ಬ್ರಿಟಿಷ್ ಅಧಿಕಾರಿಗಳಿಂದ ತಿಹಾರ್ ಜೈಲು ಪರಿಸ್ಥಿತಿ ಪರಿಶೀಲನೆ; ಭಾರತಕ್ಕೆ ಮಲ್ಯ, ಮೋದಿ ಇತರರ ಹಸ್ತಾಂತರದ ಕಾಲ ಸನ್ನಿಹಿತ..?

ನವದೆಹಲಿ : ಭಾರತದಲ್ಲಿ ವಿವಿಧ ಹಗರಣಗಳಲ್ಲಿ ಭಾಗಿಯಾದ ಆರೋಪಗಳನ್ನು ಹೊತ್ತು ದೇಶದ ಕಾನೂನಿನಿಂದ ತಪ್ಪಿಸಿಕೊಳ್ಳು ಬ್ರಿಟನ್ನಿ​ಗೆ ಪಲಾಯನಗೈದ ವಿಜಯ ಮಲ್ಯ, ನೀರವ್ ಮೋದಿ ಮತ್ತಿತರರು ಭಾರತದ ವಶಕ್ಕೆ ಹಸ್ತಾಂತರವಾಗುವ ಸನ್ನಿಹಿತವಾದಂತೆ ಕಾಣುತ್ತಿದೆ. ಬ್ರಿಟನ್​ನ ಅಧಿಕಾರಿಗಳ ತಂಡವೊಂದು ದೆಹಲಿಯ (Delhi) ತಿಹಾರ್ ಜೈಲಿನ ಪರಿಸ್ಥಿತಿಯನ್ನು ಇತ್ತೀಚಿಗೆ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದ್ದು, ಇದು ಅವರು ಭಾರತಕ್ಕೆ ಹಸ್ತಾಂತರವಾಗುವ … Continued

ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ವಿಶೇಷ ವಿಮಾನದಲ್ಲಿ ಇಂದು ಭಾರತಕ್ಕೆ ; ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಇಂದು, ಗುರುವಾರ ಮಧ್ಯಾಹ್ನದ ನಂತರ ಭಾರತಕ್ಕೆ ತಲುಪಲಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಭಾರತಕ್ಕೆ ತಲುಪಿದಾಗ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆತನ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ರಾಣಾ ಗಡೀಪಾರು … Continued

ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಅರವಿಂದ ಕೇಜ್ರಿವಾಲ್ ಅಸ್ವಸ್ಥ, ಜೈಲಿನಲ್ಲಿ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದ ಎಎಪಿ ; ನಿರಾಕರಿಸಿದ ಅಧಿಕಾರಿಗಳು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ ಅವರು 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ಸಚಿವೆ ಅತಿಶಿ ಇಂದು ಹೇಳಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಚಿವೆ … Continued

ಬೆಳಿಗ್ಗೆ 6:30ಕ್ಕೆ ಏಳುವುದು…ಊಟ-ತಿಂಡಿ, ಪುಸ್ತಕ, ಟಿವಿ, ಮೀಟಿಂಗ್ : ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ದಿನಚರಿ ಹೇಗಿರುತ್ತದೆ ಗೊತ್ತೆ..?

ನವದೆಹಲಿ : ಈಗ ರದ್ದಾಗಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಏಪ್ರಿಲ್ 15 ರವರೆಗೆ ಜೈಲಿನಲ್ಲಿರುತ್ತಾರೆ. ಏಪ್ರಿಲ್ 1 ಸೋಮವಾರ ಕೇಜ್ರಿವಾಲ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಜ್ರಿವಾಲ್ ಅವರನ್ನು 15 ದಿನಗಳ ಕಾಲ ತಿಹಾರ್‌ ಜೈಲಿನಲ್ಲಿ ಇರಿಸುವಂತೆ ಹೇಳಿದೆ. ಹೀಗಾಗಿ ಕೇಜ್ರಿವಾಲ್ ಅವರಿಗೆ ನೀಡಲಿರುವ ಆಹಾರ, … Continued

ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ ಎಸ್‌ಯುವಿ ಪತ್ತೆ ಪ್ರಕರಣ:ತಿಹಾರ ಜೈಲಿನಲ್ಲಿ ಉಗ್ರ ತೆಹ್ಸೀನ್ ಅಖ್ತರ್ ವಿಚಾರಣೆ

ಮುಂಬೈ; ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂಡಿಯನ್‌ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ತೆಹ್ಸೀನ್ ಅಖ್ತರ್ ಅವರನ್ನು ದೆಹಲಿ ಪೊಲೀಸರ ವಿಶೇಷ ಕೋಶದ ತಂಡವು ತಿಹಾರ್ ಜೈಲಿನೊಳಗೆ “ಸುಮಾರು ನಾಲ್ಕು ತಾಸುಗಳ ಕಾಲ” ಪ್ರಶ್ನಿಸಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ ಎಂದು ಫ್ರಿ ಪ್ರೆಸ್‌ ಜರ್ನಲ್‌ ವರದಿ ಮಾಡಿದೆ. ತಿಹಾರ್ ಜೈಲಿನಲ್ಲಿರುವ ಅಖ್ತರ್ … Continued

ಮುಂಬೈ ಸ್ಫೋಟದ ಆರೋಪಿ ಬಳಿ ಸಿಕ್ಕ ಅಂಬಾನಿಗೆ ಬೆದರಿಕೆ ಹೊಣೆ ಸಂದೇಶದ ಮೊಬೈಲ್..!‌

ಇಂಡಿಯನ್‌ ಮುಜಾಹಿದ್ದೀನ್ (ಭಾರತೀಯ ಮುಜಾಹಿದ್ದೀನ್‌) ಮುಖ್ಯಸ್ಥ ಮತ್ತು 2011ರ ಮುಂಬೈ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ತೆಹ್ಸೀನ್ ಅಖ್ತರ್ ಸೇರಿದಂತೆ ನಾಲ್ವರು ಭಯೋತ್ಪಾದಕರು ತಿಹಾರ್ ಜೈಲಿನ ಒಳಗಿನಿಂದ ಸೆಲ್‌ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲ ಆಂಗ್ಲ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. ಕಳೆದ ತಿಂಗಳು ಮುಂಬೈನ ಮುಖೇಶ್ ಅಂಬಾನಿಯ ನಿವಾಸದ ಹೊರಗೆ ಜೆಲೆಟಿನ್ ತುಂಡುಗಳೊಂದಿಗೆ … Continued