5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಪಾವತಿ ; ದೇವಸ್ಥಾನ ಟ್ರಸ್ಟ್

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂಪಾಯಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ, ಧಾರ್ಮಿಕ ಪ್ರವಾಸೋದ್ಯಮದಲ್ಲಿ ಏರಿಕೆಯಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್‌ ಭಾನುವಾರ ತಿಳಿಸಿದ್ದಾರೆ. ಈ ಮೊತ್ತವನ್ನು ಫೆಬ್ರವರಿ 5, 2020 ಮತ್ತು ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಟ್ರಸ್ಟ್ … Continued

ಏಪ್ರಿಲ್ 2 ರಿಂದ ಭಾರತ, ಚೀನಾ ಸರಕುಗಳ ಮೇಲೆ ಪ್ರತಿ ಸುಂಕ ; ಅಮೆರಿಕ ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಅಮೆರಿಕನ್ನರಿಗೆ ಅನ್ಯಾಯವಾಗುವ ವ್ಯಾಪಾರ ನೀತಿಗಳನ್ನು ಜಾರಿಗೆ ತಂದಿದ್ದಕ್ಕಾಗಿ” ಭಾರತ ಸೇರಿದಂತೆ ಅಮೆರಿಕದ ಬಹುತೇಕ ವ್ಯಾಪಾರ ಪಾಲುದಾರರ ಮೇಲೆ ಏಪ್ರಿಲ್ 2 ರಿಂದ ಸುಂಕವನ್ನು ವಿಧಿಸುವುದಾಗಿ ಹೇಳಿದ್ದಾರೆ. ಕೆನಡಾ ಮತ್ತು ಮೆಕ್ಸಿಕೊ ದೇಶಗಳ ಆಮದುಗಳ ಮೇಲಿನ ಟ್ರಂಪ್‌ ಅವರು ಹೊಸದಾಗಿ ವಿಧಿಸಿರುವ 25% ಸುಂಕಗಳು ಜಾರಿಗೆ ಬಂದ … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued