ಮಳೆ, ಭೂ ಕುಸಿತ:ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗುವ ಘಾಟ್ ರಸ್ತೆ ಬಂದ್‌

ತಿರುಪತಿ: ಮೂರು ಸ್ಥಳಗಳಲ್ಲಿ ಭೂಕುಸಿತದಿಂದ ರಸ್ತೆ ಹಾನಿಗೊಳಗಾದ ಹಿನ್ನೆಲೆಯಲ್ಲಿ ತಿರುಮಲ ಬೆಟ್ಟಗಳ ಮೇಲಿನ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗುವ ಘಾಟ್ ರಸ್ತೆ ಬುಧವಾರ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿ ಬೃಹತ್ ಬಂಡೆಗಳು ರಸ್ತೆಗೆ ಉರುಳಿದ್ದು, ಪ್ರಮುಖ ಸಂಪರ್ಕಕ್ಕೆ ಹಾನಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆ ಮತ್ತು ರಭಸದ ಗಾಳಿಯಿಂದಾಗಿ ಘಾಟ್ … Continued