ಅಭಿಷೇಕ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ’ ; ಮಮತಾಗೆ ಗಡುವು ನೀಡಿದ ಆಪ್ತ ಕಲ್ಯಾಣ ಬ್ಯಾನರ್ಜಿ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ಈಗ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹಲವು ನಾಯಕರು ಮತ್ತು ಸಂಸದರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದರೂ, ಪಕ್ಷ ಹಾಗೂ ಮಮತಾ ಬ್ಯಾನರ್ಜಿಗೆ ನಿಷ್ಠರಾಗಿ ಉಳಿದಿದ್ದ ಹಿರಿಯ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಗುರುವಾರ ಮಮತಾ ಬ್ಯಾನರ್ಜಿ ಮತ್ತು … Continued

ಮಮತಾಗೆ ಮತ್ತೊಂದು ಆಘಾತ : ಟಿಎಂಸಿಗೆ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ…!

ನವದೆಹಲಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗುರುವಾರ ರಾಜ್ಯಸಭಾ ಸದಸ್ಯ ಪ್ರಕಾಶ ಬಾರೈಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿಗೆ ಮತ್ತೊಂದು ಭಾರಿ ಆಘಾತ ನೀಡಿದ್ದಾರೆ. ಇವರು ಒಂದು ವಾರದೊಳಗೆ ಟಿಎಂಸಿ ತೊರೆದ ಮೂರನೇ ರಾಜ್ಯಸಭಾ ಸಂಸದರಾಗಿದ್ದಾರೆ. ಇದಕ್ಕೂ ಮುನ್ನ … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ನಕಲಿ ಸಹಿ ಪ್ರಕರಣ: ಮಮತಾ ಬ್ಯಾನರ್ಜಿ ನಿವಾಸ , ಅಭಿಷೇಕ ಕಚೇರಿ ಮೇಲೆ ಏಕಕಾಲದಲ್ಲಿ ಸಿಐಡಿ ದಾಳಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರ ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಗುರುವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಸೋದರಳಿಯ ಹಾಗೂ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಜಹಾಂಗೀರ್ ಖಾನ್ ನೇಪಾಳ ಗಡಿ ಬಳಿ ಅರೆಸ್ಟ್

ಕೋಲ್ಕತ್ತಾ : ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕ ಜಹಾಂಗೀರ್ ಖಾನ್ ಅವರನ್ನು ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಇಂದು, ಸೋಮವಾರ ಮುಂಜಾನೆ ನೇಪಾಳ ಗಡಿ ಪ್ರದೇಶದ ಬಳಿ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಎಸ್‌ಟಿಎಫ್ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅವರ ಚಲನವಲನಗಳನ್ನು ಪತ್ತೆಹಚ್ಚಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ … Continued

ಸಂಸತ್ತಿನಲ್ಲಿ ಟಿಎಂಸಿಗೆ ಮೊದಲ ಆಘಾತ: ರಾಜ್ಯಸಭಾ ಸ್ಥಾನ-ಪಕ್ಷಕ್ಕೆ ಹಿರಿಯ ನಾಯಕ ಸುಖೇಂದು ಶೇಖರ ರಾಯ್ ರಾಜೀನಾಮೆ !

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಸಂಸತ್ತಿನಲ್ಲಿ ಮೊದಲ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ ರಾಯ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಟಿಎಂಸಿ ಪಕ್ಷವನ್ನೂ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಬಹುಪಾಲು ಟಿಎಂಸಿ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪಕ್ಷವು … Continued

ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued

ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued