ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ (Karnatak University) ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಈಗ ಪಠ್ಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಸಾರಂಗ ಮುದ್ರಿಸಿರುವ, ಪದವಿ ಕನ್ನಡ ಪಠ್ಯ ಪುಸ್ತಕದ ಬೆಳಗು -1 ಕೃತಿಯಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಧಾರವಾಡದ ನ್ಯಾಯವಾದಿ ಅರುಣ ಜೋಶಿ ಆಕ್ಷೇಪಿಸಿದ್ದಾರೆ. ʼʼಬಿಎ, … Continued

ಪಠ್ಯದಲ್ಲಿ ಕುವೆಂಪು ಪಾಠ ಕೈಬಿಟ್ಟಿಲ್ಲ, ಮಹಾತ್ಮ ಗಾಂಧಿ-ಡಾ.ಅಂಬೇಡ್ಕರ ಬಗ್ಗೆಯೂ ಸಾಕಷ್ಟು ವಿವರಗಳಿವೆ-ಸಚಿವರ ಹೇಳಿಕೆ ಅಪ್ಪಟ ಸುಳ್ಳು; ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಹೇಳಿಕೆಗೆ ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಪತ್ರದ ಮೂಲಕ ಉತ್ತರ ನೀಡಿದ್ದಾರೆ. ನನ್ನ ಸಭಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, … Continued

ಟಿಪ್ಪು ಮತಾಂತರ ಮಾಡಿರುವ ಸತ್ಯವನ್ನೂ ಪಠ್ಯದಲ್ಲಿ ಅಳವಡಿಸಿದ್ದೇವೆ: ಸಚಿವ ಬಿ.ಸಿ. ನಾಗೇಶ

ಬೆಂಗಳೂರು: ಭಗತ್ ಸಿಂಗ್ ಅವರ ಬಗ್ಗೆ ಇರುವ ಪಾಠವನ್ನು ಪಠ್ಯದಿಂದ ತೆಗೆದು ಹಾಕಿಲ್ಲ. ಆದರೆ ಹೆಗಡೇವಾರ್ ಅವರ ಕುರಿತ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು, ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಸಮಿತಿಯವರು ಪಠ್ಯದಲ್ಲಿದ್ದ ಡಾ.ಬಿ.ಆರ್.‌ ಅಂಬೇಡ್ಕರ ಮತ್ತು … Continued