ಜಸ್ಟ್‌ ಪಾಸಾದ್ರೆ ಸಾಕು… ಪರೀಕ್ಷೆಯಲ್ಲಿ ನನಗೆ ಇಷ್ಟು ಮಾರ್ಕ್ಸ್‌ ಬರಲೇ ಬೇಕು ; ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ : ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ (exam) ಪಾಸ್‌ ಮಾಡಿಸುವಂತೆ ಪ್ರಾರ್ಥಿಸಿ ದೈವಕ್ಕೆ ಚೀಟಿ ಬರೆದಿದ್ದಾನೆ. ಪರೀಕ್ಷೆಯಲ್ಲಿ ನನಗೆ ಇಂತಿಷ್ಟು ಅಂಕ ಬರಬೇಕೆಂದು ಚೀಟಿ ಬರೆದು ಅದನ್ನು ಹುಂಡಿಗೆ ಹಾಕಿ ದೈವ ದೇವರಲ್ಲಿ ಜಸ್ಟ್‌ ಪಾಸ್‌ ಮಾಡಿಸಿದರೆ ಸಾಕು ಎಂದು ಪ್ರಾರ್ಥಿಸಿದ್ದಾನೆ. ಇದೀಗ ಈ ಚೀಟಿ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಜಿಲ್ಲೆಯ ಕುಂದಾಪುರ ಹೊಳ … Continued

ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು. ಹಲವು ವರ್ಷಗಳಿಂದ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ವೀಡಿಯೊ…| ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್‌ ನಟಿ-ಸಂಸದೆ ಕಂಗನಾ ರಣಾವತ್‌ ಭೇಟಿ ; ಬ್ರಹ್ಮಕಲಶೋತ್ಸವದಲ್ಲಿ ಭಾಗಿ

ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಭೇಟಿ ನೀಡಿ ದರ್ಶನ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ದೇವಸ್ಥಾನಗಳು … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

‘ಮಲಬಾರ್ ವಿಶ್ವರಂಗ ಪುರಸ್ಕಾರ 2025 ; ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ ಮಾಡಲಾಗಿದೆ. ಧಾರವಾಡದ ಅರವಿಂದ ಕುಲಕರ್ಣಿ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ ಕಾರಂತ … Continued

ಉಡುಪಿ ಜಿಲ್ಲಾಧಿಕಾರಿ ಎದುರು ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ

ಉಡುಪಿ : ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಭಾನುವಾರ ಶರಣಾಗಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಅವರ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ … Continued

ಹೆಜಮಾಡಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂವರು ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲು … Continued

ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಕಾಂತಾರ-1 ಸಿನೆಮಾ ಕಲಾವಿದರನ್ನು ಒಯ್ಯುತ್ತಿದ್ದ ಮಿನಿ ಬಸ್ ಪಲ್ಟಿ : ಹಲವರಿಗೆ ಗಾಯ

ಕುಂದಾಪುರ : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-1 ಚಲನಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ನೃತ್ಯ ಕಲಾವಿದರಿದ್ದ ಮಿನಿ ಬಸ್ ಭಾನುವಾರ ರಾತ್ರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 25 ಜೂನಿಯರ್ ನೃತ್ಯಗಾರರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಿ ಮಿನಿ ಬಸ್ ನಲ್ಲಿ ತೆರಳುತ್ತಿದ್ದರು. ಸ್ಕೂಟಿ ಅಡ್ಡ ಬಂದ ಪರಿಣಾಮ ಅಪಘಾತವತಪ್ಪಿಸಲು ಚಾಲಕ ಯತ್ನಿಸಿದಾಗ … Continued