ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ತೆಲಂಗಾಣ ಚುನಾವಣೆಗೆ ಮುನ್ನ ಬಿಆರ್‌ಎಸ್ ಗೆ ಸಂಸದ ಡಾ.ರಂಜಿತ್ ರೆಡ್ಡಿ ರಾಜೀನಾಮೆ: ಕಾಂಗ್ರೆಸ್ಸಿಗೆ ಸೇರ್ಪಡೆ

ಹೈದರಾಬಾದ್‌ : ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್‌ಎಸ್) ಮತ್ತೊಂದು ಹಿನ್ನಡೆಯಾಗಿದ್ದು, ಸಂಸದ (ಎಂಪಿ) ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಹಾಗೂ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಬಿಆರ್‌ಎಸ್‌ಗೆ ರಾಜೀನಾಮೆ ನೀಡಲು ರಾಜಕೀಯ ಸನ್ನಿವೇಶಗಳು ಕಾರಣ ಎಂದು ಹೇಳಿದ್ದಾರೆ. X ನಲ್ಲಿ ಅವರು, “ವಿಕಸನಗೊಳ್ಳುತ್ತಿರುವ ರಾಜಕೀಯ ಪರಿಸ್ಥಿತಿಗಳಿಂದಾಗಿ, … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ಪ್ರಧಾನಿ ಮೋದಿ ‘ನನ್ನ ದೊಡ್ಡಣ್ಣ’ ಎಂದು ಬಣ್ಣಿಸಿದ ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಸಿಎಂ : ಮೋದಿ ಜೊತೆ ರೇವಂತ ರೆಡ್ಡಿ ʼಸ್ನೇಹಪರತೆʼ ಮಾತು ಚರ್ಚೆಗೆ ಗ್ರಾಸ

ಆದಿಲಾಬಾದ್‌ : ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಸೋಮವಾರ ಪ್ರಧಾನಿ ಮೋದಿಯನ್ನು ತಮ್ಮ ʼದೊಡ್ಡಣ್ಣʼ ಎಂದು ಬಣ್ಣಿಸಿದ್ದಾರೆ…! ಸೋಮವಾರ ತೆಲಂಗಾಣದ ಆದಿಲಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 56,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳ ಉದ್ಘಾಟನೆಯಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ರೇವಂತ ರೆಡ್ಡಿ ನಡುವಿನ ಬಾಂಧವ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. … Continued

ಕ್ಲಿನಿಕ್ ನಲ್ಲಿ ‘ಸ್ಮೈಲ್ ಡಿಸೈನಿಂಗ್’ ಸರ್ಜರಿ ವೇಳೆ 28 ವರ್ಷದ ಮದುವೆ ಗಂಡು ಸಾವು

ಹೈದರಾಬಾದ್‌ : ತನ್ನ ಮದುವೆಗೆ ತಯಾರಿ ನಡೆಸುತ್ತಿದ್ದ ಹೈದರಾಬಾದಿನ 28 ವರ್ಷದ ಯುವಕನೊಬ್ಬ ದಂತ ಚಿಕಿತ್ಸಾಲಯದಲ್ಲಿ ಮಿತಿಮೀರಿದ ಅನಸ್ತೇಷಿಯಾ ಡೋಸ್‌ ನೀಡಿದ್ದರಿಂದ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 16 ರಂದು ಈ ಘಟನೆ ಸಂಭವಿಸಿದ್ದು, ಆ ವ್ಯಕ್ತಿ ತನ್ನ ಮದುವೆಗೆ ಮುಂಚಿತವಾಗಿ ತನ್ನ ಮುಖದ ನಗುವನ್ನು ಹೆಚ್ಚಿಸುವ ಶಸ್ತ್ರ ಚಿಕಿತ್ಸೆಗೆ ದಂತ ಚಿಕಿತ್ಸಾಲಯಕ್ಕೆ ದಾಖಲಾದ ನಂತರ … Continued

ತೆಲಂಗಾಣ ಅಧಿಕಾರಿಯ ಮನೆ, ಕಚೇರಿಗಳಲ್ಲಿ ₹ 100 ಕೋಟಿಗೂ ಅಧಿಕ ಆಸ್ತಿ ಪತ್ತೆ

ಹೈದರಾಬಾದ್: ತೆಲಂಗಾಣ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಟಿಎಸ್‌ಆರ್‌ಇಆರ್‌ಎ) ಕಾರ್ಯದರ್ಶಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಎಚ್‌ಎಂಡಿಎ) ಮಾಜಿ ನಿರ್ದೇಶಕ ಶಿವ ಬಾಲಕೃಷ್ಣ ಅವರ ಒಟ್ಟು ₹ 100 ಕೋಟಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಪತ್ತೆ ಮಾಡಿದೆ. ಎಸಿಬಿಯ ಪ್ರಾಥಮಿಕ ತನಿಖೆಗಳು ಶಿವ ಬಾಲಕೃಷ್ಣ ಹಲವಾರು ರಿಯಲ್ … Continued

ವಧುವಿನ ಕಡೆಯವರು ನೀಡಿದ ಊಟದಲ್ಲಿ ಮಟನ್‌ ಇಲ್ಲವೆಂದು ಮದುವೆಯನ್ನೇ ಮುರಿದುಕೊಂಡ ವರನ ಕುಟುಂಬ…!

ಹೈದರಾಬಾದ್: ತೆಲಂಗಾಣದಲ್ಲಿ ವಧುವಿನ ಸಂಬಂಧಿಕರು ನೀಡುವ ಊಟದ ಮೆನುವಿನಲ್ಲಿ ಮಟನ್ ತಿನಿಸನ್ನು ಸೇರಿಸದೇ ಇದ್ದುದಕ್ಕಾಗಿ ವರನ ಕುಟುಂಬದವರು ಕೋಪಗೊಂಡು ಮದುವೆಯನ್ನೇ ರದ್ದುಪಡಿಸಿದ ಘಟನೆ ನಡೆದಿರುವುದು ವರದಿಯಾಗಿದೆ…! ವಧು ನಿಜಾಮಾಬಾದ್ ನಿವಾಸಿಯಾಗಿದ್ದು, ವರ ಜಗತಿಯಾಲ್ ಮೂಲದವರು. ಇವರಿಬ್ಬರ ನಿಶ್ಚಿತಾರ್ಥ ವಧುವಿನ ನಿವಾಸದಲ್ಲಿ ನಡೆದಿತ್ತು. ಆದರೆ ಮೆನುವಿನಲ್ಲಿ ಮಟನ್‌ ಇಲ್ಲದ ಕಾರಣ ಅದರ ಬಗ್ಗೆ ವಾಗ್ವಾದ ನಡೆದು ನಂತರ … Continued

ಆಸ್ತಿ ಕಬಳಿಸಲು ಒಂದೇ ಕುಟುಂಬದ 6 ಮಂದಿ ಹತ್ಯೆ

ಹೈದರಾಬಾದ್‌ : ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಮಕ್ಲೂರು ಗ್ರಾಮದಲ್ಲಿ ಒಂದು ವಾರದ ಅವಧಿಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಆಸ್ತಿ ವಿಚಾರವಾಗಿ ಹತ್ಯೆ ಮಾಡಲಾಗಿದೆ. ಪ್ರಮುಖ ಆರೋಪಿ ಮಕ್ಲೂರು ಮೂಲದ ಪ್ರಶಾಂತ (20) ಕೊಲೆಗೈದ ಶಂಕಿತ ಆರೋಪಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಮರೆಡ್ಡಿ ಜಿಲ್ಲೆಯ ಸದಾಶಿವನಗರದಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾದ ನಂತರ ಅಧಿಕಾರಿಗಳು … Continued

ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ … Continued