ಪಾಕಿಸ್ತಾನದಲ್ಲಿ 100 ವರ್ಷಗಳಿಗೂ ಹಳೆಯ ಹಿಂದೂ ದೇವಾಲಯ ಧ್ವಂಸ : ವರದಿ

ಇಸ್ಲಾಮಾಬಾದ್: ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಸುಮಾರು 100ರಿಂದ 125 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವೊಂದನ್ನು ಧ್ವಂಸಗೊಳಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಂಘಟನೆಗಳು, ಸ್ಥಳೀಯ ನಿವಾಸಿಗಳು ಹಾಗೂ ರಾಜಕೀಯ ಪಕ್ಷಗಳು ತನಿಖೆಗೆ ಆಗ್ರಹಿಸಿವೆ. ಅಲ್ಲದೆ ದೇವಾಲಯವನ್ನು ಮೂಲ ಸ್ವರೂಪದಲ್ಲಿ ಪುನರ್‌ನಿರ್ಮಿಸಿ, ಅದರ ಭೂಮಿಯ ಮೇಲಿನ  ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಶೆಹಬಾಜ್ ಶರೀಫ್ ನೇತೃತ್ವದ  ಸರ್ಕಾರವನ್ನು ಒತ್ತಾಯಿಸಿವೆ. … Continued

ಶಿಗ್ಗಾವಿ | ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಆರೋಪ; ವ್ಯಕ್ತಿಯ ಬಂಧನ

ಶಿಗ್ಗಾವಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶಿಗ್ಗಾವಿ ಪಟ್ಟಣದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಪಟ್ಟಣದ ನಿವಾಸಿ ಎನ್ನಲಾಗಿರುವ ಮಹಮ್ಮದ್ ಜಾಫರ್ ಖದರಮಂಡಲಗಿ ಎಂಬಾತನ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು … Continued

ದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪವಿತ್ರ ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಶಿವನ ದರ್ಶನ ಹಾಗೂ ಪೂಜೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಜಿಲ್ಲಾಧಿಕಾರಿ … Continued

ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ

ಸಾಂಗ್ಲಿ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವಸ್ಥಾನದ ಗೋಡೆ ಕುಸಿದು ಆರು ಮಂದಿ ಭಕ್ತರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಮೋಟೇವಾಡಿ ಗ್ರಾಮದಲ್ಲಿ ಮರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಮಂಗಳವಾರ ಸಂಜೆ ದೇವಸ್ಥಾನದಲ್ಲಿ ಸುಮಾರು 350ಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರು. ಈ … Continued

ವೀಡಿಯೊ…| ಸಿಂಹ ದೇವಸ್ಥಾನ ಕಾಯುತ್ತಿದೆಯೇ..? ಅದ್ಭುತ ವೀಡಿಯೊ ವೈರಲ್‌-ವೀಕ್ಷಿಸಿ

ದೇವಾಲಯದ ಹೊರಗೆ ಶಾಂತವಾಗಿ ವಿಶ್ರಾಂತಿ ಪಡೆಯುತ್ತಿರುವ ಸಿಂಹಿಣಿಯ ಅದ್ಭುತ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್‌ ಆಗಿದೆ. ನವರಾತ್ರಿಯ ಹಿಂದೂ ಹಬ್ಬದ ಸಮಯದಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ ಪವಿತ್ರ ದೇವಾಲಯದ ಹೊರಗೆ ಸಿಂಹಿಣಿಯ ವಿಶ್ರಾಂತಿ ಪಡೆಯುತ್ತಿರುವ ಭಂಗಿಯು ಆ ಸಿಂಹವು ದೇವಾಲಯವನ್ನು “ಕಾವಲು ಕಾಯುತ್ತಿದೆ” ಎಂಬ ಊಹಾಪೋಹಕ್ಕೆ ಕಾರಣವಾಗಿದೆ. ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ … Continued

‘ಮಕ್ಕಳು ನನ್ನನ್ನು ಅವಮಾನಿಸಿದರು…’: ನೊಂದ ನಿವೃತ್ತ ಸೇನಾಧಿಕಾರಿಯಿಂದ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿ ದಾನ

ಅಚ್ಚರಿಯ ನಡೆಯಲ್ಲಿ, ತಮ್ಮ ಹೆಣ್ಣುಮಕ್ಕಳು ಪಿತ್ರಾರ್ಜಿತ ಆಸ್ತಿಗಾಗಿ ತಮ್ಮನ್ನು ಅವಮಾನಿಸಿದ್ದಾರೆ ಎಂಬ ಆರೋಪಿಸಿದ ನಂತರ 65 ವರ್ಷದ ನಿವೃತ್ತ ಸೇನಾಧಿಕಾರಿಯೊಬ್ಬರು ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಳ್ ಅಮ್ಮನ್ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳಿಂದ ವರ್ಷಗಳಿಂದ ಕಡೆಗಣಿಸಲ್ಪಟ್ಟ ನಂತರ ತೀವ್ರವಾಗಿ ನೊಂದು ನಿವೃತ್ತ … Continued

ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ವೀಡಿಯೊ..| ಆನೇಕಲ್ : ಉರುಳಿಬಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ ತೇರು; ಓರ್ವ ಸಾವು, ಕೆಲವರಿಗೆ ಗಾಯ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ಬೃಹತ್‌ ತೇರು ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದೆ. 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ … Continued

ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು. ಹಲವು ವರ್ಷಗಳಿಂದ … Continued

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ; ಸರ್ಪ ಸಂಸ್ಕಾರ ಸೇವೆ

ಮಂಗಳೂರು : ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಮಂಗಳವಾರ (ಮಾರ್ಚ್‌ 11) ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಲ್ಲಿ ನಡೆಯುವ ಪ್ರಮುಖ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಆಶ್ಲೇಷ ನಕ್ಷತ್ರದ ದಿನವಾದ ಮಂಗಳವಾರ ಬೆಳಗ್ಗೆ ಕ್ಷೇತ್ರದ ಆದಿ … Continued