ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್

ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್‌ ಪ್ಲಾಟ್‌ಫಾರ್ಮ್‌ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued

ಒಳನುಸುಳುವಿಕೆ, ಇತರ ಕಾರಣಗಳಿಂದಾಗಿ ‘ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆ’ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿನ ಅಕ್ರಮ ನುಸುಳುವಿಕೆ ಹಾಗೂ ಇತರ ಕಾರಣಗಳಿಂದ ಉಂಟಾಗುತ್ತಿರುವ “ಅಸ್ವಾಭಾವಿಕ ಜನಸಂಖ್ಯೆ ಬದಲಾವಣೆ”ಯನ್ನು (ಡೆಮೋಗ್ರಫಿಕ್ ಚೇಂಜ್) ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. 2025ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಈ ಪ್ರಮುಖ ನಿರ್ಧಾರದ ಅನುಷ್ಠಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಶ್ರೇಣಿಯ ಪುನರ್ರಚನೆಗೆ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಸಂಪುಟವು ಶನಿವಾರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇಕಡಾ 2ರಷ್ಟು ಹೆಚ್ಚಿಸಲು ಒಪ್ಪಿಗೆ ನೀಡಿದೆ. ಈ ಹೆಚ್ಚಳವು ಜುಲೈ 1, 2025 ರಿಂದಲೇ ಅನ್ವಯವಾಗಲಿದ್ದು, ಬಾಕಿ ಹಣದ (Arrears) ಸಮೇತ ಪಾವತಿಸಲಾಗುತ್ತದೆ. ಇದರಿಂದ ಹಾಲಿ ನೌಕರರು ಹಾಗೂ ನಿವೃತ್ತ … Continued

ಪಿಒಕೆ ಮೇಲೆ ಭಾರತದ ಹಕ್ಕು ಪ್ರತಿಪಾದನೆ ; ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಅನ್ವಯವಾಗಲಿದೆ ಡಿಲಿಮಿಟೇಶನ್ ಮಸೂದೆ ; ಕ್ಷೇತ್ರಗಳು ನಿಗದಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಂದು ವೇಳೆ ಭಾರತದ ನಿಯಂತ್ರಣಕ್ಕೆ ಮರಳಿದರೆ, ಅಲ್ಲಿನ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲು ಅಗತ್ಯವಿರುವ ಕಾನೂನು ಚೌಕಟ್ಟನ್ನು ರೂಪಿಸುವ ‘ಡಿಲಿಮಿಟೇಶನ್ ಬಿಲ್ 2026’ (ಕ್ಷೇತ್ರ ಮರುವಿಂಗಡಣೆ ವಿಧೇಯಕ) ಅನ್ನು ಕೇಂದ್ರ ಸರ್ಕಾರ ಈ ವಾರ ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಪ್ರದೇಶದ ಮೇಲಿನ ಭಾರತದ ದೀರ್ಘಕಾಲದ ಸಾಂವಿಧಾನಿಕ … Continued

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ … Continued

ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ‘ವಂದೇ ಮಾತರಂ’ ಅನ್ನು ಇನ್ಮುಂದೆ ಅದರ ಮೂಲ 6 ಚರಣಗಳೊಂದಿಗೆ ಹಾಡಬೇಕು ಎಂದು ಗೃಹ ಸಚಿವಾಲಯವು ತಿಳಿಸಿದೆ. ರಾಷ್ಟ್ರೀಯ ಗೌರವ ಮತ್ತು … Continued

ವಕ್ಫ್ ತಿದ್ದುಪಡಿ ಕಾಯಿದೆ : ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲುನಿರಾಕರಿಸಿದ ಸುಪ್ರೀಂಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಕಾಯಿದೆಯ ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆಪ್ಟೆಂಬರ್ 14) ತಡೆ ನೀಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ … Continued

5%, 18% ಎರಡು ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ಪ್ರಸ್ತಾಪಿಸಿದ ಸರ್ಕಾರ; ಹಾನಿಕಾರಕ ವಸ್ತುಗಳಿಗೆ 40% ಜಿಎಸ್‌ಟಿ ಸಾಧ್ಯತೆ: ಮೂಲಗಳು

ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಕೇವಲ ಎರಡು ಸ್ಲ್ಯಾಬ್‌ಗಳಾದ 5% ಮತ್ತು 18% ಮಾತ್ರ ಉಳಿಸಿಕೊಳ್ಳಲು ಕೇಂದ್ರವು ಪ್ರಸ್ತಾಪಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಈ ಪ್ರಸ್ತಾವನೆಯಡಿಯಲ್ಲಿ, 28% ರಲ್ಲಿರುವ ಶೇಕಡಾ 90 ರಷ್ಟು ವಸ್ತುಗಳನ್ನು 18%ರ ಸ್ಲ್ಯಾಬ್‌ಗೆ ತರಲಾಗುತ್ತದೆ, ಶೇಕಡಾ 12 ರಷ್ಟು ಸ್ಲ್ಯಾಬ್‌ನಲ್ಲಿರುವ ಶೇಕಡಾ 99 ರಷ್ಟು … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued

ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ಬೆಂಗಳೂರು : ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 8682 (MSP) ರೂ.ಗಳಂತೆ 2215 ಮೆಟ್ರಿಕ್‌ ಟನ್‌ ಹೆಸರುಕಾಳು ಖರೀದಿಸಲು ಅನುಮತಿ ನೀಡಿದೆ. … Continued