ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ … Continued

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ … Continued

ರಸ್ತೆಯಲ್ಲಿ ಬೆನ್ನಟ್ಟಿ ಬಂದು ಶಿಕ್ಷಕಿಯ ತುಟಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ…!

ಮೈನ್‌ಪುರಿ (ಉತ್ತರ ಪ್ರದೇಶ): ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಂಬಂಧಿಸಿದಂತೆ ತಲೆತಗ್ಗಿಸುವಂತಹ ಘಟನೆಯೊಂದು ಉತ್ತರ ಪ್ರದೇಶದ ಮೈನಪುರಿಯಲ್ಲಿ ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಕೆಲಸ ಬಿಟ್ಟಿದ್ದ ಶಿಕ್ಷಕಿಯನ್ನು ಬೆನ್ನಟ್ಟಿದ ವಿದ್ಯಾರ್ಥಿ, ಜನವರಿ 26ರಂದು  ಹಲ್ಲೆ ನಡೆಸಿ ಆಕೆಯ ಎರಡು ತುಟಿಗಳನ್ನು ಕತ್ತರಿಸಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಆಗ್ರಾ … Continued

ತರಗತಿಯಲ್ಲಿ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕ ; ಊಟದ ಡಬ್ಬಿಯಲ್ಲಿ ಪಿಸ್ತೂಲ್‌ ತಂದು ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ…!!

ಡೆಹ್ರಾಡೂನ್: ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಗಂಗನ್‌ದೀಪ್ ಸಿಂಗ್ ಕೊಹ್ಲಿ ಎಂಬ ಶಿಕ್ಷಕರು ಭೌತಶಾಸ್ತ್ರ ಬೋಧಿಸುತ್ತಿದ್ದಾಗ ತಮ್ಮ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದರು. ಬುಧವಾರ, ಅದೇ ವಿದ್ಯಾರ್ಥಿ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಬಂದೂಕನ್ನು ತಂದು ಕೊಹ್ಲಿಯ ಬೆನ್ನಿಗೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುನಾನಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನ … Continued

‘ಹ್ಯಾಂಡ್‌ ರೈಟಿಂಗ್‌’ ಚೆನ್ನಾಗಿಲ್ಲವೆಂದು 8 ವರ್ಷದ ಬಾಲಕನ ಕೈ ಸುಟ್ಟ ಶಿಕ್ಷಕಿ…!

ಮುಂಬೈ: ಮಕ್ಕಳ ಮೇಲಿನ ದೌರ್ಜನ್ಯದ ಭಯಾನಕ ಪ್ರಕರಣವೊಂದರಲ್ಲಿ, ಮುಂಬೈನ ಮಲಾಡ್ ಪ್ರದೇಶದ ಖಾಸಗಿ ಟ್ಯೂಷನ್ ಶಿಕ್ಷಕಿಯೊಬ್ಬಳು ಕೈಬರಹ (handwriting) ಚೆನ್ನಾಗಿಲ್ಲವೆಂದು ಎಂಟು ವರ್ಷದ ಬಾಲಕನ ಕೈಯನ್ನು ಸುಟ್ಟ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾಳೆ. ರಾಜಶ್ರೀ ರಾಥೋಡ ಎಂದು ಗುರುತಿಸಲ್ಪಟ್ಟ ಆರೋಪಿ ಶಿಕ್ಷಕಿ ಶಿಕ್ಷೆಯ ಭಾಗವಾಗಿ ಉರಿಯುತ್ತಿರುವ ಮೇಣದಬತ್ತಿಯನ್ನು ಅಂಗೈ ಮೇಲೆ ಇಟ್ಟಿದ್ದರಿಂದ ಮಗುವಿನ ಕೈ ತೀವ್ರವಾಗಿ ಸುಟ್ಟುಹೋಗಿದೆ … Continued

ಶಿಕ್ಷಕನಿಂದ ಲೈಂಗಿಕ ಕಿರುಕುಳ : ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ…!

ಬಾಲೇಶ್ವರ: ಒಡಿಶಾದ ಬಾಲಸೋರ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ನಗರವನ್ನೇ ಬೆಚ್ಚಿಬೀಳಿಸಿದೆ. ಫಕೀರ್ ಮೋಹನ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಕಾಲೇಜಿನ ಶಿಕ್ಷಕನ ದೀರ್ಘಕಾಲದ ಕಿರುಕುಳದಿಂದಾಗಿ ಹತಾಶಳಾದ ವಿದ್ಯಾರ್ಥಿನಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಘಟನೆ ಕಾಲೇಜಿನ ಹೊರಗೆ ಅಳವಡಿಸಲಾದ ಸಿಸಿಟಿವಿ … Continued

ಬೆಂಗಳೂರು | ಉದ್ಯಮಿ ಹನಿಟ್ರ್ಯಾಪ್ ಪ್ರಕರಣ ; ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಆರೋಪ ; ಪ್ರಿಸ್ಕೂಲ್ ಶಿಕ್ಷಕಿ, ಇಬ್ಬರ ಬಂಧನ

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಶಿಶುವಿಹಾರದ ಶಿಕ್ಷಕಿ ಸೇರಿದಂತೆ ಮೂವರನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ ಶಿಶುವಿಹಾರ (ಪ್ರಿ ಸ್ಕೂಲ್‌)ದ ಮಗುವಿನ ತಂದೆಯಿಂದ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 25 ವರ್ಷದ ಶ್ರೀದೇವಿ ರೂಡಗಿ ಮತ್ತು ಗಣೇಶ ಕಾಳೆ (38) … Continued

ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued

ಬೆಂಗಳೂರು | ವಿದ್ಯಾರ್ಥಿಯ ಹಲ್ಲು ಮುರಿದ ಶಿಕ್ಷಕಿ : ಪ್ರಕರಣ ದಾಖಲು

ಬೆಂಗಳೂರು: ಶಾಲಾ ಕೊಠಡಿಯಲ್ಲಿ ಸಹಪಾಠಿಗಳ ಜತೆ ಆಟವಾಡುತ್ತಾ ನೀರು ಚೆಲ್ಲಿ ಗಲೀಜು ಮಾಡಿದ ಕಾರಣಕ್ಕೆ ಕೋಪಗೊಂಡ ಶಿಕ್ಷಕಿಯೊಬ್ಬರನ್ನು ವಿದ್ಯಾರ್ಥಿಯನ್ನು ಥಳಿಸಿದ್ದರಿಂದ ಆತನ ಹಲ್ಲು ಮುರಿದ ಆರೋಪ ಕೇಳಿ ಬಂದಿದ್ದು, ಈಗ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜಯನಗರ ನಾಲ್ಕನೇ ಬ್ಲಾಕ್‌ ನಿವಾಸಿಯಾಗಿರುವ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದು, ಆತ … Continued

ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಜಾನನ ಹಿರೇಮಠ (46) ಎಂಬವರು ಮೃತ ಶಿಕ್ಷಕರಾಗಿದ್ದಾರೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ … Continued