‘ರಾಷ್ಟ್ರಪತ್ನಿ’ ಹೇಳಿಕೆಗೆ ವ್ಯಾಪಕ ಟೀಕೆ: ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ ಅಧೀರ್ ರಂಜನ್ ಚೌಧರಿ
ನವದೆಹಲಿ: ತಮ್ಮ ‘ರಾಷ್ಟ್ರಪತ್ನಿ’ ಹೇಳಿಕೆಗಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. ನೀವು ಹೊಂದಿರುವ ಸ್ಥಾನವನ್ನು ವಿವರಿಸಲು ತಪ್ಪಾದ ಪದವನ್ನು ಬಳಸಿದ್ದಕ್ಕಾಗಿ ನನ್ನ ವಿಷಾದವನ್ನು ವ್ಯಕ್ತಪಡಿಸಲು ನಾನು ಬರೆಯುತ್ತಿದ್ದೇನೆ. ಇದು ಬಾಯ್ತಪ್ಪಿ ಹೇಳಿದ್ದು ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. … Continued