ಅಪಾಯಕಾರಿ 23 ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮನುಷ್ಯನ ಜೀವಕ್ಕೆ ಅಪಾಯವಾಗಬಹುದಾದ 23 ಭೀಷಣ ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಸುತ್ತೋಲೆಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ತಜ್ಞರು ಸಂಬಂಧಿತ ಯಾರನ್ನೂ ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ ಹ್ಯಾಂಡ್ಲರ್‌ ಮತ್ತು ರಾಟ್‌ವೈಲರ್‌ … Continued

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ … Continued

1 ಕೋಟಿ ಕುಟುಂಬಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವ ಸೌರ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ : ಏನಿದು ಯೋಜನೆ..?

ನವದೆಹಲಿ: ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜಿಸುವ ಪ್ರಯತ್ನದಲ್ಲಿ ಮೇಲ್ಛಾವಣಿಯ ಸೌರ ವ್ಯವಸ್ಥೆಗಳನ್ನು ಸ್ಥಾಪಿಸಲು 1 ಕೋಟಿ ಕುಟುಂಬಗಳಿಗೆ ₹ 78,000 ವರೆಗೆ ನೆರವು ಒದಗಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು ತಿಂಗಳಿಗೆ 300 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ ಠಾಕೂರ್ ಅವರು, … Continued

1ನೇ ತರಗತಿಗೆ ಪ್ರವೇಶ ಪಡೆಯಲು ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಶಿಕ್ಷಣ ಸಚಿವಾಲಯವು 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಬೇಕಾದ ವಯಸ್ಸಿನ ಅರ್ಹತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ಪತ್ರ ಹೊರಡಿಸಿದೆ. 2024-25ರ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯಸ್ಸನ್ನು ನಿಗದಿಪಡಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಕೆಜಿಗೆ 29 ರೂ.ಗಳಂತೆ ‘ಭಾರತ ರೈಸ್’ ಅಕ್ಕಿ ಮಾರಾಟ ಮಾಡಲಿದೆ ಕೇಂದ್ರ ಸರ್ಕಾರ

ನವದೆಹಲಿ: ಜನಸಾಮಾನ್ಯರಿಗೆ ಅನುಕೂಲವಾಗಲು ಮುಂದಿನ ವಾರದಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ ರೈಸ್’ ಅನ್ನು ಪ್ರತಿ ಕೆಜಿಗೆ 29 ರೂ.ಗಳಿಗೆ ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಹಾಗೂ ಅದರ ನಿಯಂತ್ರಣದ ಭಾಗವಾಗಿ ಅಕ್ಕಿ/ಭತ್ತದ ದಾಸ್ತಾನಿನ ಬಗ್ಗೆ ಮಾಹಿತಿ ನೀಡುವಂತೆ ವ್ಯಾಪಾರಿಗಳಿಗೆ ನಿರ್ದೇಶನ ನೀಡಿದೆ. ಕಳೆದ ಒಂದು ವರ್ಷದಲ್ಲಿ ಅಕ್ಕಿ ಬೆಲೆ ಸುಮಾರು 15 ಪ್ರತಿಶತದಷ್ಟು … Continued

ಟ್ವಿಟರ್ ದೇಶದಲ್ಲಿ ಬಿಸಿನೆಸ್‌ ಮಾಡಬಹುದು, ಆದರೆ ಈ ದೇಶದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಹೊರಡಿಸಿರುವ ಟ್ವಿಟರ್‌ ಖಾತೆಗಳ ನಿರ್ಬಂಧ ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬಿಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಅದು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋಟ್‌ಗೆ … Continued

ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲ; ಹೈಕೋರ್ಟಿಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)- 2020 ಮತ್ತು ಅದರ ನಿಬಂಧನೆಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಬಂಧನೆಗಳನ್ನು ಪುನರ್‌ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ. ಪದವಿ ಹಂತದಲ್ಲಿ … Continued

ಮಹತ್ವದ ನಿರ್ಧಾರ.. ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ನೋಂದಣಿ -ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್‌ ವಿರುದ್ಧದ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುವುದು ಅಥವಾ ಅಪಾಯಿಂಟ್​ಮೆಂಟ್ ಪಡೆದುಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ (ಜೂನ್ 15) ಮಾಹಿತಿ ನೀಡಿದೆ. ಗ್ರಾಮೀಣ ಭಾಗದ ಹಲವು ಮಂದಿ ಲಸಿಕೆ ಪಡೆಯುವಲ್ಲಿ ಕಷ್ಟ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ನೋಂದಣಿ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ. 18ವರ್ಷ ಮೇಲ್ಪಟ್ಟ ವ್ಯಕ್ತಿಗಳು ನೇರವಾಗಿ ಹತ್ತಿರದ ಲಸಿಕಾ … Continued

‘ಕೋವಿನ್ ಹ್ಯಾಕ್ ಮಾಡಲು ಸಾಧ್ಯವಿಲ್ಲ; ಒಟಿಪಿ, ಕ್ಯಾಪ್ಚಾ ಬೈಪಾಸ್ ಮಾಡಲು ಆಗುವುದಿಲ್ಲ:ಸರ್ಕಾರ

ನವ ದೆಹಲಿ: ಕೋವಿಡ್ -19 ವ್ಯಾಕ್ಸಿನೇಷನ್ ನೇಮಕಾತಿಗಳ ಡಿಜಿಟಲ್ ಪ್ಲಾಟ್‌ಫಾರ್ಮ್ – ಕೊವಿನ್ ಪೋರ್ಟಲ್ ಕೆಲವು ವಿಭಾಗಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆಯನ್ನು ಹ್ಯಾಕ್ ಮಾಡಲು “ಡಿಜಿಟಲ್ ವಿಭಜನೆಯನ್ನು ಸೃಷ್ಟಿಸುತ್ತದೆ ಮತ್ತು ನಿರ್ಲಜ್ಜ ಅಂಶಗಳನ್ನು ಅನುಮತಿಸುತ್ತದೆ” ಎಂಬ ಕೆಲವು “ಆಧಾರರಹಿತ” ಮಾಧ್ಯಮ ವರದಿಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಳ್ಳಿಹಾಕಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಯ ಸಂಕೀರ್ಣತೆಯ ಬಗ್ಗೆ ಮೂಲಭೂತ ಗ್ರಹಿಕೆಯ … Continued