ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಟೀಂ ಇಂಡಿಯಾದ ( ಪುರುಷರು) ಕೋಚಿಂಗ್ ಸಿಬ್ಬಂದಿ ಗುತ್ತಿಗೆ ವಿಸ್ತರಿಸುವುದಾಗಿ ಪ್ರಕಟಿಸಿದ್ದು, ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಸಿಬ್ಬಂದಿಯ ಇತರ … Continued

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಿಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತೀಯರ ಮನಗೆದ್ದಿದ್ದ ವೇಗಿ ಮೊಹಮ್ಮದ್ ಶಮಿ ನೈನಿತಾಲ್‌ನಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಮಿ ಶನಿವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವೀಡಿಯೊ ಹಂಚಿಕೊಂಡಿದ್ದಾರೆ. ತಾನು ಮತ್ತು ತನ್ನ ಜೊತೆಗಿದ್ದ ಕೆಲವರು ಜೊತೆಗೂಡಿ ಬೆಟ್ಟದಲ್ಲಿ ಕೆಳಗಿಳಿದು ಅಪಘಾತದಲ್ಲಿ ಬೆಟ್ಟದಿಂದ ಕೆಳಗೆ ಬಿದ್ದಿದ್ದ ಕಾರಿನ … Continued