ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕಿರಣಕುಮಾರ ರಾಜೀನಾಮೆ

ತುಮಕೂರು: ಬಿಜೆಪಿ ಮಾಜಿ ಶಾಸಕ ಕಿರಣಕುಮಾರ ಶನಿವಾರ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣದಿಂದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ತುಮಕೂರು … Continued

ತಿಪಟೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಲ್ಲಿ ಮುಳುಗಿ ಸಾವು

ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ- ಸೊಸೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಟಿ.ಎಂ. ಮಂಜುನಾಥ ನಗರದಲ್ಲಿ ನಡೆದ ವರದಿಯಾಗಿದೆ. ಸೋಮವಾರ (ನಿನ್ನೆ) ಮಧ್ಯಾಹ್ನದ ವೇಳೆ ಮನೆಯಿಂದ ಬಟ್ಟೆಗಳನ್ನು ತುಂಬಿಕೊಂಡು ಕಟ್ಟೆಯ ಬಳಿ ತೊಳೆದುಕೊಂಡು ಬರಲು ಅತ್ತೆ- ಸೊಸೆ ಹೋಗಿದ್ದಾರೆ. ಆದರೆ, 3 ಗಂಟೆ ಸುಮಾರಿಗೆ ಸೊಸೆ ನೀರಿಗೆ ಬಿದ್ದಿದ್ದಾರೆ. ಸೊಸೆಯನ್ನು … Continued

ತುಮಕೂರು : ಭೀಕರ ಅಪಘಾತಕ್ಕೆ ನವದಂಪತಿ ದುರ್ಮರಣ

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಸಂಭವಿಸಿದೆ. ಇಂದು, ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು … Continued

ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ, ಬೆಂಗಳೂರು, ತುಮಕೂರಿನ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ, ಸೋಮವಾರ (ಫೆಬ್ರವರಿ 6) ಬೆಂಗಳೂರು, ತುಮಕೂರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ, ಫೆಬ್ರವರಿ 6ರಂದು ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಬೆಳಿಗ್ಗೆ 11ಕ್ಕೆ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನರು, 8,000 ಹೊರ ದೇಶದ ಪ್ರತಿನಿಧಿಗಳು, … Continued

ಖಾಸಗಿ ಬಸ್-ಬೈಕ್‌ ಡಿಕ್ಕಿ: ತಂದೆ-ಮಗಳು ಸಾವು

ತುಮಕೂರು: ಖಾಸಗಿ ಬಸ್ ಬೈಕ್‌ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಂದೆ-ಮಗಳು ಮೃತಪಟ್ಟ ಘಟನೆ ಭಾನುವಾರ (ಜನವರಿ 29) ಹೆಬ್ಬೂರಿನ ಬನ್ನಿಮರದಕಟ್ಟೆ ಬಳಿ ಸಂಭವಿಸಿದೆ. ಮೃತರನ್ನು ತಿರುಮಲೇಗೌಡ (50), ಚಂದನ (20) ಎಂದು ಗುರುತಿಸಲಾಗಿದೆ. ಅಪಘಾತದ ಸ್ಥಳದಲ್ಲೇ ತಂದೆ ತಿರುಮಲೇಗೌಡ ಮೃತಪಟ್ಟಿದ್ದು, ಪುತ್ರಿ ಚಂದನಾ ಅವರಿಗೆ ಕುಣಿಗಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮುಕೂರು ಆಸ್ಪತ್ರೆಗೆ ಕರೆದೊಯ್ಯುವಾಗ … Continued

ಬಸ್ ನಿಲ್ಲಿಸಿ ಕೆರೆಗೆ ಹಾರಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ..!

ತುಮಕೂರು : ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಬಸ್‌ ನಿಲ್ಲಿಸಿ ಕೆರೆಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಕೆರೆಯಲ್ಲಿ ಕಾಲುಜಾರಿ ಬಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಬ್ಬರು ಬಾಲಕಿಯರನ್ನು … Continued

ರೇವಣಸಿದ್ದೇಶ್ವರ ಬೆಟ್ಟದಲ್ಲಿ ಬೆಂಕಿ: ಕಾಲ್ನಡಿಗೆಯಲ್ಲಿ ಬೆಟ್ಟ ಏರುತ್ತಿದ್ದ ಭಕ್ತ ಸಾವು

ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಬಳಿ ಶ್ರೀ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬೆಂಕಿ ಬಿದ್ದು ಪಾದಯಾತ್ರೆ ಮೂಲಕ ಬೆಟ್ಟ ಹತ್ತುತ್ತಿದ್ದ ವ್ಯಕ್ತಿಯೊಬ್ಬರು ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಬಳಿಯ ಶ್ರೀ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಘಟನೆ ನಡೆದಿದ್ದು, ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದೆ. … Continued

ತುಮಕೂರು: ಬೂದಿಬೆಟ್ಟ ಗ್ರಾಮ ಪಂಚಾಯತದಲ್ಲಿ ಸ್ಫೋಟ : ದುಷ್ಕರ್ಮಿಗಳ ಸಂಚಿನ ಶಂಕೆ

ತುಮಕೂರು: ಸ್ಫೋಟ ಸಂಭವಿಸಿ ಗ್ರಾಮ ಪಂಚಾಯತ ಕಚೇರಿ ಕಟ್ಟಡ ಬಿರುಕು ಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯತ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಜಿಲೆಟಿನ್‌ ಮೂಲಕ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ. … Continued

ತುಮಕೂರು: ಬಿಜೆಪಿಯತ್ತ ಮಾಜಿ ಸಂಸದ ಮುದ್ದಹನುಮೇಗೌಡ

ತುಮಕೂರು: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.‍ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಪಿತೃ ಪಕ್ಷ ಆರಂಭಕ್ಕೂ ಮುನ್ನ ಬಿಜೆಪಿ ಸೇರಲು ಅವರು ಸಿದ್ಧತೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದು, ಈ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ … Continued

ಕರ್ನಾಟಕ ಗಣಿಗಾರಿಕೆ: ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿ ಹೆಚ್ಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಕಬ್ಬಿಣದ ಅದಿರು ಗಣಿಗಾರಿಕೆಯ ಮಿತಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಹೆಚ್ಚಿಸಿದೆ. ಅದು ಪರಿಸರ ಮತ್ತು ಪರಿಸರದ ಸಂರಕ್ಷಣೆಯು ಆರ್ಥಿಕ ಅಭಿವೃದ್ಧಿಯ ಮನೋಭಾವದ ಜೊತೆಗೆ ಸಾಗಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಕಬ್ಬಿಣದ ಅದಿರು ಗಣಿಗಾರಿಕೆಯ ಮಿತಿಯನ್ನು ಬಳ್ಳಾರಿ ಜಿಲ್ಲೆಗೆ 28 ​​MMT ನಿಂದ 35 MMT … Continued