ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ. ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ … Continued

ಸ್ಕೂಟರಿಗೆ ಬಸ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು

ಉಡುಪಿ: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಮೃತಪಟ್ಟ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ … Continued

ಉಡುಪಿ: ಎಂಜಿಎಂ ಕಾಲೇಜಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಹಿಜಾಬ್-ಕೇಸರಿ ಶಾಲು ವಿವಾದ, ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರಿಂದ ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಧರಿಸಿ ಬಂದಿದ್ದು ಇದಕ್ಕೆ ಪ್ರತಿಯಾಗಿ ಕೇಸರಿ ಪೇಟ, ಕೇಸರಿ … Continued

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಣೆ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶ ನಿರಾಕರಿಸಿತ್ತು. ಆದರೆ, ಇಂದು, ಮಂಗಳವಾರ ಕಾಲೇಜಿನ ಆಡಳಿತ ಮಂಡಳಿಯ ಆದೇಶ ಧಿಕ್ಕರಿಸಿ ಹಿಜಾಬ್​ ಧರಿಸಿ ಕ್ಯಾಂಪಸ್​​ಗೆ ಬಂದ ವಿದ್ಯಾರ್ಥಿನಿಯರು ತರಗತಿಗೆ ಹೋಗುವ ಬೇಡಿಕೆ ಇಟ್ಟಿದ್ದಾರೆ. ಆದರೆ ಕಾಲೇಜಿನ ಪ್ರಾಂಶುಪಾಲರು ಮಾತ್ರ ವಿದ್ಯಾರ್ಥಿನಿಯರಿಗೆ … Continued

ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

ಉಡುಪಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ. ಕಳೆದ ರಾತ್ರಿ ಮನೆ ಪಕ್ಕದಲ್ಲಿ ರೀನಾ ಡಿಸೋಜಾ ತನ್ನ ಗೆಳತಿ ಜೊತೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ … Continued

ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಿಒಡಿ ತನಿಖೆಗೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಲಾಟಿ ಚಾರ್ಜ್ ನಡೆಸಿ ಪೊಲೀಸರು ಅತಿರೇಕದಿಂದ ವರ್ತಿಸಿದ್ದಾರೆ ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಒಡಿಗೆ ವಹಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ,ಶನಿವಾರ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಸಂದರ್ಭ ಪೊಲೀಸರಿಂದ ಹಲ್ಲೆ ನಡೆದ ರಾಜೇಶ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ … Continued

ಮಲ್ಪೆ: ಒಂದೇ ಮೀನು ಬರೋಬ್ಬರಿ 1.80 ಲಕ್ಷ ರೂ.ಗಳಿಗೆ ಮಾರಾಟವಾಯ್ತು…!

ಉಡುಪಿ : ಕರಾವಳಿ ಮೀನುಗಾರರಿಗೆ ಮತ್ಸ್ಯಕ್ಷಾಮ ಎದುರಾಗಿದೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಒಂದೇ ಮೀನಿನಲ್ಲಿ ಬಂಪರ್‌ ಲಾಭ ಪಡೆದಿದ್ದಾರೆ. ಮೀನುಗಾರರು ಹಿಡಿದು ತಂದ ಅಪರೂಪದ ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂ.ಗಳಿಗೆ ಮಾರಾಟವಾಗಿದೆ…! ಉಡುಪಿ ಜಿಲ್ಲೆಯ ಮಲ್ಪೆಯ ತೊಟ್ಟಂನ ಶಾನ್‌ ರಾಜ್‌ ಎಂಬವರಿಗೆ ಸೇರಿದ ಬಲರಾಮ್‌ ಬೋಟಿನಲ್ಲಿ ಮೀನುಗಾರರು … Continued

ಚಿನ್ನದಂಗಡಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ..! ವೀಕ್ಷಿಸಿ

ಉಡುಪಿಯ ಜ್ಯುವೆಲರಿಯೊಂದಲರಲಿ ಬೃಹತ್‌ ಗಾತ್ರದ ಹೆಬ್ಬಾವು ಸೇರಿಕೊಂಡಿತ್ತು. ಕೆಲಸಕ್ಕೆ ಬಂದ ಉಡುಪಿಯ ನೊವೆಲ್ಟಿ ಜ್ಯುವೆಲರಿ ಸಿಬ್ಬಂದಿ ತಮ್ಮ ಅಂಗಡಿಯ ಮೇಲ್ಛಾವಣಿಯಲ್ಲಿ ಅವಿತು ಕುಳಿತಿದ್ದ ಸುಮಾರು ಹತ್ತು ಅಡಿಗಳಷ್ಟು ಬೃಹತ್‌ ಗಾತ್ರದ ಹೆಬ್ಬಾವನ್ನು ನೋಡಿ ಕಂಗಾಲಾದರು. ಅದು ಅಂಗಡಿಯ ಮೇಲ್ಛಾವಣಿಯಲ್ಲಿ ಅಡಗಿ ಕುಳಿತುಕೊಂಡಿತ್ತು. ಈ ಕುರಿತು ಮಂಗಳೂರು ಮಿರರ್‌.ಕಾಮ್‌ ವರದಿ ಮಾಡಿದ್ದು, ವಿಡಿಯೊ ಸಹ ಹಂಚಿಕೊಂಡಿದೆ. ವರದಿ … Continued

ಶುಕ್ರವಾರ ಮಣಿಪಾಲ ಎಂಐಟಿಯ 184 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಉಡುಪಿ: ಕೋವಿಡ್ ಎರಡನೇ ಅಲೆಯ ಭೀತಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 210 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, . ಇವರಲ್ಲಿ 184 ಸೋಂಕಿತರು ಮಣಿಪಾಲ ಎಂಐಟಿ ಕ್ಯಾಂಪಸ್ ಒಳಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 210 ಜನರಿಗೆ ಕೊರೊನಾ ಸೋಂಕು … Continued

ನಾಯಿ ಬೇಟೆಗೆ ಬಂದ ಚಿರತೆ ಮನೆಯಲ್ಲಿ ಬಂಧಿ

ಉಡುಪಿ: ನಾಯಿ ಹಿಡಿಯಲು ಬಂದ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ತಾನೇ ಬಧಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡದಿದೆ. ಬ್ರಹ್ಮಾವರ ಬಳಿಯ ನೈಲಾಡಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ಕುಟುಂಬದ ಸಾಕು ನಾಯಿ ಹಿಡಿಯಲು ಹೊರಟಿತ್ತು, ಆದರೆ ಅದು ತಪ್ಪಿಸಿಕೊಂಡು ಮನೆಯೊಳಗೆ ಓಡಿ ಹೋಯಿತು.ಚಿರತೆಯೂ ನಾಯಿಯನ್ನು ಹಿಂಬಾಲಿಸಿತು.ಶಬ್ದದಿಂದಾಗಿ ಎಚ್ಚರಗೊಂಡ ಮನೆಯ ಮಾಲೀಕರು ನೋಡಿದರೆ ಮನೆಯೊಳಗೆ ಚಿರತೆ ನುಗ್ಗಿದೆ. … Continued