ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಅತಿಯಾದ ಪ್ರೀತಿ-ವ್ಯಾಮೋಹವೇ ಕೊಲೆಗೆ ಕಾರಣ

ಉಡುಪಿ : ಏರ್‌ ಇಂಡಿಯಾದ ಗಗನಸಖಿ ಮತ್ತು ಆಕೆಯ ಕುಟುಂಬದ ಮೂವರು ಸದಸ್ಯರನ್ನು ಆಕೆಯ ಸಹೋದ್ಯೋಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಮೂರು ತಿಂಗಳ ನಂತರ ಉಡುಪಿ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಫೆಬ್ರವರಿ 12 ರಂದು ಚಾರ್ಜ್‌ಶೀಟ್ ಸಲ್ಲಿಸಿದ ಮಲ್ಪೆ ಪೊಲೀಸರು, ಹತ್ಯೆಗೆ ಅತಿಯಾದ ಗೆಳೆತನ, ಪ್ರೀತಿ (Love), ವ್ಯಾಮೋಹ, … Continued

ಉಡುಪಿ: ನಾಲ್ಕನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀಗಳು

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದ್ದಾರೆ. ಪರ್ಯಾಯ ಪೂಜಾಧಿಕಾರ ಹಸ್ತಾಂತರ ಮಾಡಬೇಕಿದ್ದ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರ ಅನುಪಸ್ಥಿತಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ವಿಶ್ವಪ್ರಿಯ ತೀರ್ಥರು ಸರ್ವಜ್ಞ ಪೀಠಾರೋಹಣದ ವಿಧಿ ವಿಧಾನಗಳನ್ನು ನೆರವೇರಿಸಿದರು. ಪರ್ಯಾಯ ಮೆರವಣಿಗೆಯ … Continued

ಹಿಜಾಬ್ ವಿಚಾರ : ಸಿದ್ದರಾಮಯ್ಯ ಯಾವುದೇ ಒಂದು ಪಂಗಡದ ಮುಖ್ಯಮಂತ್ರಿಯಲ್ಲ ; ಪೇಜಾವರ ಶ್ರೀ

ಬೆಳಗಾವಿ : ಹಿಜಾಬ್ ಹಿಂಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀಗಳು ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿವಿಧ ಗುಂಪುಗಳಿಗೆ ವಿಭಿನ್ನ ಕಾನೂನುಗಳನ್ನು ಜಾರಿಗೊಳಿಸುವುದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಇಂಥದ್ದನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಕರ್ನಾಟಕದ ಎಲ್ಲರಿಗೂ ಮುಖ್ಯಮಂತ್ರಿಯಾಗಿದ್ದಾರೆ. ಸಮಾಜದಲ್ಲಿ … Continued

ಶಿರೂರು : ಸಮುದ್ರದಲ್ಲಿ ಮಗುಚಿದ ದೋಣಿ, ಇಬ್ಬರು ಮೀನುಗಾರರು ಸಾವು

ಉಡುಪಿ: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಬೈಂಂದೂರು ತಾಲೂಕು ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಶಿರೂರಿನ ಹಡವಿನಕೋಣೆಯ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್‌ ಭಟ್ಕಳದ ಮಿಸ್ಬಾ ಯೂಸುಫ್ (48) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಶಿರೂರು … Continued

ವೀಡಿಯೊ…..: ಬೃಹತ್ ಗಾತ್ರದ ಹೆಬ್ಬಾವು ಹಿಡಿದ 12 ವರ್ಷದ ಬಾಲಕ | ವೀಕ್ಷಿಸಿ

ಉಡುಪಿ : 12 ವರ್ಷದ ಏಳನೇ ತರಗತಿ ಓದುತ್ತಿರುವ ಬಾಲಕನೊಬ್ಬ ಬೃಹತ್ ಗಾತ್ರದ ಹೆಬ್ಬಾವು ಹಿಡಿದು ಎಲ್ಲರ ಗಮನ ಸೆಳೆದಿದ್ದಾನೆ. ಈ ಬಾಲಕ ಈಗ ಹೆಬ್ಬಾವು ಹಿಡಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ-ಕುಂದಾಪುರ ನಡುವಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿತ್ತು. ಹೆಬ್ಬಾವು ಬಂದ ಬಗ್ಗೆ ಮಾಹಿತಿ ಪಡೆದ … Continued

ಉಡುಪಿ: ಮಲ್ಪೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಸಮೀಪದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.ಮೃತರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಮನೆಯೊಳಗಿದ್ದ ಮತ್ತೋರ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಉಡುಪಿಯ ಹೊಟೇಲ್‌ ಉಪಾಹಾರದ ಮೆನು ಹೇಳುವ ಶೈಲಿಗೆ ಆನಂದ್ ಮಹೀಂದ್ರಾ ಕ್ಲೀನ್‌ ಬೌಲ್ಡ್‌ : ಎಐ ಮೀರಿಸುವ ಹೊಟೇಲ್‌ ಮಾಣಿ ಎಂದ ಉದ್ಯಮಿ | ವೀಕ್ಷಿಸಿ

ಕರ್ನಾಟಕದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿರುವ ಉಡುಪಿ, ಕಡಲತೀರಗಳಿಗೆ ಮಾತ್ರವಲ್ಲ, ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೂ ಹೆಸರುವಾಸಿ. ಪ್ರವಾಸಿಗರು ಮತ್ತು ಆಹಾರಪ್ರಿಯರು ಇಲ್ಲಿಗೆ ಅದರ ವಿಶಿಷ್ಟವಾದ ಸಮುದ್ರಾಹಾರದ ರುಚಿಯನ್ನು ಅರಸಿ ಬರುತ್ತಾರೆ. ಉಡುಪಿಯ ಶ್ರೀ ವಿಠ್ಠಲ ಟೀ ಕಾಫಿ ಹೌಸ್ ನ ಸಿಬ್ಬಂದಿ ಹೊಟೇಲಿನ ಮೆನುವನ್ನು ನಿರ್ಗಳವಾಗಿ ಹೇಳುವ ಶೈಲಿಗೆ ಹೆಸರಾಂತ ಉದ್ಯಮಿ ಆನಂದ ಮಹೀಂದ್ರಾ ಮನ … Continued

ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ … Continued

ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ: ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ … Continued

ಕಾಲೇಜು ವೀಡಿಯೊ ಪ್ರಕರಣ : ಉಡುಪಿಗೆ ಆಗಮಿಸಿದ ಸಿಐಡಿ ತಂಡ

ಉಡುಪಿ: ಕಾಲೇಜಿನ ಶಾಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಡಿವೈಎಸ್ ಪಿ ಅಂಜುಮಾಲ ನಾಯಕ್ ಅವರ ನೇತೃತ್ವದ ತಂಡ ಉಡುಪಿ ಜಿಲ್ಲಾ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದೆ. ಎಸ್ ಪಿ ಅಕ್ಷಯ ಮಚ್ಚೀಂದ್ರ ಹಾಗೂ … Continued