ಇರಾನಿನಿಂದ ಹಾರ್ಮುಜ್ ಜಲಸಂಧಿ ಬಂದ್ : ಪುನರಾರಂಭಕ್ಕೆ ಕೋರಿದ್ದ ವಿಶ್ವಸಂಸ್ಥೆ ನಿರ್ಣಯಕ್ಕೆ ರಷ್ಯಾ, ಚೀನಾ ‘ವೀಟೋ’ ತಡೆ

ವಿಶ್ವಸಂಸ್ಥೆ : ಇರಾನ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಪುನರಾರಂಭಿಸುವ ಉದ್ದೇಶ ಹೊಂದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ರಷ್ಯಾ ಮತ್ತು ಚೀನಾ ಮಂಗಳವಾರ ವೀಟೋ (ನಿಷೇಧಾಧಿಕಾರ ಚಲಾಯಿಸಿವೆ) ಮಾಡಿವೆ. 15 ರಾಷ್ಟ್ರಗಳ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಬಹ್ರೇನ್ ಪ್ರಸ್ತಾಪಿಸಿದ ನಿರ್ಣಯದ ಮೇಲೆ ಮತದಾನ ನಡೆಸಿತು. … Continued

ಇರಾನ್ ಮೇಲೆ ಪರಮಾಣು ಅಸ್ತ್ರ ಬಳಕೆ ಸಿದ್ಧತೆ ಬಗ್ಗೆ ಎಚ್ಚರಿಸಿ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿ ರಾಜೀನಾಮೆ

ವಿಶ್ವಸಂಸ್ಥೆಯ ರಾಜತಾಂತ್ರಿಕರೊಬ್ಬರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ (ECOSOC) ವಿಶೇಷ ಸಲಹಾ ಸ್ಥಾನಮಾನ ಹೊಂದಿರುವ ಅಂತಾರಾಷ್ಟ್ರೀಯ ಸಂಸ್ಥೆ ‘ಪೇಟ್ರಿಯಾಟಿಕ್ ವಿಷನ್’ (PVA) ನ ಮುಖ್ಯ ಪ್ರತಿನಿಧಿ ಮೊಹಮದ್ ಸಫಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇರಾನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಂಭವನೀಯ ಸನ್ನಿವೇಶಕ್ಕೆ ವಿಶ್ವಸಂಸ್ಥೆಯು ಸಿದ್ಧತೆ ನಡೆಸುತ್ತಿದೆ … Continued

ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಅದರ ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ

ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು … Continued

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ಸರಿಯಾದ ಸ್ಥಾನ’ ಸಿಗಬೇಕು: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್

ಮುಂಬೈ: ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತನ್ನ ‘ಸರಿಯಾದ ಸ್ಥಾನ’ವನ್ನು ಪಡೆಯಬೇಕು ಎಂದು ಬ್ರಿಟನ್‌ ಪ್ರಧಾನಿ ಸರ್ ಕೀರ್ ಸ್ಟಾರ್ಮರ್ ಗುರುವಾರ ಮುಂಬೈನಲ್ಲಿ ನಡೆದ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಂಬೈನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ, ಸ್ಟಾರ್ಮರ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ … Continued

ವೀಡಿಯೊಗಳು | ನಿಮ್ಮ ನಾಶವಾದ ರನ್‌ ವೇಗಳು ನಿಮಗೆ ʼವಿಜಯʼದಂತೆ ಕಾಣುತ್ತಿವೆಯೇ?”; ಪಾಕ್‌ ಪ್ರಧಾನಿ ಹೇಳಿಕೆಗೆ ಭಾರತ ವ್ಯಂಗ್ಯ

ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ “ಮತ್ತೊಮ್ಮೆ ಭಯೋತ್ಪಾದನೆಯನ್ನು ವೈಭವೀಕರಿಸಿದ್ದಕ್ಕಾಗಿ” ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರದ್ದು “ಅಸಂಬದ್ಧ ನಾಟಕ” ಎಂದು ಭಾರತ ಶನಿವಾರ ಟೀಕಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರತ್ಯುತ್ತರ ನೀಡುವ ಹಕ್ಕನ್ನು ಚಲಾಯಿಸುವಾಗ, ಭಾರತದ ರಾಜತಾಂತ್ರಿಕರಾದ ಪೆಟಲ್ ಗಹ್ಲೋಟ್ ಭಯೋತ್ಪಾದನೆ “ಅವರ (ಪಾಕಿಸ್ತಾನದ) ವಿದೇಶಾಂಗ ನೀತಿಯ ಕೇಂದ್ರಬಿಂದುವಾಗಿದೆ” ಎಂದು ಹೇಳಿದರು. ಶುಕ್ರವಾರ ನಡೆದ ವಿಶ್ವಸಂಸ್ಥೆಯ … Continued

ಭಾರತ -ಪಾಕ್ ಯುದ್ಧ ಸೇರಿ 7 ತಿಂಗಳಲ್ಲಿ ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ : ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಟ್ರಂಪ್ ಬಡಾಯಿ…

ವಿಶ್ವಸಂಸ್ಥೆ : ಇತರರು ಅಸಾಧ್ಯವೆಂದು ಕರೆದದ್ದನ್ನು ನಾನು ಕೇವಲ ಏಳು ತಿಂಗಳಲ್ಲಿ ಸಾಧಿಸಿದ್ದೇನೆ. ಏಳು “ಅಂತ್ಯವಿಲ್ಲದ” ಯುದ್ಧಗಳನ್ನು ಕೊನೆಗೊಳಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದ ಮಾತನಾಡುವಾಗ ಹೇಳಿಕೊಂಡಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ತಲುಪುವುದರಲ್ಲಿ ತಮ್ಮ ಪಾತ್ರವಿದೆ ಎಂಬ … Continued

ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

3 ದಿನಗಳ ಅಮೆರಿಕ ಭೇಟಿಗೆ ಪ್ರಧಾನಿ ಮೋದಿ ಪಯಣ ; ಅಜೆಂಡಾದಲ್ಲಿ ಏನಿದೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ, ಅಲ್ಲಿ ಅವರು ಸೆಪ್ಟೆಂಬರ್ 21 ರಂದು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ಕ್ವಾಡ್ ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ತವರು ವಿಲ್ಮಿಂಗ್ಟನ್‌ನಲ್ಲಿ ಆಯೋಜಿಸಿದ್ದಾರೆ. ಅವರ ಮೂರು ದಿನಗಳ ಅಮೆರಿಕ … Continued

2100ರ ಹೊತ್ತಿಗೆ ಭಾರತದ ಜನಸಂಖ್ಯೆಯಲ್ಲಿ ಕುಸಿತ, ಆದ್ರೂ ಚೀನಾಕ್ಕಿಂತ 2.5 ಪಟ್ಟು ಹೆಚ್ಚು…! ಭಾರತದ ಜನಸಂಖ್ಯೆ ಎಷ್ಟಾಗಲಿದೆ ಗೊತ್ತಾ..?

ವಿಶ್ವಸಂಸ್ಥೆ: ಭಾರತದ ಜನಸಂಖ್ಯೆಯು 2060ರ ದಶಕದ ಆರಂಭದಲ್ಲಿ ಸುಮಾರು 170 ಶತಕೋಟಿಗೆ ಏರುತ್ತದೆ ಮತ್ತು ನಂತರ ಶೇಕಡಾ 12 ರಷ್ಟು ಕುಸಿಯುತ್ತದೆ ಎಂದು ಅಂದಾಜಿಸಲಾಗಿದೆ, ಆದರೆ ದೇಶವು ಶತಮಾನದುದ್ದಕ್ಕೂ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶವಾಗಿಯೇ ಇರುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ಗುರುವಾರ ಬಿಡುಗಡೆಯಾದ ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ 2024 ವರದಿಯು, ಮುಂಬರುವ 50-60 … Continued

50 ವರ್ಷಗಳ ಹಿಂದೆ ಸತತವಾಗಿ 120 ಗಂಟೆಗಳ ಕಾಲ ಹಸಿವಿನಿಂದ ಬಳಲಿದ ಘಟನೆ ನೆನಪಿಸಿಕೊಂಡ ಇನ್ಫೋಸಿಸ್ ನಾರಾಯಣಮೂರ್ತಿ

ವಿಶ್ವಸಂಸ್ಥೆ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 50 ವರ್ಷಗಳ ಹಿಂದೆ ನಿರಂತರ 120 ಗಂಟೆ ಕಾಲ ಹಸಿವಿನಿಂದ ಬಳಲಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಗೆ ಭಾರತದ ಪರ್ಮನೆಂಟ್ ಮಿಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುರೋಪ್‌ನಲ್ಲಿ ಹಿಚ್‌ಹೈಕಿಂಗ್ ಮಾಡುವಾಗ 120 ಗಂಟೆಗಳ ಕಾಲ “ಹಸಿವನ್ನು ಅನುಭವಿಸಿದ್ದೆ” ಎಂದು ನಾರಾಯಣ ಮೂರ್ತಿ … Continued