ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿ…: ತನ್ನ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ನಂತರ ಯು-ಟರ್ನ್‌ ಹೊಡೆದ ಕಾಂಗ್ರೆಸ್ ನಾಯಕ

ನವದೆಹಲಿ: ಮಧ್ಯಪ್ರದೇಶದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನೀಡಿರುವ ಹೇಳಿಕೆ ಸೋಮವಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾನುವಾರ ಪನ್ನಾ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪಟೇರಿಯಾ ಅವರು, ಮೋದಿಯವರು ಚುನಾವಣೆಯನ್ನು ಮುಗಿಸುತ್ತಾರೆ ಮತ್ತು ಧರ್ಮ, ಸಮುದಾಯ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಯನ್ನು ಸೃಷ್ಟಿಸುತ್ತಾರೆ. … Continued