ಪೊಲಿಸ್‌ ಎನ್‌ಕೌಂಟರ್‌ ನಲ್ಲಿ ಉನ್ನತ ಕಮಾಂಡರ್‌ ಸೇರಿ 7 ನಕ್ಸಲರು ಸಾವು

ಹೈದರಾಬಾದ್‌: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು, ಭಾನುವಾರ ಬೆಳಗ್ಗೆ ಪೊಲೀಸರು ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು (Naxal Encounter). ಹೊಡೆದುರುಳಿಸಿದ್ದಾರೆ. ಪೊಲೀಸ್ ಮಾಹಿತಿ ನೀಡುತ್ತಿದ್ದರು ಎಂಬ ಅನುಮಾನದ ಮೇಲೆ ಇಬ್ಬರು ಬುಡಕಟ್ಟು ಜನರನ್ನು ಮಾವೋವಾದಿಗಳು ಬರ್ಬರವಾಗಿ ಕೊಂದ ನಂತರ ನಕ್ಸಲ್‌ ವಿರೋಧಿ ಕಾರ್ಯಾಚರಣೆ ಚುರುಕುಗೊಂಡಿತ್ತು ಚಲ್ಬಾಕ್‌ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued

ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ

ಭದ್ರಾದ್ರಿ ಕೊತಗುಡೆಂ (ತೆಲಂಗಾಣ): ಕರಕಗೂಡು ಮಂಡಲದ ರಘುನಾಥಪಾಲೆಂ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಮಾವೋವಾದಿ ಪೀಡಿತ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ತೆಲಂಗಾಣ ಪೊಲೀಸರ ಗಣ್ಯ ನಕ್ಸಲ್ ವಿರೋಧಿ ಪಡೆಯ … Continued

ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!

ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್‌ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued

ಜಿಪಿಎಸ್ ಸಿಗ್ನಲ್ ಸಿಗದೆ ಸೌದಿ ಅರೇಬಿಯಾ ಮರುಭೂಮಿಯಲ್ಲಿ ಜೀವ ಕಳೆದುಕೊಂಡ ತೆಲಂಗಾಣ ವ್ಯಕ್ತಿ, ಸಹೋದ್ಯೋಗಿ

ಹೈದರಾಬಾದ್: ಸೌದಿ ಅರೇಬಿಯಾದ ರಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವಿಗೀಡಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಮೂರು ವರ್ಷಗಳಿಂದ ಟೆಲ್ಕಾಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಎಂಬವರು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ … Continued

ʼನವಿಲು ಕರಿʼ ವೀಡಿಯೊ ವೈರಲ್‌ ಆದ ನಂತರ ತೆಲಂಗಾಣ ಯೂ ಟ್ಯೂಬರ್ ಬಂಧನ

ತೆಲಂಗಾಣದ ಸಿರ್ಸಿಲ್ಲಾದ ಯೂಟ್ಯೂಬರ್‌ ನನ್ನು ಭಾನುವಾರ ಬಂಧಿಸಲಾಗಿದ್ದು, ಭಾರತದ ರಾಷ್ಟ್ರೀಯ ಪಕ್ಷಿಯಾದ ‘ನವಿಲು ಕರಿ’ ತಯಾರಿಸಿ ಸೇವಿಸುತ್ತಿರುವ ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಕೋಡಂ ಪ್ರಣಯಕುಮಾರ ಪೋಸ್ಟ್ ಮಾಡಿದ ವೀಡಿಯೊ ವೈರಲ್‌ ಆದ ಬೆನ್ನಿಗೇ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು. ಆತನನ್ನು ಬಂಧಿಸಲಾಗಿದೆ. ಆತ ಯೂಟ್ಯೂಬನಲ್ಲಿ ನವಿಲು ಕರಿಯ ಸಂಪ್ರದಾಯಿಕ ವಿಧಾನ … Continued

ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued

ನೇಣು ಬಿಗಿದುಕೊಂಡು ಕಾಂಗ್ರೆಸ್‌ ಶಾಸಕನ ಪತ್ನಿ ಆತ್ಮಹತ್ಯೆ…!?

ಕರೀಂನಗರ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾ ದೇವಿ ಅವರು ಜೂನ್ 20 ಶುಕ್ರವಾರ ತಡರಾತ್ರಿ ಅಲ್ವಾಲ್‌ನ ಪಂಚಶೀಲ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸತ್ಯಂ ಅವರು ಹಿಂದಿನ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದಲ್ಲಿದ್ದರು. ಮೂಲಗಳ ಪ್ರಕಾರ ರೂಪಾ ದೇವಿ … Continued

ವಾಟ್ಸಾಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ಬಂಧನ

ಅದಿಲಾಬಾದ್ (ತೆಲಂಗಾಣ): ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ನಿಷೇಧಿತ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿಯನ್ನು ಆದಿಲಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಬ್ದುಲ್ ಅತೀಕ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಿಲಾಬಾದ್‌ನ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಿ ಶ್ರೀನಿವಾಸ್ ಪ್ರಕಾರ, ಅತೀಕ್ 2017 ರಲ್ಲಿ ಜಾಸ್ಮಿನ್ (28) ಎಂಬ ಹುಡುಗಿಯನ್ನು … Continued

ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಹೈದರಾಬಾದ್: ತೆಲಂಗಾಣ ಪೊಲೀಸರು ರೋಹಿತ್ ವೇಮುಲ (Rohith Vemula) ಸಾವಿನ ಪ್ರಕರಣವನ್ನು ಶುಕ್ರವಾರ ಮುಕ್ತಾಯಗೊಳಿಸಿದ್ದಾರೆ. ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ರೋಹಿತ್ ವೇಮುಲ ದಲಿತನೇ ಅಲ್ಲ. ಆತ ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು … Continued