ರೈಲು ಡಿಕ್ಕಿ : ಎಂಟು ಆನೆಗಳು ಸಾವು ; ಹಳಿ ತಪ್ಪಿದ ರಾಜಧಾನಿ ಎಕ್ಸ್‌ಪ್ರೆಸ್‌ ನ 5 ಬೋಗಿಗಳು

ಹೋಜೈ (ಅಸ್ಸಾಂ): ಶನಿವಾರ ಮುಂಜಾನೆ ಅಸ್ಸಾಂನ ಹೋಜೈ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವಿಗೀಡಾಗಿದ್ದು, ಒಂದು ಆನೆ ತೀವ್ರವಾಗಿ ಗಾಯಗೊಂಡಿದೆ. ಡಿಕ್ಕಿಯ ರಭಸಕ್ಕೆ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಅದೃಷ್ಟವಶಾತ್, ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು … Continued

ಪ್ರಯಾಣಿಕರ ರೈಲು-ಸರಕು ರೈಲು ಡಿಕ್ಕಿ ; 8 ಮಂದಿ ಸಾವು

ಬಿಲಾಸಪುರ: ಛತ್ತೀಸ್‌ಗಢದ ಬಿಲಾಸಪುರ ಜಿಲ್ಲೆಯ ಲಾಲ್‌ಖಡನ್ ಬಳಿ ಮಂಗಳವಾರ ಪ್ರಯಾಣಿಕರ ರೈಲು (68733) ಮತ್ತು ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಪ್ರಯಾಣಿಕ ರೈಲಿನ ಹಲವಾರು ಬೋಗಿಗಳು ಒಂದರ ಮೇಲೊಂದು ಹತ್ತಿ ಭೀಕರ ದೃಶ್ಯ ಸೃಷ್ಟಿಸಿದವು. ಘಟನೆ ನಡೆದ ತಕ್ಷಣ, ರೈಲ್ವೆ ಆಡಳಿತ ಮತ್ತು … Continued

ಮೈ ಜುಂ ಎನ್ನುವ ವೀಡಿಯೊ | ತಿಂಡಿಗಳ ಟ್ರೇ ಹಿಡಿದು ಚಲಿಸುವ ರೈಲು ಹತ್ತಲು ಯತ್ನಿಸಿ ಕೆಳಗೆ ಬಿದ್ದ ಹುಡುಗ ; ಮುಂದಾಗಿದ್ದು ಪವಾಡ…!

ಪ್ರತಿದಿನ ರೈಲ್ವೆ ನಿಲ್ದಾಣಗಳಲ್ಲಿ ಓಡಿ ಹೋಗುವ ರೈಲಿಗೆ ಹತ್ತಲು ಪ್ರಯಾಣಿಕರು ಮತ್ತು ವ್ಯಾಪಾರಿಗಳು ಅಪಾಯಕಾರಿಯಾಗಿ ಏರುವ-ಇಳಿಯುವ ದೃಶ್ಯಗಳು ಸಾಮಾನ್ಯ. ರೈಲ್ವೆ ಅಧಿಕಾರಿಗಳ ಪದೇಪದೇ ಎಚ್ಚರಿಕೆಗಳ ಹೊರತಾಗಿಯೂ ಅನೇಕರು ಅದನ್ನು ನಿರ್ಲಕ್ಷಿಸಿ ತಮ್ಮ ಪ್ರಾಣವನ್ನು ಪಣಕ್ಕಿಡುತ್ತಾರೆ. ಇಂತಹದ್ದೇ ಆಘಾತಕಾರಿ ಘಟನೆಯ ವಿಡಿಯೋವೊಂದು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಚಲಿಸುತ್ತಿರುವ ರೈಲಿನ ಕೆಳಗೆ ಬಿದ್ದ ಬಾಲಕನೊಬ್ಬ ಗಾಬರಿಗೊಳಗಾಗದೆ ಸಂಪೂರ್ಣ … Continued

ಗೂಡ್ಸ್‌ ರೈಲಿಗೆ ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ಡಿಕ್ಕಿ ; 19 ಮಂದಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ ಪ್ಯಾಸೆಂಜರ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ(Train Accident) ಹೊಡೆದಿದ್ದು, 19 ಮಂದಿ ಗಾಯಗೊಂಡಿದ್ದಾರೆ. ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ಪ್ರವೇಶಿಸಿದ ಪರಿಣಾಮ ಕನಿಷ್ಠ 12 ಬೋಗಿಗಳು ಹಳಿತಪ್ಪಿದವು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 8:30ರ … Continued

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಗೆ ಗೂಡ್ಸ್ ರೈಲು ಡಿಕ್ಕಿ ; 15 ಮಂದಿ ಸಾವು, 60 ಜನರಿಗೆ ಗಾಯ

ಸಿಲಿಗುರಿ (ಪಶ್ಚಿಮ ಬಂಗಾಳ) : ಗೂಡ್ಸ್ ರೈಲೊಂದು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ. ಈಶಾನ್ಯ ಫ್ರಂಟಿಯರ್ ರೈಲ್ವೆ ವ್ಯಾಪ್ತಿಗೆ ಒಳಪಡುವ ನಿಜಬರಿ ಮತ್ತು ರಂಗಪಾಣಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಎಕ್ಸ್‌ಪ್ರೆಸ್ ರೈಲಿನ ಮೂರು ಕೋಚ್‌ಗಳು (ಎರಡು ಪಾರ್ಸೆಲ್ … Continued

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ಬುಧವಾರ (ಏಪ್ರಿಲ್‌ 25) ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಇವರು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ತಿಳಿದು ಬಂದಿದೆ. ಶಶಿಕುಮಾರ (23), ಲೋಕೇಶ (25) ಎಂಬ ಇಬ್ಬರು ಮೃತರನ್ನು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೂವರು … Continued

ಜಮ್ತಾರಾದಲ್ಲಿ ರೈಲಿಗೆ ಸಿಲುಕಿ 12 ಮಂದಿ ಸಾವು

ರಾಂಚಿ : ಜಾರ್ಖಂಡದ ಜಮ್ತಾರಾ ಬಳಿ ಬುಧವಾರ (ಫೆಬ್ರವರಿ 28) ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಹಾಗೂಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಮ್ತಾರಾ-ಕರ್ಮತಾಂಡ್‌ನ ಕಲ್ಜಾರಿಯಾದ ಸಮೀಪದಲ್ಲಿ ಜನರಿಗೆ ರೈಲು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಜನರಿಗೆ ರೈಲ್ವೇ ಆಡಳಿತ, ರೈಲ್ವೇ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸೇರಿದಂತೆ ತುರ್ತು … Continued

ಆಂಧ್ರದಲ್ಲಿ ಎರಡು ರೈಲುಗಳು ಡಿಕ್ಕಿ : 8 ಮಂದಿ ಸಾವು, 20 ಮಂದಿಗೆ ಗಾಯ

ವಿಜಯನಗರಂ : ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಭಾನುವಾರ ಎರಡು ರೈಲುಗಳು ಡಿಕ್ಕಿಯಾಗಿ ಎಂಟು ಪ್ರಯಾಣಿಕರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರ ರೈಲು ವಿಶಾಖಪಟ್ಟಣದಿಂದ ರಾಯಗಡಕ್ಕೆ ಹೋಗುತ್ತಿತ್ತು. ಪೂರ್ವ ಕರಾವಳಿ ರೈಲ್ವೆ ವಲಯದ ವಾಲ್ಟೇರ್ ವಿಭಾಗದ ವಿಜಯನಗರ-ಕೊತ್ತವಲಸ ರೈಲ್ವೆ ವಿಭಾಗದಲ್ಲಿ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಪ್ರಯಾಣಿಕ ರೈಲುಗಳು ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದವು. … Continued