ಕ್ರಿಕೆಟ್‌ | ಭಾರತದ ತಂಡಕ್ಕೆ ಮತ್ತೊಬ್ಬ ದ್ರಾವಿಡ್‌ ಎಂಟ್ರಿ : ಭಾರತದ ಅಂಡರ್-19 ತಂಡಕ್ಕೆ ರಾಹುಲ್‌ ದ್ರಾವಿಡ್‌ ಕಿರಿಯ ಪುತ್ರ ಆಯ್ಕೆ

ಭಾರತೀಯ ಕ್ರಿಕೆಟ್‌ನ ದಿಗ್ಗಜ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ, ವಿಕೆಟ್‌ಕೀಪರ್-ಬ್ಯಾಟರ್ ಅನ್ವಯ ದ್ರಾವಿಡ್ ಮುಂದಿನ ತಿಂಗಳು ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಎಸ್‌. ಶ್ರೀಧರನ್ ನೇತೃತ್ವದ ಜೂನಿಯರ್ ಕ್ರಿಕೆಟ್ ಆಯ್ಕೆ ಸಮಿತಿಯು ಗುರುವಾರ ಈ ಸರಣಿಗಾಗಿ ಏಕದಿನ ಮತ್ತು ಟೆಸ್ಟ್ (ಮಲ್ಟಿ-ಡೇ) … Continued

ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್‌ ಗಿಲ್ ನಾಯಕ

ಮುಂಬೈ: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ ನೇತೃತ್ವದ ಆಯ್ಕೆ ಸಮಿತಿಯು ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಎರಡೂ ಸರಣಿಗಳಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿ ನೀಡಿದೆ. ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿರುವುದು … Continued

ಟಿ20 ವಿಶ್ವಕಪ್ 2026 : ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ; ತವರಿನಲ್ಲಿ ವಿಶ್ವಕಪ್‌ ಪ್ರಶಸ್ತಿ ಗೆದ್ದ ಮೊದಲ ದೇಶ

ಅಹಮದಾಬಾದ್‌ : ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಉಳಿಸಿಕೊಂಡ ಮೊದಲ ತಂಡ ಮತ್ತು ಮೂರನೇ ಬಾರಿಗೆ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ … Continued

ಟಿ20 ವಿಶ್ವಕಪ್‌ 2026 ; ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್‌ ಸೋಲಿಸಿ ಭಾರತ ಫೈನಲ್‌ಗೆ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಹೈ-ವೋಲ್ಟೇಜ್ ಸೆಮಿ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಮ್ ಇಂಡಿಯಾ, 2026ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಟಿ20 ವಿಶ್ವಕಪ್ ಇತಿಹಾಸದ … Continued

ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಟಿ20 ವಿಶ್ವಕಪ್ : ತುರ್ತು ಕಾರಣಕ್ಕೆ ಮನೆಗೆ ತೆರಳಿದ ಬ್ಯಾಟರ್‌ ರಿಂಕು ಸಿಂಗ್‌ ; ಜಿಂಬಾವ್ವೆ ವಿರುದ್ಧ ಆಡುವುದು ಅನುಮಾನ

ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರು ಕುಟುಂಬದಲ್ಲಿ ಎದುರಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ತಂಡವನ್ನು ಅರ್ಧದಲ್ಲೇ ಬಿಟ್ಟು ಮನೆಗೆ ಮರಳಿದ್ದಾರೆ. ಫೆಬ್ರವರಿ 23ರಂದು ತಂಡದೊಂದಿಗೆ ಚೆನ್ನೈಗೆ ಪ್ರಯಾಣಿಸಿದ್ದ ರಿಂಕು, ಮಂಗಳವಾರ ಬೆಳಿಗ್ಗೆಯೇ ಅಲ್ಲಿಂದ ಹೊರಟಿದ್ದಾರೆ. ಫೆಬ್ರವರಿ 26ರಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯುವುದು ಅನುಮಾನ … Continued

ಟಿ20 ವಿಶ್ವಕಪ್ 2026 : ದಕ್ಷಿಣ ಆಫ್ರಿಕಾ ವಿರುದ್ಧ ಭಾರೀ ಸೋಲು : ಸೆಮಿಫೈನಲ್ ತಲುಪಲು ಭಾರತದ ಮುಂದಿರುವ ಲೆಕ್ಕಾಚಾರಗಳೇನು..?

ಅಹ್ಮದಾಬಾದ್‌ನ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿದ ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಈಗ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಾಗಿದೆ. ಈ ಸೋಲು ಕೇವಲ ಒಂದು ಪಂದ್ಯದ ಸೋಲಲ್ಲ, ಬದಲಾಗಿ ಭಾರತದ ನೆಟ್ ರನ್ ರೇಟ್ (NRR) ಅನ್ನು ಪಾತಾಳಕ್ಕೆ (-3.800) … Continued

ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೊಲಂಬೊ: ಭಾನುವಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ಪಾಕಿಸ್ತಾನ ಮಣಿದಿದೆ. ಪಾಕ್ ವಿರುದ್ಧ 61 ರನ್‌ಗಳ ಬೃಹತ್ ಜಯ ದಾಖಲಿಸಿದ ಭಾರತ, ಟಿ20 ವಿಶ್ವಕಪ್‌ನ ಸೂಪರ್-8 ಹಂತವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿದೆ. ಈ ಗೆಲುವಿನ ಮೂಲಕ ಟಿ20 ವಿಶ್ವಕಪ್ … Continued

ಟಿ20 ವಿಶ್ವಕಪ್ | ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅಭಿಷೇಕ ಶರ್ಮಾ ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಅಭಿಷೇಕ ಶರ್ಮಾ ಅವರು ತೀವ್ರವಾದ ಹೊಟ್ಟೆ ನೋವಿನ ಸೋಂಕಿನಿಂದಾಗಿ (Stomach Infection) ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಗುರುವಾರ ನಡೆಯಲಿರುವ ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಮೆರಿಕ ವಿರುದ್ಧದ ಪಂದ್ಯಕ್ಕೂ ಮುನ್ನವೇ ಅಭಿಷೇಕ ಅವರು ಅಸ್ವಸ್ಥರಾಗಿದ್ದರು. ಪಂದ್ಯದ … Continued