ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, … Continued

ಭಾರಿ ಮಳೆ ; ಜುಲೈ 9 ರಂದು ಉಡುಪಿ ಜಿಲ್ಲೆ ಶಾಲೆಗಳು-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಭಾರೀ ಮಳೆಯ ಮುನ್ಸೂಚನೆ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 3, ಉಡುಪಿ ಜಿಲ್ಲೆ 3 ತಾಲೂಕುಗಳ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಣೆ

ಕಾರವಾರ /ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ … Continued

ಗೂಗಲ್ ಟ್ರಾನ್ಸ್‌ಲೇಟ್‌ ನಲ್ಲಿ ತುಳು ಭಾಷೆ ಸೇರ್ಪಡೆ

ಬೆಂಗಳೂರು: ಗೂಗಲ್ ಟ್ರಾನ್ಸ್​​ಲೇಟ್‌​​ನಲ್ಲಿ 110 ಭಾಷೆಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರಲ್ಲಿ ಕರ್ನಾಟಕದ ತುಳು ಭಾಷೆಗೂ ಮಾನ್ಯತೆ ದೊರೆತಿದೆ. ಈ ಹಿಂದೆ ದೇಶ- ವಿದೇಶದ 133 ಭಾಷೆಗಳಿಗೆ ಮಾತ್ರ ಗೂಗಲ್ ಅವಕಾಶ ಮಾಡಿಕೊಟ್ಟಿತ್ತು. ಈಗ ಹೊಸದಾಗಿ 110 ಭಾಷೆಗಳು ಸೇರ್ಪಡೆಗೊಂಡಿವೆ. ಈಗ ಕನ್ನಡ, ಇಂಗ್ಲಿಷ್ ಹಾಗೂ ಬೇರೆ ಭಾಷೆಯ ಪದಗಳನ್ನು ತುಳುವಿಗೆ ಭಾಷಾಂತರಿಸಿಕೊಳ್ಳಬಹುದು. ಅಲ್ಲದೆ, ಜೊತೆಗೆ ತುಳು … Continued

ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ…ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ…!

ಉಡುಪಿಯ ಶಂಕರಪುರದ ರೈತರೊಬ್ಬರು ತಮ್ಮ ತಾರಸಿ ಮೇಲಿನ ತೋಟದಲ್ಲಿ ವಿಶ್ವದ ಅತ್ಯಂತ ದುಬಾರಿ ಮತ್ತು ಹೆಚ್ಚು ಬೇಡಿಕೆಯಿರುವ ʼಮಿಯಾಜಾಕಿ ತಳಿʼಯ ಮಾವನ್ನು ಬೆಳೆದು ಅಚ್ಚರಿ ಮೂಡಿಸಿದ್ದಾರೆ. ಈ ಮಅವಿನ ಹಣ್ಣಿನ ಬೆಲೆ ಒಂದು ಕಿಲೋಗ್ರಾಂ ಗೆ 3 ಲಕ್ಷ ರೂಪಾಯಿಗಳ ವರೆಗೆ ಇರುತ್ತದೆ. ಉಡುಪಿಯ ಶಂಕರಪುರದ ರೈತರಾದ ಜೋಸೆಫ್ ಲೋಬೊ ಎಂಬವರು ತಮ್ಮ ಮನೆಯ ತಾರಸಿಯಲ್ಲಿ … Continued

ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

ಉಡುಪಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಅತಿಯಾದ ಪ್ರೀತಿ-ವ್ಯಾಮೋಹವೇ ಕೊಲೆಗೆ ಕಾರಣ

ಉಡುಪಿ : ಏರ್‌ ಇಂಡಿಯಾದ ಗಗನಸಖಿ ಮತ್ತು ಆಕೆಯ ಕುಟುಂಬದ ಮೂವರು ಸದಸ್ಯರನ್ನು ಆಕೆಯ ಸಹೋದ್ಯೋಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಮೂರು ತಿಂಗಳ ನಂತರ ಉಡುಪಿ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಫೆಬ್ರವರಿ 12 ರಂದು ಚಾರ್ಜ್‌ಶೀಟ್ ಸಲ್ಲಿಸಿದ ಮಲ್ಪೆ ಪೊಲೀಸರು, ಹತ್ಯೆಗೆ ಅತಿಯಾದ ಗೆಳೆತನ, ಪ್ರೀತಿ (Love), ವ್ಯಾಮೋಹ, … Continued

ಉಡುಪಿ: ನಾಲ್ಕನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀಗಳು

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದ್ದಾರೆ. ಪರ್ಯಾಯ ಪೂಜಾಧಿಕಾರ ಹಸ್ತಾಂತರ ಮಾಡಬೇಕಿದ್ದ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರ ಅನುಪಸ್ಥಿತಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ವಿಶ್ವಪ್ರಿಯ ತೀರ್ಥರು ಸರ್ವಜ್ಞ ಪೀಠಾರೋಹಣದ ವಿಧಿ ವಿಧಾನಗಳನ್ನು ನೆರವೇರಿಸಿದರು. ಪರ್ಯಾಯ ಮೆರವಣಿಗೆಯ … Continued

ಹಿಜಾಬ್ ವಿಚಾರ : ಸಿದ್ದರಾಮಯ್ಯ ಯಾವುದೇ ಒಂದು ಪಂಗಡದ ಮುಖ್ಯಮಂತ್ರಿಯಲ್ಲ ; ಪೇಜಾವರ ಶ್ರೀ

ಬೆಳಗಾವಿ : ಹಿಜಾಬ್ ಹಿಂಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀಗಳು ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿವಿಧ ಗುಂಪುಗಳಿಗೆ ವಿಭಿನ್ನ ಕಾನೂನುಗಳನ್ನು ಜಾರಿಗೊಳಿಸುವುದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಇಂಥದ್ದನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಕರ್ನಾಟಕದ ಎಲ್ಲರಿಗೂ ಮುಖ್ಯಮಂತ್ರಿಯಾಗಿದ್ದಾರೆ. ಸಮಾಜದಲ್ಲಿ … Continued

ಶಿರೂರು : ಸಮುದ್ರದಲ್ಲಿ ಮಗುಚಿದ ದೋಣಿ, ಇಬ್ಬರು ಮೀನುಗಾರರು ಸಾವು

ಉಡುಪಿ: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಬೈಂಂದೂರು ತಾಲೂಕು ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಶಿರೂರಿನ ಹಡವಿನಕೋಣೆಯ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್‌ ಭಟ್ಕಳದ ಮಿಸ್ಬಾ ಯೂಸುಫ್ (48) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಶಿರೂರು … Continued