ವೀಡಿಯೊಗಳು…| ಹೆಬ್ರಿ : ಮೇಘ ಸ್ಫೋಟ, ದಿಢೀರ್‌ ಪ್ರವಾಹ, ಕೊಚ್ಚಿ ಹೋದ ವಾಹನಗಳು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೆಲವೆಡೆ ಭಾನುವಾರ ಮೇಘ ಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆಯಿಂದ ದಿಢೀರ್‌ ಪ್ರವಾಹ ಉಂಟಾಗಿ ಜನ ನಲುಗಿ ಹೋದ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 3:30 ರಿಂದ ಸಂಜೆ 4:30 ವರೆಗೆ ‘ಭಾರೀ ಗುಡುಗು- ಸಿಡಿಲು ಸಹಿತ ಮಳೆಯಾಗಿದ್ದು ದಿಢೀರ್ ಮೇಘ ಸ್ಫೋಟದಿಂದ ಭಾರೀ ಮಳೆ ಸುರಿದಿದೆ. ಮುದ್ರಾಡಿ … Continued

ಪ್ರಾಂಶುಪಾಲರ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೂ ತಟ್ಟಿದ ಹಿಜಾಬ್‌ ವಿವಾದ ; ತಾನೇ ಘೋಷಿಸಿ ಪ್ರಶಸ್ತಿ ತಡೆಹಿಡಿದ ಸರ್ಕಾರ…!

ಬೆಂಗಳೂರು: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿರೋಧಿ ನಿಲುವು ತೋರಿದ ಆರೋಪದ ಮೇಲೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ವರದಿಯಾಗಿದೆ. ಶಿಕ್ಷಕರ ದಿನಾಚರಣೆಯಂದು ಉಡುಪಿ ಜಿಲ್ಲೆಯ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು, ಆದರೆ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: 20 ಗಂಟೆಯೊಳಗೆ ಭಟ್ಕಳದಲ್ಲಿ ಆರೋಪಿ ಬಂಧನ

ಉಡುಪಿ: ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ ೨೦ ಗಂಟೆಯೊಳಗೆ ಬಂಧಿಸಿದ್ದಾರೆ. ಭಟ್ಕಳದ ಶುರೈಮ್‌ (22) ಬಂಧಿತ ವ್ಯಕ್ತಿ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉಡುಪಿ ಮೂಲದ ಯುವತಿ ಎರಡು ದಿನಗಳ ಹಿಂದೆ … Continued

ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ; ಇಬ್ಬರ ಬಂಧನ

ಉಡುಪಿ: ಮದ್ಯದಲ್ಲಿ ಮಾದಕ ವಸ್ತುವನ್ನು ಸೇರಿಸಿ ಕುಡಿಸಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ … Continued

ಉಡುಪಿ: ಸಿದ್ಧಿ ವಿನಾಯಕ ದೇವಸ್ಥಾನ ನಿರ್ಮಿಸಿದ್ದ ಕ್ರೈಸ್ತ ಉದ್ಯಮಿ ನಿಧನ

ಉಡುಪಿ : ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲ ಕಟ್ಟಿಸಿದ್ದ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ (80) ಭಾನುವಾರ (ಆಗಸ್ಟ್ 18) ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಐದು ದಶಕಗಳ ಕಾಲ ಉದ್ಯಮಿಯಾಗಿ ಬಳಿಕ ನಿವೃತ್ತಿಗೊಂಡು ತನ್ನ ಸ್ವಂತ ಊರಿಗೆ ಬಂದು ನೆಲೆಸಿದ್ದ ಗ್ಯಾಬ್ರಿಯಲ್, ತನ್ನ ಆರಾಧ್ಯ ದೈವ ಗಣಪತಿಗೆ ತನ್ನೂರಲ್ಲೇ ಗುಡಿ ಕಟ್ಟಿಸಿದ್ದರು…! ಶ್ರೀ ಸಿದ್ಧಿ … Continued

ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 2) ಜಿಲ್ಲೆಯ ಶಾಲೆಗಳು- ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ   ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಶುಕ್ರವಾರ … Continued

ಭಾರಿ ಮಳೆ ; ಉಡುಪಿ ಜಿಲ್ಲೆಯ 4 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ, ಕಾಪು, ಕಾರ್ಕಳ, ಹೆಬ್ರಿಯ … Continued

ನಾಗೂರು : ಮನೆಯ ಬಾವಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ…!

ಉಡುಪಿ : ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ನಾಗೂರು ಸಮೀಪದ ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ….! ನಾಗೂರು ಸಮೀಪದ ಕೊಡೇರಿ ವಡೇರ ಮಠ ವಿಶ್ವನಾಥ ಉಡುಪ ಎಂಬವರ ಮನೆಯ ಬಾವಿಯಲ್ಲಿ ಬೃಹತ್‌ ಮೊಸಳೆ ಕಂಡುಬಂದಿದ್ದು, ದಾರಿ ತಪ್ಪಿ ಬಂದ ಮೊಸಳೆ ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಮದ ಮತ್ತು … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು … Continued