ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬದಲಿಗೆ ‘ಪಾಲಿಯೆಸ್ಟರ್‌’ ಶಾಲುಗಳ ಪೂರೈಕೆ ; ಬೃಹತ್‌ ಹಗರಣ ಬೆಳಕಿಗೆ

ಹೈದರಾಬಾದ್ : ಶುದ್ಧ ರೇಷ್ಮೆ ಎಂದು ಹೇಳಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Tirumala Venkateswara Temple)  ಸುಮಾರು ಹತ್ತು ವರ್ಷಗಳ ಕಾಲ ಕಳಪೆ ಗುಣಮಟ್ಟದ ಪಾಲಿಯೆಸ್ಟರ್ ಶಾಲುಗಳನ್ನು (Dupattas) ಪೂರೈಸಿದ ಬೃಹತ್ ವಂಚನೆಯು ಬೆಳಕಿಗೆ ಬಂದಿದ್ದು, ದೇವಸ್ಥಾನ ಆಡಳಿತ ಮತ್ತು ಭಕ್ತರಲ್ಲಿ ತೀವ್ರ ಆಘಾತ ಮೂಡಿಸಿದೆ. ತಿರುಮಲ ತಿರುಪತಿ ದೇವಸ್ಥಾನಂ (TTD) ನ … Continued

ತಿರುಪತಿ ದೇವಸ್ಥಾನದಲ್ಲಿ ದರ್ಶನಕ್ಕೆ ಕಾಯುವ ಸಮಯ 2 ತಾಸು ಕಡಿಮೆ ಮಾಡಲು ಎಐ (AI) ತಂತ್ರಜ್ಞಾನ ಬಳಸಲು ಟಿಟಿಡಿ ಯೋಜನೆ

 ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಉದ್ದದ ಸರತಿ ಸಾಲುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಮತ್ತು ಯಾತ್ರಾರ್ಥಿಗಳು ದರ್ಶನಕ್ಕಾಗಿ ಕಾಯುವ ಸರಾಸರಿ ಸಮಯವನ್ನು ಕೇವಲ ಎರಡು ಗಂಟೆಗಳಿಗೆ ಇಳಿಸಲು ಮಹತ್ವಾಕಾಂಕ್ಷೆಯ ಡಿಜಿಟಲ್ ಅಭಿಯಾನವನ್ನು ಪ್ರಾರಂಭಿಸಲು ಯೋಜಿಸಿದೆ. ಈ ಉದ್ದೇಶಕ್ಕಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಟಿಟಿಡಿ ಅಧ್ಯಕ್ಷರಾದ ಬಿ.ಆರ್. ನಾಯ್ಡು ಅವರು ಎನ್‌ಡಿಟಿವಿ ಜೊತೆಗಿನ … Continued

ವೀಡಿಯೊ…| ಮಗ ಅಗ್ನಿ ಅವಘಡದಿಂದ ಪಾರಾಗಿದ್ದಕ್ಕೆ ತಿರುಪತಿಯಲ್ಲಿ ಮುಡಿಕೊಟ್ಟ ಆಂಧ್ರ ಡಿಸಿಎಂ ಪವನಕಲ್ಯಾಣ ಪತ್ನಿ ಅನ್ನಾ ಲೆಜ್ನೆವಾ ..

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನಕಲ್ಯಾಣ ಅವರ ಪತ್ನಿ ಅನ್ನಾ ಲೆಜ್ನೆವಾ ಭಾನುವಾರ ಸಂಜೆ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಉಪವಾಸವನ್ನು ಪೂರ್ಣಗೊಳಿಸಿದರು. ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಮ್ಮ ಮಗ ಮಾರ್ಕ್ ಶಂಕರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆಯ ನಂತರ ತಿರುಪತಿಗೆ ಭೇಟಿ ನೀಡಿದ್ದಾರೆ. … Continued

ವೀಡಿಯೊ…| ತಿರುಪತಿ ಕಾಲ್ತುಳಿತದಲ್ಲಿ ಆರು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ ; ಅಸ್ವಸ್ಥ ಮಹಿಳೆ ಹೊರಬರಲು ಗೇಟ್ ತೆರೆದ ನಂತರ ಗೊಂದಲ

ತಿರುಪತಿ ದೇವಸ್ಥಾನದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜನದಟ್ಟಣೆ ಮತ್ತು ಅನಿಯಂತ್ರಿತ ಟೋಕನ್ ವಿತರಣೆಯು ಮಾರಣಾಂತಿಕ ತಿರುಪತಿ ಕಾಲ್ತುಳಿತ ಘಟನೆಗೆ ಕಾರಣಗಳೆಂದು ಚರ್ಚಿಸಲಾಗುತ್ತಿದೆ. ತಿರುಮಲ ಶ್ರೀವಾರಿ ವೈಕುಂಠ ದ್ವಾರ ಟಿಕೆಟ್ ಕೌಂಟರ್ ಬಳಿಯ ವಿಷ್ಣು ನಿವಾಸದ ಬಳಿ ದರ್ಶನ ಟೋಕನ್ ವಿತರಣೆ ವೇಳೆ ಈ … Continued

ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ

ಹೈದರಾಬಾದ್: ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ತನಿಖೆಗಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಉಂಡವಳ್ಳಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, “ಇನ್‌ಸ್ಪೆಕ್ಟರ್ ಜನರಲ್ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸಲಾಗುವುದು. ಇದು ಈ ಬಗ್ಗೆ ತನಿಖೆ … Continued

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ತಿರುಪತಿ ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಧಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು. “ತಿರುಮಲದ ಶ್ರೀ … Continued