ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ಮಹಿಳೆಯ ಮೇಲೆ ಕಾರು ಚಲಾಯಿಸಿದ ಆರೋಪ: ಹಿರಿಯ ಅಧಿಕಾರಿಯ ಪುತ್ರನ ಬಂಧನ

ಮುಂಬೈ: ಈ ವಾರದ ಆರಂಭದಲ್ಲಿ ಥಾಣೆಯಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿ ಮಹಿಳೆಯನ್ನು ಗಾಯಗೊಳಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂವರನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನಿಲ ಗಾಯಕ್ವಾಡ್ ಅವರ ಪುತ್ರ ಅಶ್ವಜಿತ್ ಗಾಯಕ್ವಾಡ್ ಮತ್ತು ರೊಮಿಲ್ … Continued

ರುಚಿಕರ ಆಹಾರ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ….!

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ತನಗೆ ಬೇಕಾದ ರುಚಿಕರವಾದ ಆಹಾರ ನೀಡಿಲ್ಲ ಎಂಬ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ. … Continued

ಮುಂಬೈ: ಥಾಣೆ ಆಸ್ಪತ್ರೆಯಲ್ಲಿ 24 ತಾಸಿನಲ್ಲಿ 18 ಸಾವು ; ತನಿಖೆಗೆ ಆದೇಶ

ಮುಂಬೈ : ಮಹಾರಾಷ್ಟ್ರದ ಥಾಣೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ ಹದಿನೆಂಟು ರೋಗಿಗಳು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಹತ್ತು ಮಹಿಳೆಯರು ಮತ್ತು ಎಂಟು ಪುರುಷರು ಸೇರಿದ್ದಾರೆ.ಆರು ಮಂದಿ ಥಾಣೆ ನಗರದವರು, ನಾಲ್ವರು ಕಲ್ಯಾಣ, ಮೂವರು ಸಹಾಪುರ, ಭಿವಂಡಿ, ಉಲ್ಲಾಸನಗರ, ಗೋವಂಡಿ (ಮುಂಬೈನಲ್ಲಿ) ತಲಾ ಒಬ್ಬರು, ಹಾಗೂ ಇಬ್ಬರನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಪೌರಾಯುಕ್ತ … Continued

ಇದೆಂಥ ತರಬೇತಿ..? ತರಬೇತಿ ಹೆಸರಲ್ಲಿ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ ಸೀನಿಯರ್‌ ಎನ್‌ಸಿಸಿ ಕೆಡೆಟ್ : ವೀಡಿಯೊ ವೈರಲ್‌

ಮುಂಬೈ: ಶಾಲಾ-ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಯ ಭಾಗವಾಗಿರುವ ನ್ಯಾಷನಲ್ ಕೆಡೆಟ್ ಕಾರ್ಪ್ಸ್‌(ಎನ್‌ಸಿಸಿ)ನ ಸೀನಿಯರ್ ವಿದ್ಯಾರ್ಥಿಯೊಬ್ಬ ಜೂನಿಯರ್‌ಗಳಿಗೆ ಮನಬಂದಂತೆ ಬಡಿಗೆಯಿಂದ ಥಳಿಸಿದ ಘಟನೆಯ ವೀಡಿಯೊ ವೈರಲ್ ಆಗಿದೆ. ಮುಂಬೈ ಸಮೀಪದ ಥಾಣೆಯ ಬಂದೋಡ್ಕರ ಕಾಲೇಜಿನಲ್ಲಿನ ಎನ್‌ಸಿಸಿ ತರಬೇತಿಯ ವೇಳೆ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯನ್ನು ದೂರದಿಂದ ನೋಡುತ್ತಿದ್ದ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವೈರಲ್​ ಆಗಿರುವ … Continued

ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ … Continued

ಬ್ಯಾಂಕಿನಿಂದ 12 ಕೋಟಿ ದೋಚಿದ್ದ ವ್ಯಕ್ತಿ ಹೊಸ ರೂಪದಲ್ಲಿ ಓಡಾಟ, ಮೂರು ತಿಂಗಳ ನಂತರ ಸಿಕ್ಕಿಬಿದ್ದ

ಮುಂಬೈ: ಥಾಣೆಯ ಮಾನ್ಪಾಡಾ ಪ್ರದೇಶದ ಐಸಿಐಸಿಐ ಬ್ಯಾಂಕ್‌ನಿಂದ ₹ 12 ಕೋಟಿ ನಗದು ಕಳ್ಳತನ ಮಾಡಿದ ಪ್ರಮುಖ ಆರೋಪಿಯನ್ನು ಎರಡೂವರೆ ತಿಂಗಳ ನಂತರ ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಲ್ತಾಫ್ ಶೇಖ್ (43) ಎಂದು ಗುರುತಿಸಲಾದ ಪ್ರಮುಖ ಆರೋಪಿಯಿಂದ ಪೊಲೀಸರು ಸುಮಾರು ₹ 9 ಕೋಟಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

ಮುಂಬೈ: 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಥಾಣೆಯಲ್ಲಿ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಅದು ಮಗಳಿಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಜಗಳ ಆಗುತ್ತಿತ್ತು. ಇದೇ … Continued