ಸಿದ್ದಾಪುರ : ನಕಲಿ ಬಂಗಾರದ ನಾಣ್ಯ ನೀಡಿ 10 ಲಕ್ಷ ರೂ. ವಂಚನೆ ; ಅಂತರ ಜಿಲ್ಲಾ ವಂಚಕನನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ: ಕಡಿಮೆ ಬೆಲೆಗೆ ಅಸಲಿ ಬಂಗಾರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ  ಹಣ ಲೂಟಿ ಮಾಡುತ್ತಿದ್ದ ಅಂತರ ಜಿಲ್ಲಾ ವಂಚಕನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾಪುರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಈ ಆರೋಪಿಯು ಇದೇ ರೀತಿ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರದ ನಾಣ್ಯವನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿದ್ದ … Continued

ಬೆಂಗಳೂರು : ಕದಿಯಲು ಹೋಗಿ ಸಿಕ್ಕಿಬಿದ್ದ ನಂತ್ರ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು ನೀಡಿದ ಕಳ್ಳ…!

ಬೆಂಗಳೂರು: ಬೆಂಗಳೂರು ಬೀದಿಗಳಲ್ಲಿ ಪ್ರತಿದಿನ ಒಂದಲ್ಲ ಒಂದು ವಿಚಿತ್ರ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಆದರೆ, ಮನೆಯೊಂದಕ್ಕೆ ಕನ್ನ ಹಾಕಲು ಹೋದ ಕಳ್ಳನೊಬ್ಬ, ಸಾರ್ವಜನಿಕರಿಂದ ಏಟು ತಿಂದ ಮೇಲೆ ಸ್ವತಃ ಪೊಲೀಸರ ಬಳಿ ಹೋಗಿ ದೂರು ನೀಡಿದ್ದಾನೆ ಎಂದು ವರದಿಯಾಗಿದೆ.  ವಿಚಿತ್ರವೆಂದರೆ ತಾನು ದರೋಡೆಗೆ ಯತ್ನಿಸುವಾಗ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ತಾನು ಕಳ್ಳತನಕ್ಕೆ … Continued

ವಾದ್ಯಗಳ ಅಂಗಡಿಯಿಂದ ಮ್ಯಾಂಡೋಲಿನ್ ಕದ್ದೊಯ್ದ ಕಳ್ಳ ; ನಂತ್ರ ಕ್ಷಮೆಯಾಚನೆ ಪತ್ರ ಬರೆದು ವಾಪಸ್‌ ಇಟ್ಟು ಹೋದ…!

ನ್ಯೂಜೆರ್ಸಿ : ಅಮೆರಿಕದ ನ್ಯೂಜೆರ್ಸಿಯ ಹಳೆಯ ಸಂಗೀತ ವಾದ್ಯಗಳ ಮಳಿಗೆಯೊಂದರಲ್ಲಿ ನಡೆದ ವಿಚಿತ್ರ ಕಳ್ಳತನವೊಂದು ಭಾರೀ ಸುದ್ದಿಯಲ್ಲಿದೆ. ಮಳಿಗೆಯಿಂದ ಕಳ್ಳತನವಾಗಿದ್ದ ಎರಡು ಅಮೂಲ್ಯ ಮ್ಯಾಂಡೊಲಿನ್ ವಾದ್ಯಗಳನ್ನು ಕಳುವು ಮಾಡಿದ್ದ ಕಳ್ಳನೇ ಮರಳಿ ತಂದುಕೊಟ್ಟಿದ್ದು, ಜೊತೆಗೆ ಕೈಬರಹದಲ್ಲಿ ಕ್ಷಮಾಪಣಾ ಪತ್ರವನ್ನೂ ಬರೆದಿಟ್ಟು ಹೋಗಿದ್ದಾನೆ….! ಈ ತಿಂಗಳ ಆರಂಭದಲ್ಲಿ ನ್ಯೂಜೆರ್ಸಿಯ ‘ಲಾರ್ಕ್ ಸ್ಟ್ರೀಟ್ ಮ್ಯೂಸಿಕ್’ (Lark Street Music) … Continued

ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ಹುಬ್ಬಳ್ಳಿ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಅಂತಾರಾಜ್ಯ ಕಳ್ಳತನದ ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ : ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಖ್ಯಾತ ಅಂತಾರಾಜ್ಯ ಕಳ್ಳತನದ ಆರೋಪಿಯಾಗಿರುವ ಈತನನ್ನು ಹಿಡಿಯಲು ಹುಬ್ಬಳ್ಳಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಬೇಕಾದ ಪರಿಸ್ಥಿತಿ … Continued

ಕ್ಷಮಿಸಿ..: ಕಳ್ಳತನ ಮಾಡಿದ್ದು ಖ್ಯಾತ ಸಾಹಿತಿ ಮನೆ ಎಂದು ಗೊತ್ತಾಗಿ ಕದ್ದ ವಸ್ತು ವಾಪಸ್‌ ತಂದಿಟ್ಟು ಪತ್ರ ಬರೆದು ಗೋಡೆಗೆ ಅಂಟಿಸಿ ಹೋದ ಕಳ್ಳ…!

ರಾಯಗಢ : ಅಸಾಮಾನ್ಯ ಘಟನೆಯೊಂದರಲ್ಲಿ ತಾನು ಕಳುವು ಮಾಡಿದ್ದು ಖ್ಯಾತ ಮರಾಠಿ ಬರಹಗಾರನ ಮನೆ ಎಂದು ಗೊತ್ತಾದ ನಂತರ ಕಳ್ಳನೊಬ್ಬ ತಾನು ಕದ್ದ ಎಲ್ಲ ವಸ್ತುಗಳನ್ನು ವಾಪಸ್ ತಂದಿಟ್ಟು, ತಾನು ಮಾಡಿದ ಕೃತ್ಯಕ್ಕೆ ಪಶ್ಚಾತ್ತಾಪಪಟ್ಟು ಗೋಡೆಗೆ ಪತ್ರವೊಂದನ್ನು ಅಂಟಿಸಿ ಹೋದ ಅಪರೂಪದ ಘಟನೆಯೊಂದು ರಾಯಗಡ ಜಿಲ್ಲೆಯ ನೇರಲ್ ಎಂಬಲ್ಲಿ ನಡೆದಿದೆ. ಈ ಕಳ್ಳ ಕಳುವು ಮಾಡಿದ … Continued