ಉಳ್ಳಾಲ : ಭಾರೀ ಮಳೆಗೆ ಕಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು : ಪಕ್ಕದ ಕಂಪೌಂಡ್ ಗೋಡೆ ಮನೆ ಮೇಲೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವಿಗೀಡಾದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಹಾನ ಮಂಝಿಲ್ ಮನೆಯ ಯಾಸಿರ್ (45), ಪತ್ನಿ ಮರಿಯಮ್ಮ(40), ಪುತ್ರಿಯರಾದ ರಿಹಾನಾ (11)ಮತ್ತು ರಿಫಾನ (17) ಮೃತರು ಎಂದು ಗೊತ್ತಾಗಿದೆ. … Continued

ಉಳ್ಳಾಲ : ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ; ರಕ್ಷಿಸಿದರೂ ಬಚಾವಾಗದ ಓರ್ವ ಮಹಿಳೆ

ಮಂಗಳೂರು : ಉಳ್ಳಾಲ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರು ತೆರೆಯ ಅಬ್ಬರಕ್ಕೆ ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಯಾಗಿರುವ ಪರಿಮಿ ರತ್ನಕುಮಾರಿ (57) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳ್ಳಾಲ ಕಡಲತೀರದಲ್ಲಿ ಇವರು ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದೆ. ಅಲೆಯ … Continued

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌: ಪೊಲೀಸರಿಂದ ಫೈರಿಂಗ್

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ. 14ಕ್ಕೂ ಹೆಚ್ಚು ಪ್ರಕರಣದ ಆರೋಪಿ ರೌಡಿಶೀಟರ್ ಮುಕ್ತಾರ್ ಎಂಬವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. … Continued