ಥಾಣೆ ಆಸ್ಪತ್ರೆಯಲ್ಲಿ ಶಿವಸೇನೆ ಕಾರ್ಪೊರೇಟರ್‌ನಿಂದ ವೈದ್ಯರ ಮೇಲೆ ಹಲ್ಲೆ : ‘ಭಯದಿಂದ ರಾಜೀನಾಮೆ ನೀಡಿದ್ದೇನೆ’ ಎಂದ ವೈದ್ಯ

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ಶಿವಸೇನೆ (ಏಕನಾಥ ಶಿಂಧೆ ಬಣ) ಕಾರ್ಪೊರೇಟರ್ ರಮೇಶ ಮ್ಹಾತ್ರೆ ನಡೆಸಿದ್ದಾರೆ ಎನ್ನಲಾದ ಹಲ್ಲೆ ಪ್ರಕರಣದ ಬಳಿಕ, ಹಲ್ಲೆಗೊಳಗಾದ ವೈದ್ಯರಲ್ಲಿ ಒಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಭಯದಿಂದ ಶಾಶ್ವತವಾಗಿ ನಗರವನ್ನೇ ತೊರೆದಿರುವುದಾಗಿ ತಿಳಿಸಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿದ ವೈದ್ಯರು, ಈ ಘಟನೆ ತಮ್ಮನ್ನು ತೀವ್ರವಾಗಿ ಬೆಚ್ಚಿಬೀಳುವಂತೆ … Continued