ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ವೀಡಿಯೊ..| ಆನೇಕಲ್ : ಉರುಳಿಬಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ ತೇರು; ಓರ್ವ ಸಾವು, ಕೆಲವರಿಗೆ ಗಾಯ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ಬೃಹತ್‌ ತೇರು ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದೆ. 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ … Continued

ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು. ಹಲವು ವರ್ಷಗಳಿಂದ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯಕ್ಕೆ ಹಾನಿ, ಭಾರತ ವಿರೋಧಿ ಬರಹ ಗೀಚಿ ವಿರೂಪ

ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ ಬಾಪ್ಸ್‌ (BAPS) ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು, ಮಂದಿರಕ್ಕೆ ಹಾನಿ ಮಾಡಿದ ಘಟನೆ ಭಾನುವಾರ ನಡೆದಿದೆ. ಇದು ಅಮೆರಿಕದಲ್ಲಿ ಹಿಂದೂ ಸಮುದಾಯದ ವಿರುದ್ಧ ದ್ವೇಷದ ಅಪರಾಧಗಳ ಮತ್ತೊಂದು ಉದಾಹರಣೆಯಾಗಿದೆ. ಕ್ಯಾಲಿಫೋರ್ನಿಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯ ದೇವಾಲಯಕ್ಕೆ ಹಾನಿ ಮಾಡಲಾಗಿದೆ. ಬೋಚಸನ್ವಾಸಿ … Continued

ದಕ್ಷಿಣ ಆಫ್ರಿಕಾದಲ್ಲಿ ಅನಾವರಣಗೊಂಡ ಭೂಮಿಯ ದಕ್ಷಿಣ ಗೋಳಾರ್ಧದ ಅತಿದೊಡ್ಡ ಹಿಂದೂ ದೇವಾಲಯ…!

ಜೋಹಾನ್ಸ್‌ಬರ್ಗ್: ಭೂಮಿಯ ದಕ್ಷಿಣ ಗೋಳಾರ್ಧದಲ್ಲಿ ಅತಿದೊಡ್ಡ ಹಿಂದೂ ದೇವಾಲಯ ಮತ್ತು ಸಾಂಸ್ಕೃತಿಕ ಸಂಕೀರ್ಣವನ್ನು ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ ಅನಾವರಣಗೊಳಿಸಲಾಯಿತು. ದಕ್ಷಿಣ ಆಫ್ರಿಕಾದವರಲ್ಲಿ ಶೇಕಡಾ ಎರಡಕ್ಕಿಂತ ಕಡಿಮೆ ಜನರು ಹಿಂದೂ ಎಂದು ಗುರುತಿಸಿಕೊಂಡಿದ್ದರೂ, ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯದಲ್ಲಿ ಹಿಂದೂ ಧರ್ಮ ಹೆಚ್ಚು ಅನುಸರಿಸುವ ಧರ್ಮವಾಗಿದೆ. ಈ ಸಂದರ್ಭಕ್ಕಾಗಿ ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ಬಂದಿರುವ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ … Continued

ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್‌ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued

ಕುಮಟಾ : ಹೆಗಲೆಯಲ್ಲಿ ಐದು ದಿನಗಳ ಕಾಲ ನಡೆದ ಅಪರೂಪದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ) ಸಂಪನ್ನ

ಕುಮಟಾ : ಭಾರತ ದೇಶದ ಇತಿಹಾಸದಲ್ಲೇ ಬೆರಳೆಣಿಕೆಯಷ್ಟು ಬಾರಿ ನಡೆದಿರುವ ಹಾಗೂ ಅಪರೂಪದಲ್ಲಿ ಅಪರೂಪ ಎನ್ನಬಹುದಾದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ)’ವು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಲೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಭಾನುವಾರ ಸಂಪನ್ನಗೊಂಡಿದೆ. ಜನವರಿ ೨೪ರಿಂದ ಜನವರಿ ೨೮ರ ಭಾನುವಾರದ ವರೆಗೆ ನಡೆದ ‘ಅಯುತ ಚಂಡಿಕಾ ಮಹಾಯಾಗ’ವನ್ನು ಒಂದೇ … Continued

ವಾರಾಣಸಿ ಜ್ಞಾನವಾಪಿ ಮಸೀದಿಗೂ ನಿರ್ಮಾಣಕ್ಕೂ ಮುನ್ನ ಅಲ್ಲಿ ಬೃಹತ್ ಹಿಂದೂ ದೇಗುಲವಿತ್ತು: ಎಎಸ್ಐ ಸರ್ವೆಯಲ್ಲಿ ಉಲ್ಲೇಖ-ವಕೀಲ ವಿಷ್ಣು ಶಂಕರ ಜೈನ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಸಮೀಕ್ಷೆಯು ವಿವಿಧ ಭಾಷೆಗಳಲ್ಲಿ 34 ಶಾಸನಗಳು ಇದ್ದ ದೇವಾಲಯ ಇತ್ತೆಂದು ಬಹಿರಂಗಪಡಿಸಿದೆ, ಅದನ್ನು ಮಸೀದಿಯಾಗಿ ಮರುರೂಪಿಸಲಾಗಿದೆ ಎಂದು ಮಹಿಳಾ ಅರ್ಜಿದಾರರ ವಕೀಲರಾದ ವಿಷ್ಣು ಜೈನ್ ಅವರು ಸಮೀಕ್ಷೆಯ ವರದಿಯ ಹಾರ್ಡ್ ಕಾಪಿ ಸ್ವೀಕರಿಸಿದ ನಂತರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾರಾಣಸಿ ಜಿಲ್ಲಾ ನ್ಯಾಯಾಧೀಶರು ಪ್ರಕರಣದ ಸೂಕ್ಷ್ಮತೆಯ ದೃಷ್ಟಿಯಿಂದ ಸಾಮಾಜಿಕ … Continued

ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ … Continued