ಭಾರತ್ ರಾಷ್ಟ್ರ ಸಮಿತಿ ಉದಯ: ಟಿಆರ್‌ಎಸ್ ಅನ್ನು ರಾಷ್ಟ್ರೀಯ ಪಕ್ಷ ‘ಬಿಆರ್‌ಎಸ್’ ಆಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್‌: ದೇಶಾದ್ಯಂತ ಬಿಜೆಪಿ ವಿರುದ್ಧ ಪರಿಣಾಮಕಾರಿ ಹೋರಾಟವನ್ನು ಮಾಡಲು, ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ಅವರು ತಮ್ಮ ಪಕ್ಷ- ಟಿಆರ್‌ಎಸ್‌ನ ಹೊಸ ಆವೃತ್ತಿಯಾದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅನ್ನು ಉದ್ಘಾಟಿಸಿದರು. ಇಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. … Continued