ಮುಂದಿದೆ ಸವಾಲಿನ ಹಾದಿ, ಎಲ್ಲ ಹಂತಗಳಲ್ಲಿ ಒಗ್ಗಟ್ಟು ಬೇಕು: ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಬಂಡಾಯ ಗುಂಪಿಗೆ ಸುಳಿವು ನೀಡಿದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಸಾಧನೆ “ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ” ಎಂದು ಹೇಳಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮುಂದಿನ ಹಾದಿಯು ಹಿಂದೆಂದಿಗಿಂತಲೂ ಹೆಚ್ಚು ಸವಾಲಿನದ್ದಾಗಿದೆ ಮತ್ತು ಸಂಘಟನೆಯ ಎಲ್ಲ ಹಂತಗಳಲ್ಲಿ ಒಗ್ಗಟ್ಟು ಅತಿಮುಖ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಮಂಗಳವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ಪಕ್ಷವು ಒಗ್ಗಟ್ಟಿನಿಂದ ಇರುವುದನ್ನು … Continued