ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ವಿಡಿಯೋ | ರ್ಯಾಲಿ ಬಳಿಕ ಗದ್ದಲದ ನಡುವೆ ಜನರನ್ನು ನಿಯಂತ್ರಿಸುವಾಗ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬರೂಯಿಪುರದಲ್ಲಿ 11 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ರ್ಯಾಲಿಯ ವೇಳೆ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ಮತ್ತು ಘರ್ಷಣೆ … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ

ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued

ಟಿಎಂಸಿ ಆಂತರಿಕ ಕಲಹ ತಾರಕಕ್ಕೆ ; ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ; ನೂತನ ಅಧ್ಯಕ್ಷರ ನೇಮಕ…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, 1998 ರಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಸ್ಥಾಪಿಸಿದಾಗಿನಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರಕ್ಕೆ ಅತ್ಯಂತ ನೇರವಾದ ಸವಾಲಾಗಿ, ವಿಪಕ್ಷದ ನಾಯಕ ರೀತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದೆ.ಅವರ ಸ್ಥಾನಕ್ಕೆ ಅರೂಪ್‌ ರಾಯ್‌ ಅವರನ್ನು ನೇಮಕ ಮಾಡಿದೆ. … Continued

ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?

ನವದೆಹಲಿ:ನವದೆಹಲಿ: ಕಳೆದ ವಾರದವರೆಗೆ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳ ಹೊರಗಿನ ಕೆಲವರು ಮಾತ್ರ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ಬಗ್ಗೆ ಕೇಳಿದ್ದರು. 2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಭಾವ ಬೀರಲೂ ವಿಫಲವಾಗಿ, ಅಸ್ತಿತ್ವವೇ ಇಲ್ಲದಂತಾಗಿದ್ದ ಪಶ್ಚಿಮ ಬಂಗಾಳದ ಸಣ್ಣ ರಾಜಕೀಯ ಪಕ್ಷವೊಂದು ಈಗ ದಿಢೀರನೆ ದೇಶದ ಪ್ರಮುಖ ರಾಜಕೀಯ … Continued

ಮಮತಾಗೆ ಮತ್ತೊಂದು ಬಿಗ್ ಶಾಕ್: ಬಂಡಾಯ ಬಣ ಸೇರಿದ ಸುದೀಪ ಬಂದೋಪಾಧ್ಯಾಯ; ಭೂಪೇಂದ್ರ ಯಾದವ್ ಭೇಟಿ

ಕೋಲ್ಕತ್ತಾ/ನವದೆಹಲಿ: 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಪಕ್ಷದೊಳಗಿನ ಒಡಕನ್ನು ಇನ್ನಷ್ಟು ಹೆಚ್ಚಿಸುವ ಬೆಳವಣಿಗೆಯೊಂದರಲ್ಲಿ ಟಿಎಂಸಿಯೊಳಗೆ ಪ್ರತ್ಯೇಕ ಬಣವಾಗಿ ಗುರುತಿಸುವಂತೆ ಕೋರಿ ಪಕ್ಷದ ಭಿನ್ನಮತೀಯ ಸಂಸದರ ಪಾಳಯ ಸಲ್ಲಿಸಿದ ಪತ್ರಕ್ಕೆ ಹಿರಿಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.  ಪಕ್ಷದ ಹಿರಿಯ ನಾಯಕ … Continued

ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued