ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ತಾಯಿ ಮೊಬೈಲ್‌ ಚಾರ್ಜರ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿ ಎಂಬಲ್ಲಿ ನಡೆದಿದೆ. ಪಾವಗಡದ ಶಾಂತಿ ಎಸ್ಎಸ್ ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಹುಡುಗ. ಈತ ಆಶಾ ಕಾರ್ಯಕರ್ತೆ ವರಲಕ್ಷಮ್ಮ ಎಂಬವರ … Continued

ತುಮಕೂರು : ಬಿಜೆಪಿಗೆ ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ

ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದೇ ಇದ್ದುದಕ್ಕೆ ಅಸಮಾಧಾನಗೊಂಡ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರಿಗೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ತುಮಕೂರು ನಗರ … Continued

ಎಮ್ಮೆ ಮೈ ತೊಳೆಸಲು ಹೋಗಿ ಕೆರೆಯಲ್ಲಿ ಮುಳುಗಿ ಸಾವು

ತುಮಕೂರು: ಎಮ್ಮೆಗಳಿಗೆ ಮೈತೊಳೆಯಲು ಹೋಗಿ ಕೆರೆಗೆ ಬಿದ್ದು ಸಹೋದರರಿಬ್ಬರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಎಂ.ದಾಸರಹಳ್ಳಿ ಗ್ರಾಮದ ಗಂಗರಾಜು (27) ಹಾಗೂ ಹನುಮಂತರಾಜು (21) ಮದಲೂರು ಚಿಕ್ಕ ಕೆರೆಯಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟ ಸಹೋದರರು. ಎಮ್ಮೆಗಳಿಗೆ ಮೈತೊಳೆಯಲು ಹೋದಾಗ ಹನುಮಂತರಾಜು ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. … Continued

ಅಣ್ಣ-ತಂಗಿ ನಡುವೆ ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯನ್ನೇ ಕೊಲೆ ಮಾಡಿದರು…!

ತುಮಕೂರು :ಸಂಬಂಧದಲ್ಲಿ ಅಣ್ಣನಾಗುವವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಮಗಳು ತನ್ನ ತಾಯಿಯನ್ನ ಕೊಂದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆ ಕೊರಟಗೆರೆಯಲ್ಲಿ ನಡೆದಿದ್ದು, ಸಾವಿತ್ರಮ್ಮ(೪೫) ಕೊಲೆಯಾದವರು. ಇವರು ನೀರಿನ ಸಂಪಿನಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪೊಲೀಸ್‌ ಪ್ರಕರಣವೂ ದಾಖಲಿಸಲಾಗಿತ್ತು. ಆದರೆ ಪೊಲೀಸರು ಮಗಳು … Continued

ತುಮಕೂರು: ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಮುಳುಗಿ ಸಾವು

ತುಮಕೂರು: ಕುರಿ ಮೇಯಿಸುವ ವೇಳೆಯಲ್ಲಿ ಕೆರೆಯಲ್ಲಿದ್ದ ಗುಂಡಿಯ ಬಳಿ ಹೋದ ಒಂದೇ ಕುಟುಂಬದ ಮೂವರು ಮಕ್ಕಳು ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾವಗಡದಲ್ಲಿ ಶನಿವಾರ ನಡೆದಿದೆ. ಜಿಲ್ಲೆಯ ಪಾವಗಡ ತಾಲ್ಲೂಕಿನ ಎಸ್.ಆರ್.ಪಾಳ್ಯದ ಬಳಿಯ ಪದ್ಮರಾಜನ ಕೆರೆಯಲ್ಲಿರುವ ಗುಂಡಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕಿಯರು, ಓರ್ವ ಬಾಲಕ ಮೃತಪಟ್ಟಿದ್ದಾರೆ. ಮೃತರನ್ನು ದೇವರಾಯನ ರೊಪ್ಪದ ಷರೀಫ್(10), … Continued