ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ತಮಿಳುನಾಡು ಸಿಎಂ ವಿಜಯ ವಿರುದ್ಧದ ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸಂಗೀತಾ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ ಮತ್ತು ಅವರ ಪತ್ನಿ ಸಂಗೀತಾ ಸೋರ್ನಲಿಂಗಂ ಅವರ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಗೀತಾ ಅವರು ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಇಂದು, ಶುಕ್ರವಾರ (ಆಗಸ್ಟ್‌ ೭)ನ್ಯಾಯಾಲಯ ಪ್ರಕರಣವನ್ನು ಅಧಿಕೃತವಾಗಿ ಮುಕ್ತಾಯಗೊಳಿಸಿದೆ. ಇಂದು, ಶುಕ್ರವಾರ ನಡೆದ ವಿಚಾರಣೆಯಲ್ಲಿ ಸಂಗೀತಾ ವಿಡಿಯೊ ಕಾನ್ಫರೆನ್ಸ್ … Continued

ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ : ತಮಿಳುನಾಡು ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಚೆನ್ನೈ: ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 41 ಮಂದಿಯ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ನೀಡಿದ್ದ ಅನುಕಂಪ ಆಧಾರಿತ ಸರ್ಕಾರಿ ಉದ್ಯೋಗದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ಸೋಮವಾರ (ಜುಲೈ 27) ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಸಿ.ವಿ. ಕಾರ್ತಿಕೇಯನ್ ಹಾಗೂ ಆರ್. ಶಕ್ತಿವೇಲ ಅವರ ವಿಭಾಗೀಯ ಪೀಠ, ಈ ನೇಮಕಾತಿಗಳು ಭಾರತ … Continued

ವಿಜಯ ಸರ್ಕಾರ ಉರುಳಿಸಲು ಡಿಎಂಕೆ ಸಂಚು ? ಟಿವಿಕೆಯಿಂದ ಶಾಸಕರಿಗೆ ₹35 ಕೋಟಿ ಆಮಿಷದ ಆರೋಪ ; ಮೂವರ ಬಂಧನ

ಚೆನ್ನೈ: ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕೂಡ ಪೂರ್ಣಗೊಳ್ಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ (ಹಾರ್ಸ್ ಟ್ರೇಡಿಂಗ್) ಆರೋಪದ ವಿವಾದ ಭುಗಿಲೆದ್ದಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಡಿಎಂಕೆ ನಾಯಕರಿಗೆ ಸಂಬಂಧಿಸಿದ ವ್ಯಕ್ತಿಗಳು ₹10 ಕೋಟಿಯಿಂದ ₹50 ಕೋಟಿವರೆಗೆ ಆಮಿಷ ಒಡ್ಡಿದ್ದಾರೆ … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

ಮೈತ್ರಿಪಕ್ಷಗಳ ವಿರೋಧಕ್ಕೆ ಮಣಿದ ಸಿಎಂ ವಿಜಯ : ಜ್ಯೋತಿಷಿ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಆದೇಶ ವಾಪಸ್

ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಹುದ್ದೆಗೆ ನೇಮಿಸಿದ ಕೇವಲ 24 ಗಂಟೆಗಳಲ್ಲಿ ವಿಜಯ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ. ಮೈತ್ರಿಕೂಟದ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮೇ 12, 2026 ರಂದು … Continued