ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ಈಗಿರುವ 34 ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಮೇ 5) ಅನುಮೋದನೆ ನೀಡಿದೆ. ಪ್ರಸ್ತುತ, ಭಾರತದ ಮುಖ್ಯ ನ್ಯಾಯಾಧೀಶರು (CJI) ಸೇರಿದಂತೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, “ಪ್ರಸ್ತುತ ಸುಪ್ರೀಂ … Continued

ಕೇರಳ ಇನ್ಮುಂದೆ ‘ಕೇರಳಂ’: ಹೆಸರು ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಒಂದು ಮಹತ್ವದ ಬೆಳವಣಿಗೆಯಲ್ಲಿ, ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ ಒಪ್ಪಿಗೆ ನೀಡಿದೆ. ನೂತನವಾಗಿ ಉದ್ಘಾಟನೆಗೊಂಡ ಪ್ರಧಾನ ಮಂತ್ರಿ ಕಾರ್ಯಾಲಯದ (PMO) ಕಟ್ಟಡವಾದ ‘ಸೇವಾ ತೀರ್ಥ’ದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ಲಭಿಸಿರುವುದು ವಿಶೇಷ. “ಕೇರಳವನ್ನು ‘ಕೇರಳಂ’ … Continued

ಜನಗಣತಿ 2027 : ಸಂಪೂರ್ಣ ಡಿಜಿಟಲ್, ದತ್ತಾಂಶ ಸಂಗ್ರಹಣೆಗೆ ಅಪ್ಲಿಕೇಶನ್‌ಗಳು ; ಇದಕ್ಕಾಗಿ ₹11,718 ಕೋಟಿ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ದೇಶದ ಮೂಲಭೂತ ದತ್ತಾಂಶ ಸಂಗ್ರಹಣಾ ಪ್ರಕ್ರಿಯೆಗೆ ಆಧುನಿಕ ಸ್ಪರ್ಶ ನೀಡುವ ನಿಟ್ಟಿನಲ್ಲಿ, ಜನಗಣತಿ 2027 ಕ್ಕೆ ಬರೋಬ್ಬರಿ ₹11,718 ಕೋಟಿ ಮೊತ್ತದ ಬೃಹತ್ ಅನುದಾನವನ್ನು ಕೇಂದ್ರ ಸಚಿವ ಸಂಪುಟವು ಶುಕ್ರವಾರ (ಡಿಸೆಂಬರ್ 12) ಅನುಮೋದಿಸಿದೆ. ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ಜನಗಣತಿ ನಡೆಯಲಿದೆ. ಹಳೆಯ … Continued

ರೈತರಿಗೆ ಸಿಹಿ ಸುದ್ದಿ ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಕೃಷಿ ಮತ್ತು ಮೂಲಸೌಕರ್ಯದ ಮೇಲೆ ಪರಿಣಾಮ ಬೀರುವ ಹಲವಾರು ಮಹತ್ವದ ಕ್ರಮಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ, ಇದರಲ್ಲಿ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಲ್ಲಿ (MSP) ಹೆಚ್ಚಳ, ರೈತರಿಗೆ ಬಡ್ಡಿ ಸಬ್ಸಿಡಿ ಯೋಜನೆಯ ಮುಂದುವರಿಕೆ ಮತ್ತು ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಾದ್ಯಂತ ಪ್ರಮುಖ ರಸ್ತೆ ಮತ್ತು ರೈಲು ಯೋಜನೆಗಳಿಗೆ ಹಸಿರು ನಿಶಾನೆ … Continued

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ವರದಿ

ನವದೆಹಲಿ: ಚುನಾವಣೆ (Election) ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ದೇಶಾದ್ಯಂತ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ನಿರ್ಣಯಿಸಿರುವ “ಒಂದು ರಾಷ್ಟ್ರ ಒಂದು ಚುನಾವಣೆ” (One Nation One Election) ಮಸೂದೆಗೆ ಇಂದು ಗುರುವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಸೂದೆಗಳನ್ನು … Continued

ಭದ್ರತೆ, ಆರ್ಥಿಕ, ರಾಜಕೀಯ ವ್ಯವಹಾರ ಸೇರಿದಂತೆ ಮೋದಿ ಸರ್ಕಾರದ ವಿವಿಧ ಸಂಪುಟ ಸಮಿತಿಗಳ ರಚನೆ : ಸಂಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ   ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.ಸಂಸ್ಥೆಗಳು ಸೇರಿದಂತೆ ವಿವಿಧ ಕ್ಯಾಬಿನೆಟ್ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ. ಸಂಪುಟ ಸಮಿತಿಗಳ ಸದಸ್ಯರಲ್ಲಿ ಬಿಜೆಪಿ ಮತ್ತು ಅದರ ಎನ್‌ಡಿಎ ಪಾಲುದಾರರಾದ ಜನತಾ ದಳ (ಯು), ತೆಲುಗು ದೇಶಂ ಪಕ್ಷ, … Continued

ಬಿಜೆಪಿಯ ಅಚ್ಚರಿಯ ಆಯ್ಕೆ ; ಮೋದಿ 3.0 ಸರ್ಕಾರದಲ್ಲಿ ಮಂತ್ರಿಯಾದ ಬಿಜೆಪಿಯ ಅಲ್ಪಸಂಖ್ಯಾತ ಮುಖ ಈ ಜಾರ್ಜ್ ಕುರಿಯನ್ ಯಾರು..?

ವಕೀಲ ಮತ್ತು ಕೇರಳ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪ್ರಧಾನ ಕಾರ್ಯದರ್ಶಿಯಾಗಿರುವ ಜಾರ್ಜ್ ಕುರಿಯನ್ ಅವರು, ಅಚ್ಚರಿಯ ರೀತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ತ್ರಿಶೂರ್ ಸಂಸದ ಸುರೇಶ ಗೋಪಿ ಅವರನ್ನು ಹೊರತುಪಡಿಸಿ ಕೇರಳದಿಂದ ಎರಡನೇ ಸಚಿವರಾಗಿ ಸಚಿವ ಸಂಪುಟ ಸೇರಿದ್ದಾರೆ. ಸಮಾಜವಾದಿಗಳ ಒಂದು ಬಣವು 1980 … Continued

ಅತ್ಯಂತ ಕಿರಿಯ ವಯಸ್ಸಿಗೆ ಕೇಂದ್ರ ಸಚಿವ : ದಾಖಲೆ ಬರೆದ ಟಿಡಿಪಿಯ ರಾಮಮೋಹನ ನಾಯ್ಡು…!

ಅಮರಾವತಿ : ನರೇಂದ್ರ ಮೋದಿ ನೇತೃತ್ವದ ಸಂಪುಟದ ಸದಸ್ಯರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ ನಾಯ್ಡು ಅವರು ಅತ್ಯಂತ ಕಿರಿಯ ವಯಸ್ಸಿನ ಕೇಂದ್ರದ ಕ್ಯಾಬಿನೆಟ್‌ ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 36 ವರ್ಷದ ರಾಮಮೋಹನ ನಾಯ್ಡು ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ … Continued

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ : ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ (sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದ್ದು, ಪ್ರತಿ ಕ್ವಿಂಟಲ್‌ಗೆ 315 ರೂಪಾಯಿಗಳಿಂದ 340 ರೂ.ಗಳಿಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದೆ. ಅಲ್ಲದೆ, ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ಡಿಐಗೆ … Continued