ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued

ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ; ರಾಜ್ಯಪಾಲರಿಗೆ ʼಝಡ್‌ʼ ಕೆಟಗರಿ ಭದ್ರತೆ, ಬುಲೆಟ್ ಪ್ರೂಫ್ ಕಾರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ʼZʼ ಕೆಟಗರಿ ಭದ್ರತೆ ನೀಡಿದೆ. ಜೊತೆಗೆ ಬುಲೆಟ್ … Continued

ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ ಪರಿಷತ್‌ ಸದಸ್ಯನ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯದಿದ್ದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು “ಬಾಂಗ್ಲಾದೇಶದಂತಹ ಸನ್ನಿವೇಶ” ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯದಿದ್ದರೆ ಅಥವಾ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ ; ಹೈಕೋರ್ಟ್‌ಗೆ ಕೇವಿಯಟ್‌ ಸಲ್ಲಿಕೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ನೀಡಿರುವ ಅಭಿಯೋಜನಾ ಮಂಜೂರಾತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದರೆ ತಮ್ಮ ವಾದವನ್ನೂ ಆಲಿಸಬೇಕು ಎಂದು ಕೇವಿಯಟ್‌ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವ ಬೆಂಗಳೂರಿನ ನಾಗರಭಾವಿಯ ಎಸ್‌.ಪಿ. ಪ್ರದೀಪಕುಮಾರ ಅವರು ವಕೀಲ ಎಂ.ಎಚ್‌. ಪ್ರಕಾಶ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued

ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ … Continued

ರಾಜ್ಯಪಾಲ ಗೆಹ್ಲೋಟ್‌ ಅವರನ್ನೇ ಬಿಟ್ಟು ಹಾರಿದ ಏರ್ ಏಷ್ಯಾ ವಿಮಾನ ; ನಂತರ ಕ್ಷಮೆಯಾಚನೆ

ಬೆಂಗಳೂರು: ಹೈದರಾಬಾದಿಗೆ ತೆರಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಏರ್ ಏಷ್ಯಾ ವಿಮಾನ ಬಿಟ್ಟು ಹೋದ ಘಟನೆ ಶುಕ್ರವಾರ ನಡೆದಿದೆ. ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆ ವಿರುದ್ಧ ರಾಜ್ಯಪಾಲರ ಕಚೇರಿ “ಶಿಷ್ಟಾಚಾರ ಉಲ್ಲಂಘನೆ” ಪ್ರಕರಣ ದಾಖಲಿಸಿದ ಬೆನ್ನಲ್ಲೇ ವಿಮಾನಯಾನ ಸಂಸ್ಥೆ ಇದಕ್ಕೆ ವಿಷಾದಿಸಿದೆ. ರಾಜ್ಯಪಾಲರ ಕಚೇರಿ ಅಧಿಕಾರಿಗಳು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Continued