ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ಸಿಎಂ ವಿಜಯ ವಿಶೇಷಾಧಿಕಾರಿಯಾಗಿ ಜ್ಯೋತಿಷಿ ವೆಟ್ರಿವೇಲ್ ನೇಮಕ ; ಕಾಂಗ್ರೆಸ್‌ ಅಸಮಾಧಾನ

 ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ  ವಿಜಯ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ (OSD) ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ತಮಿಳುನಾಡು ಸರ್ಕಾರದ ಸಾರ್ವಜನಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ವೆಟ್ರಿವೇಲ್ ಅವರು ಮುಖ್ಯಮಂತ್ರಿಯವರ ರಾಜಕೀಯ ವಿಭಾಗದ ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಅಧಿಕಾರ ವಹಿಸಿಕೊಂಡ … Continued

ಎಐಎಡಿಎಂಕೆಯಲ್ಲಿ ಭುಗಿಲೆದ್ದ ಬಂಡಾಯ: ಇಪಿಎಸ್‌ ವಿರುದ್ಧ ಷಣ್ಮುಗಂ ಕಿಡಿ ; ವಿಜಯ ಸರ್ಕಾರಕ್ಕೆ ಬೆಂಬಲ ಘೋಷಣೆ !

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಎಐಎಡಿಎಂಕೆ (AIADMK) ಪಕ್ಷದ ಒಳಗಿನ ಬಿಕ್ಕಟ್ಟು ಮಂಗಳವಾರ ತಾರಕಕ್ಕೇರಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಸಮಾಲೋಚನಾ … Continued

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ

ಚೆನ್ನೈ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಚಂದ್ರಶೇಖರ ಜೋಸೆಫ್ ವಿಜಯ ಅವರು ಭಾನುವಾರ (ಮೇ 10) ತಮಿಳುನಾಡಿನ ಒಂಬತ್ತನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅವರು ವಿಜಯ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು ದೇವರ ಹೆಸರಿನಲ್ಲಿ ಪ್ರಮಾಣ ವಚನ … Continued

ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

ವಿಡಿಯೋ | ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ: 30 ವರ್ಷಗಳ ಹಿಂದಿನ ಪ್ರಮೋದ ಮಹಾಜನ್ ಮಾರ್ಮಿಕ ಭಾಷಣ ಈಗ ಮತ್ತೆ ವೈರಲ್‌

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯವನ್ನು ಅತಂತ್ರ ಸ್ಥಿತಿಗೆ ತಳ್ಳಿರುವ ಬೆನ್ನಲ್ಲೇ, ಸುಮಾರು ಮೂರು ದಶಕಗಳ ಹಿಂದಿನ ಸಂಸತ್ತಿನ ರೋಚಕ ಪ್ರಸಂಗವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ, ಅಂದು ಬಿಜೆಪಿ ನಾಯಕ ಪ್ರಮೋದ ಮಹಾಜನ್ ಅವರು ಮೈತ್ರಿ ರಾಜಕೀಯದ ವಿಡಂಬನೆ ಮಾಡುತ್ತಾ ನೀಡಿದ್ದ ಭಾಷಣವು ಇಂದಿನ … Continued

ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ

ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್‌ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued

ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.  ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued