ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ರಾಹುಲ್​ ಗಾಂಧಿ ಹೊಲಿಗೆ ಹಾಕಿದ್ದ ಚಪ್ಪಲಿಗೆ ಡಿಮಾಂಡಪ್ಪೋ ಡಿಮಾಂಡು : ಚಪ್ಪಲಿಗೆ ₹10 ಲಕ್ಷದ ಆಫರ್‌ ತಿರಸ್ಕರಿಸಿದ ಅಂಗಡಿಯಾತ..!

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ (Rahul Gandhi) ಸುಲ್ತಾನ್​ಪುರಕ್ಕೆ ಹೋಗಿದ್ದಾಗ ಚಪ್ಪಲಿ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ವೇಳೆ ಅವರು ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಈಗ ಚಿನ್ನದ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಮುಂದೆ ಬಂದಿದ್ದಾರೆ. ರಾಹುಲ್ ಗಾಂಧಿ ಜುಲೈ 26ರಂದು ಮಾನನಷ್ಟ … Continued

ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಹಾಗೂ ೨೦ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಿಬ್ರುಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದವು. ಹಿರಿಯ ರೈಲ್ವೇ ಮತ್ತು ಸ್ಥಳೀಯ … Continued

ಈ ವ್ಯಕ್ತಿಗೆ ಕೇವಲ 40 ದಿನದಲ್ಲಿ 7 ಸಲ ಹಾವು ಕಚ್ಚಿದೆ..! ಅದೂ ಶನಿವಾರವೇ ಹಾವು ಕಚ್ಚಿದೆ…!! ವಿಚಿತ್ರ ಸಂಗತಿಯ ತನಿಖೆಗೆ ಸಮಿತಿ ರಚನೆ

ಫತೇಪುರ: ಉತ್ತರ ಪ್ರದೇಶದ ಫತೇಪುರದಲ್ಲಿ 24 ವರ್ಷದ ಯುವಕನಿಗೆ ಒಂದಲ್ಲ ಎರಡಲ್ಲ, ಕಳೆದ 40 ದಿನಗಳಲ್ಲಿ ಬರೋಬ್ಬರಿ 7 ಬಾರಿ ಹಾವು ಕಚ್ಚಿದೆ. ಕುತೂಹಲಕಾರಿ ಸಂಗತಿಯೆಂದರೆ ಆ ವ್ಯಕ್ತಿಗೆ ಶನಿವಾರವೇ ಹಾವು ಕಚ್ಚಿರುವುದು ವಿಶೇಷವಾಗಿದೆ…! ಹಾವಿನಿಂದ ಕಚ್ಚಿಸಿಕೊಂಡ ಯುವಕನನ್ನು ಕಡಿತದ ನಂತರ ವಿಕಾಸ ದುಬೆ ಎಂದು ಗುರುತಿಸಲಾಗಿದ್ದು, ಆತನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯಕ್ಕೆ … Continued

ಆಘಾತಕಾರಿ..| ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆಗೆ ವಿರೋಧ ; ತಂದೆ-ತಾಯಿ, ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿದ 15 ವರ್ಷದ ಬಾಲಕ…!

ಗಾಜಿಪುರ: ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ವಿರೋಧಿಸಿದ ತಂದೆ-ತಾಯಿ ಮತ್ತು ಸಹೋದರನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಾಜಿಪುರದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7-8 ರ ರಾತ್ರಿ ನಂದಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ನಡೆದ ಕೊಲೆಗಳಿಗೆ ಬಳಸಿದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಾಪರಾಧಿಯನ್ನು … Continued

ಪ್ರಾಂಶುಪಾಲೆಯನ್ನು ಅವರ ಕೊಠಡಿಯಿಂದ ಬಲವಂತವಾಗಿ ಹೊರದಬ್ಬಿದ ಶಾಲಾ ಆಡಳಿತ ಮಂಡಳಿ : ವೀಡಿಯೊ ವೈರಲ್‌

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಬಿಷಪ್ ಜಾನ್ಸನ್ ಗರ್ಲ್ಸ್ ಹೈಸ್ಕೂಲ್​​ನ ಪ್ರಾಂಶುಪಾಲೆ ಪಾರುಲ್ ಸೊಲೊಮನ್ ಅವರನ್ನು ಆಡಳಿತ ಮಂಡಳಿಯು ಬಲವಂತವಾಗಿ ಅವರ ಕಚೇರಿಯಿಂದ ಹೊರದಬ್ಬಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈರಲ್​​ ಆದ ವೀಡಿಯೊದಲ್ಲಿ ಪ್ರಾಂಶುಪಾಲೆ ಪಾರುಲ್ ಅವರನ್ನು ಕುರ್ಚಿಯಿಂದ ಬಲವಂತದಿಂದ ಎಳೆದುಹಾಕಿ ಅದೇ ಸ್ಥಾನಕ್ಕೆ ಹೊಸ ಪ್ರಾಂಶುಪಾಲರನ್ನು ಕೂಡ್ರಿಸಿರುವುದು ಕಂಡುಬಂದಿದೆ. ಸಂಸ್ಥೆಯ ಅಧ್ಯಕ್ಷರ … Continued

ಮಾಲೀಕ ಯಾರೆಂದು ನಿರ್ಧರಿಸಲು ಪೊಲೀಸರು, ಪಂಚಾಯ್ತಿಗೆ ಸಾಧ್ಯವಾಗದಿದ್ದಾಗ ಅದನ್ನು ಬಗೆಹರಿಸಿದ ಎಮ್ಮೆ…!

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪಗಢದ ಪೊಲೀಸರು ಕೆಲ ದಿನಗಳ ಹಿಂದೆ ತನ್ನ ಮಾಲೀಕನ ಮನೆಯಿಂದ ನಾಪತ್ತೆಯಾಗಿದ್ದ ಎಮ್ಮೆಯೊಂದು ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ವಿಶಿಷ್ಟವಾದ ಮಾರ್ಗೋಪಾಯದ ಮೂಲಕ ಕಳೆದು ಹೋದ ಎಮ್ಮೆಯ ಮಾಲೀಕ ಯಾರು ಎಂದು ಕಂಡುಹಿಡಿದಿದ್ದಾರೆ. ಎಮ್ಮೆ ಯಾರಿಗೆ ಸೇರಿದ್ದು ಎಂಬ ಸಮಸ್ಯೆ ಬಗೆಹರಿಸುವಲ್ಲಿ ಪಂಚಾಯ್ತಿ ವಿಫಲವಾದ ಕಾರಣ ಪೊಲೀಸರು ಎಮ್ಮೆಯ ನಿಜವಾದ … Continued

ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued