ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued

ವೀಡಿಯೊ…| ಪಶ್ಚಿಮ ಬಂಗಾಳದಲ್ಲಿ ‘ಬೀದಿ ನ್ಯಾಯʼದಲ್ಲಿ ನಡು ರಸ್ತೆಯಲ್ಲೇ ಮಹಿಳೆಗೆ ದೊಣ್ಣೆಯಿಂದ ಥಳಿತ ; ವಿಪಕ್ಷಗಳಿಂದ ಮಮತಾ ವಿರುದ್ಧ ವಾಗ್ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಅನಾಗರಿಕ ಘಟನೆಯಲ್ಲಿ ಜನಸಂದಣಿ ಮುಂದೆಯೇ ನಡು ರಸ್ತೆಯಲ್ಲಿಯೇ ವ್ಯಕ್ತಿಯೊಬ್ಬ ಮಹಿಳೆ ಸೇರಿದಂತೆ ಇಬ್ಬರನ್ನು ಥಳಿಸುತ್ತಿರುವ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ವಿಪಕ್ಷಗಳಾದ ಸಿಪಿಎಂ ಮತ್ತು ಬಿಜೆಪಿ ಈ ವೀಡಿಯೊ ಉತ್ತರ ಬಂಗಾಳದ ಉತ್ತರ ದಿನಾಜಪುರ … Continued

ವೀಡಿಯೊ..| ಪಾರ್ಕಿಂಗ್‌ ವಿಷಯಕ್ಕೆ ರೆಸ್ಟೋರೆಂಟ್ ಮಾಲೀಕನ ಮೇಲೆ ಹಲ್ಲೆ ನಡೆಸಿದ ಟಿಎಂಸಿ ಶಾಸಕ…

ಕೋಲ್ಕತ್ತಾ: ಸಿನಿಮಾವೊಂದರ ಚಿತ್ರೀಕರಣದ ವೇಳೆ ರೆಸ್ಟೊರೆಂಟ್ ಮಾಲೀಕನ ಮೇಲೆ ನಟ-ತೃಣಮೂಲ ಕಾಂಗ್ರೆಸ್ ಶಾಸಕ ಸೋಹಮ್ ಚಕ್ರವರ್ತಿ ಹಲ್ಲೆ ನಡೆಸಿ ವಿವಾದ ಸೃಷ್ಟಿಸಿದ್ದಾರೆ. ಚಕ್ರವರ್ತಿ ಮತ್ತು ರೆಸ್ಟೋರೆಂಟ್ ಮಾಲೀಕ ಅನಿಸುಲ್ ಆಲಂ ಇಬ್ಬರೂ ಪರಸ್ಪರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ನಂತರ ಶಾಸಕರು ತಮ್ಮ ವರ್ತನೆಗೆ ಕ್ಷಮೆಯಾಚಿಸಿದ್ದಾರೆ. ಏಕೆಂದರೆ ತಾನು ತನ್ನ … Continued

ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued

ಲೈಂಗಿಕ ದೌರ್ಜನ್ಯ ಆರೋಪ: ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ

ಕೋಲ್ಕತ್ತಾ: ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಕಿರುಕುಳದ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ಮೇ 2ರ ರಾಜಭವನದ ಸಿಸಿಟಿವಿ ದೃಶ್ಯಾವಳಿಗಳನ್ನು ಜನಸಾಮಾನ್ಯರಿಗೆ ತೋರಿಸಿದ್ದಾರೆ. ಮೇ 2ರ ಸಂಜೆ 5:30ರ ಸಮಯದ ಮುಖ್ಯ (ಉತ್ತರ) ಗೇಟ್‌ನಲ್ಲಿರುವ ಎರಡು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ರಾಜಭವನದ ನೆಲ ಮಹಡಿಯಲ್ಲಿರುವ … Continued

ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಚುನಾವಣಾ ಬಾಂಡ್ ಮೂಲಕ ಅತಿಹೆಚ್ಚು ಹಣ ಸ್ವೀಕರಿಸಿದ ಪಕ್ಷ ಬಿಜೆಪಿ ; ಅತಿಹೆಚ್ಚು ದಾನ ನೀಡಿದ ಫ್ಯೂಚರ್ ಗೇಮಿಂಗ್ ನಿಂದ ಡಿಎಂಕೆಗೆ ಸಿಂಹಪಾಲು : ಎಷ್ಟು ಗೊತ್ತೆ..?

ನವದೆಹಲಿ : ಚುನಾವಣಾ ಬಾಂಡ್‌ಗಳನ್ನು 2018 ರಲ್ಲಿ ಪರಿಚಯಿಸಿದಾಗಿನಿಂದ ಈ ಬಾಂಡ್‌ಗಳ ಮೂಲಕ ಗರಿಷ್ಠ ಹಣ 6,986.5 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್-1,397 ಕೋಟಿ ರೂ., ಕಾಂಗ್ರೆಸ್ -1,334 ಕೋಟಿ ರೂ. ಮತ್ತು ಬಿಆರ್‌ಎಸ್ 1,322 ಕೋಟಿ ರೂ. ಹಣ ಸ್ವೀಕರಿಸಿದೆ. ಚುನಾವಣಾ ಬಾಂಡ್‌ಗಳ ಅಗ್ರ ಖರೀದಿದಾರರಾದ ಫ್ಯೂಚರ್ … Continued

ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ದಿಬ್ಯೇಂದು ಅಧಿಕಾರಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸಂದೇಶಖಾಲಿ ಘಟನೆಯಿಂದ ತಾವು ಅಸಮಾಧಾನಗೊಂಡಿರುವುದಾಗಿ ಹೇಳಿದ್ದಾರೆ. ಅರ್ಜುನ್‌ ಸಿಂಗ್ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಬರಾಕಪುರ ಮತ್ತು ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued