ಚಂಡಮಾರುತದ ಪ್ರಭಾವ : ತಮಿಳುನಾಡಿನಲ್ಲಿ ಭಾರೀ ಮಳೆ ; 4 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ

ಚೆನ್ನೈ: ದಕ್ಷಿಣ ಶ್ರೀಲಂಕಾ ಕರಾವಳಿಯಲ್ಲಿ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಸೇರಿದಂತೆ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಮಳೆಯ ಕಾರಣ ಡಿಸೆಂಬರ್ 18ರ ಸೋಮವಾರ ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾನುವಾರ ಸುರಿದ ಭಾರಿ … Continued

ʼ ನಾವು ಗೌತಮಿ ಪರವಾಗಿ ಇದ್ದೇವೆ ‘: ನಟಿಯ ರಾಜೀನಾಮೆ ನಂತರ ತಮಿಳುನಾಡು ಬಿಜೆಪಿ ಮುಖ್ಯಸ್ಥರ ಹೇಳಿಕೆ

ಚೆನ್ನೈ: ʼಬೆಂಬಲದ ಕೊರತೆʼಯನ್ನು ಉಲ್ಲೇಖಿಸಿ ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ತಪ್ಪು ತಿಳುವಳಿಕೆಯಿಂದಾಗಿ ಹೀಗಾಗಿದೆ ಮತ್ತು ಪಕ್ಷವು ನಿಜವಾಗಿ ನಟಿ ಗೌತಮಿ ಅವರ ಪರವಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ, ಗೌತಮಿ ಅವರು ಬಿಜೆಪಿಯೊಂದಿಗಿನ ತನ್ನ 25 ವರ್ಷಗಳ … Continued

ಕಾವೇರಿ ನದಿ ನೀರು ವಿವಾದ : ಆಗಸ್ಟ್ 25 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠ ರಚಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ, ಬಿ.ಆರ್‌. ಗವಾಯಿ ಮತ್ತು ಪ್ರಶಾಂತ ಮಿಶ್ರಾ ಅವರನ್ನೊಳಗೊಂಡ ಪೀಠವು ಆಗಸ್ಟ್‌ 25 ರಂದು ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ನಡೆಸಲಿದೆ. ಬೆಳೆದು ನಿಂತಿರುವ ಬೆಳೆಯ … Continued

ಸೀರೆ ಹಂಚುವ ವೇಳೆ ಕಾಲ್ತುಳಿತಕ್ಕೆ 4 ಮಹಿಳೆಯರು ಸಾವು

ಚೆನ್ನೈ: ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯಲ್ಲಿ ಶನಿವಾರ ನಡೆದ ಸೀರೆ ವಿತರಣೆ ಸಮಾರಂಭದಲ್ಲಿ ಕಾಲ್ತುಳಿತ ಸಂಭವಿಸಿ ನಾಲ್ವರು ವೃದ್ಧ ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ತೈಪೂಸಂ ಹಬ್ಬಕ್ಕೆ ಮುನ್ನ ಅಯ್ಯಪ್ಪನ್ ಎಂದು ಗುರುತಿಸಲಾದ ವ್ಯಕ್ತಿಯಿಂದ ಸೀರೆಗಳು ಮತ್ತು ವೇಷಭೂಷಣಗಳನ್ನು (ಉಡುಪುಗಳನ್ನು) ಸ್ವೀಕರಿಸಲು ಟೋಕನ್‌ಗಳನ್ನು ಸಂಗ್ರಹಿಸಲು ವನ್ನಿಯಂಬಾಡಿಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದ್ದರು. ಇದು … Continued

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟ : 4 ಮಂದಿ ಸಾವು, 7 ಮಂದಿಗೆ ಗಾಯ

ಚೆನ್ನೈ: ಶನಿವಾರ ನಸುಕಿನಲ್ಲಿ ನಾಮಕ್ಕಲ್ ಜಿಲ್ಲೆಯ ಪಟಾಕಿ ಅಂಗಡಿ ಮಾಲೀಕನ ಮನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಮೃತ ನಾಲ್ವರಲ್ಲಿ ಮೂವರು ಮಹಿಳೆಯರು ಮತ್ತು ಪಟಾಕಿ ಅಂಗಡಿಯ ಮಾಲೀಕರು ಸೇರಿದ್ದಾರೆ. ಶನಿವಾರ, ನಸುಕಿನ 4 ಗಂಟೆಗೆ ಅವರೆಲ್ಲರೂ ತಮ್ಮ ಮನೆಗಳಲ್ಲಿ ಮಲಗಿದ್ದಾಗ ಸ್ಫೋಟ ಸಂಭವಿಸಿದೆ. ಬೆಂಕಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳಿಗೆ … Continued

ನಿಮಗೆ ತಮಿಳು ಹುಡುಗಿಯನ್ನೇ ಮದುವೆ ಮಾಡಿಕೊಡಲು ಸಿದ್ಧ: ಮಹಿಳೆ ಮಾತಿಗೆ ನಾಚಿನೀರಾದ ರಾಹುಲ್ ಗಾಂಧಿ

ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್‌ನ ‘ಭಾರತ್‌ ಜೋಡೋ ಯಾತ್ರೆ’ ಅನೇಕ ತಮಾಷೆಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ. ತಮಿಳುನಾಡಿನಲ್ಲಿ ಸಂಚರಿಸಿದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜನರೊಂದಿಗೆ ಸಂವಾದ ನಡೆಸಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್ ಅವರು ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ವಿದ್ಯಮಾನದ ಬಗ್ಗೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. … Continued

ಮಾನವ ರೂಪಿ ಮುಖದ ಗಣೇಶ ವಿಗ್ರಹ ಹೊಂದಿರುವ ವಿಶ್ವದ ಏಕೈಕ ದೇವಾಲಯ….ಮಾಹಿತಿ ಇಲ್ಲಿದೆ

ಗಣೇಶನಿಗೆ ಸಮರ್ಪಿತವಾದ ದೇಶಾದ್ಯಂತ ನೀವು ಅನೇಕ ವಿಶಿಷ್ಟ ಮತ್ತು ಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಪ್ರತಿಯೊಂದು ದೇವಾಲಯವು ತನ್ನದೇ ಆದ ವಿಶೇಷತೆ ಮತ್ತು ಪೌರಾಣಿಕ ಪ್ರಾಮುಖ್ಯತೆಯನ್ನು ಹೊಂದಿದೆ, ಆದರೆ ನಿಮಗೆ ಎಲ್ಲೆಡೆಯೂ ಸಿಗುವುದು ಗಜಮುಖದ ಗಣಪತಿಯ ವಿಗ್ರಹ ಅಥವಾ ಮೂರ್ತಿಯೇ. ಆದರೆ ಇದಕ್ಕೆ ಭಿನ್ನವಾದ ದೇವಾಲಯ ತಮಿಳುನಾಡಿನ ತಿರುವರೂರ್ ಜಿಲ್ಲೆಯ ಕೊತ್ತನೂರಿನ ತಿಲತರ್ಪಣಪುರಿಯ ಗಣೇಶನ ದೇವಾಲಯ. ಇಲ್ಲಿ … Continued

38 ಸಂಶೋಧನಾ ಸಂಸ್ಥೆಗಳ ಒಕ್ಕೂಟ ಸಿಎಸ್‌ಐಆರ್‌ನ ಮೊದಲ ಮಹಿಳಾ ಮಹಾನಿರ್ದೇಶಕರಾಗಿ ತಿರುನಲ್ವೇಲಿಯ ನಲ್ಲತಂಬಿ ಕಲೈಸೆಲ್ವಿ ನೇಮಕ

ನವದೆಹಲಿ: ಹಿರಿಯ ವಿಜ್ಞಾನಿ ನಲ್ಲತಂಬಿ ಕಲೈಸೆಲ್ವಿ ಅವರು ದೇಶದಾದ್ಯಂತ 38 ಸಂಶೋಧನಾ ಸಂಸ್ಥೆಗಳ ಒಕ್ಕೂಟವಾದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ನ ಮೊದಲ ಮಹಿಳಾ ಮಹಾನಿರ್ದೇಶಕರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್‌ನಲ್ಲಿ ನಿವೃತ್ತಿ ಹೊಂದಿದ ಶೇಖರ್ ಮಾಂಡೆ ಅವರ ಉತ್ತರಾಧಿಕಾರಿಯಾಗಿದ್ದಾರೆ. ಮಾಂಡೆ ಅವರ ನಿವೃತ್ತಿಯ ನಂತರ ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ರಾಜೇಶ್ … Continued

ಕಬಡ್ಡಿ ಆಟದಲ್ಲಿ ರೈಡ್‌ ಮಾಡುತ್ತಿರುವಾಗಲೇ ಆಟಗಾರ ಕುಸಿದ ಬಿದ್ದು ಸಾವು : ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚೆನ್ನೈ: 22ರ ಹರೆಯದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಪನ್ರುತಿ ಸಮೀಪದ ಮನಡಿಕುಪ್ಪಂನಲ್ಲಿ ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ಆಟಗಾರನನ್ನು ವಿಮಲ್‌ರಾಜ್ ಎಂದು ಗುರುತಿಸಲಾಗಿದ್ದು, ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಡಲೂರು ಜಿಲ್ಲೆಯ ಕಡಂಪುಲಿಯೂರು ಸಮೀಪದ ಪುರಂಗಿಣಿ ಗ್ರಾಮದವರಾದ ವಿಮಲ್‌ರಾಜ್ ಅವರು ಮನ್ನಾಡಿಕುಪ್ಪಂನಲ್ಲಿ … Continued

ತಮಿಳುನಾಡು ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು ಪ್ರಕರಣ: ಎರಡನೇ ಶವಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಕಲ್ಲಕುರಿಚಿಯ ತನ್ನ ಶಾಲೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಮರಣೋತ್ತರ ಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಕಾರ್ಯವಿಧಾನದ ಸಮಯದಲ್ಲಿ ಹುಡುಗಿಯ ತಂದೆಗೆ ಹಾಜರಿರಲು ಅವಕಾಶ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ. ಈ ಘಟನೆಯು ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಯಿತು, ಪ್ರತಿಭಟನಾಕಾರರು ಮೂರು ಪೊಲೀಸ್ ವಾಹನಗಳು … Continued