀಗ ದೊಡ್ಡ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಚೆನ್ನೈನ ಕ್ವೈಡ್-ಎ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಮಾರನ್, “ತಮಿಳುನಾಡಿನಲ್ಲಿ ಹೆಣ್ಣುಮಕ್ಕಳಿಗೆ ಓದಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆ ಮನೆಗೆ … Continued

ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡು ಯೂತ್ ಕಾಂಗ್ರೆಸ್ ವಿರೋಧ: ಕಾರಣ…?

 ಚೆನ್ನೈ: ತಮಿಳುನಾಡಿನ ಖ್ಯಾತ ನಟ ಶಿವಕಾರ್ತಿಕೇಯನ್ ಅಭಿನಯದ ಇತ್ತೀಚಿನ ಚಿತ್ರ ‘ಪರಾಶಕ್ತಿ’ (Parasakthi) ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ತಮಿಳುನಾಡು ಯೂತ್ ಕಾಂಗ್ರೆಸ್, ಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಸುಧಾ ಕೊಂಗರ ಪ್ರಸಾದ ನಿರ್ದೇಶನದ ಈ ಸಿನಿಮಾ ಜನವರಿ 10 ರಂದು ಬಿಡುಗಡೆಯಾಗಿತ್ತು. 1960 … Continued

3 ಕೋಟಿ ವಿಮಾ ಹಣಕ್ಕಾಗಿ ಹಾವು ಬಳಸಿ ತಂದೆಯನ್ನೇ ಕೊಲೆ ಮಾಡಿದ ಪುತ್ರರು ; ಇದು ಬೆಳಕಿಗೆ ಬಂದಿದ್ದೇ ರೋಚಕ

ತಿರುವಳ್ಳೂರು (ತಮಿಳುನಾಡು): ಆರಂಭದಲ್ಲಿ ಹಾವಿನ ಕಚ್ಚಿದ್ದರಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ಕೋಲ್ಡ್‌ ಬ್ಲಡೆಡ್‌ ಮರ್ಡರ್‌ ಎಂದು ಗೊತ್ತಾದ ನಂತರ ಪೊಲೀಸರೇ ದಂಗಾಗಿದ್ದಾರೆ. ದೊಡ್ಡ ಮೊತ್ತದ ವಿಮೆ ಹಣವನ್ನು ಪಡೆಯಲು ಸ್ವಂತ ಮಕ್ಕಳೇ ತಂದೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೋತತ್ತೂರುಪೆಟ್ಟೈ ಗ್ರಾಮದ ನಿವಾಸಿ, ಸರ್ಕಾರಿ ಶಾಲೆಯ ಪ್ರಯೋಗಾಲಯ … Continued

ದಿತ್ವಾ ಚಂಡಮಾರುತ | ಶ್ರೀಲಂಕಾದಲ್ಲಿ 123 ಸಾವು ; ತಮಿಳುನಾಡಿನಲ್ಲಿ 54 ವಿಮಾನಗಳ ಸಂಚಾರ ರದ್ದು, ಶಾಲೆಗಳು ಬಂದ್

ನವದೆಹಲಿ:  ದಿತ್ವಾ (Ditwah) ಚಂಡಮಾರುತವು ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯ ಕಡೆಗೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಸಿದ್ಧತೆಗಳನ್ನು ಹೆಚ್ಚಿಸಿದ್ದಾರೆ. ಬೃಹತ್ ಪ್ರಮಾಣದ ಪರಿಹಾರ ಕಾರ್ಯಾಚರಣೆಗಳಿಂದ ಹಿಡಿದು, ವಿಮಾನಗಳ ರದ್ದತಿ ಹಾಗೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆಗಳವರೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಶ್ರೀಲಂಕಾದ ಕರಾವಳಿ ಮತ್ತು ಅಂಡಮಾನ್‌ನ ನೈಋತ್ಯ ಬಂಗಾಳಕೊಲ್ಲಿಯ ಮೂಲಕ ಸಾಗುತ್ತಿರುವ ಈ ಚಂಡಮಾರುತವು ತೀವ್ರಗೊಳ್ಳುತ್ತಲೇ … Continued