ವಿಷಕಾರಿ ಇಂಜೆಕ್ಷನ್ ನೀಡಿ ಹಿರಿಯ ಬಿಜೆಪಿ ನಾಯಕನ ಹತ್ಯೆ….!?

ಸಂಭಲ್‌ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಬಿಜೆಪಿಯ ಹಿರಿಯ ನಾಯಕರೊಬ್ಬರು ಸೋಮವಾರ “ನಿಗೂಢ ರೀತಿಯಲ್ಲಿ” ಸಾವಿಗೀಡಾಗಿದ್ದಾರೆ. ಅವರನ್ನು ವಿಷಪೂರಿತ ಚುಚ್ಚುಮದ್ದಿನ ಮೂಲಕ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಹೊರಬಿದ್ದಿವೆ. ವರದಿಗಳ ಪ್ರಕಾರ, ಮೃತ ಬಿಜೆಪಿ ನಾಯಕ ಗುಲ್ಫಾಮ್ ಸಿಂಗ್ ಯಾದವ್ (60) ಮಧ್ಯಾಹ್ನ 1 ಗಂಟೆ ಸುಮಾರಿಗೆ ದಫ್ತಾರಾ ಗ್ರಾಮದ … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಪ್ರಯಾಗರಾಜ್‌ ತ್ರಿವೇಣಿ ಸಂಗಮ ನೀರು ಸ್ನಾನಕ್ಕೆ ಯೋಗ್ಯವಲ್ಲ ; ಸಿಪಿಸಿಬಿ ವರದಿಯಲ್ಲಿ ಬಹಿರಂಗ

ಪ್ರಯಾಗರಾಜ್‌ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ ಮಂಗಳವಾರ 55 ಕೋಟಿ ದಾಟಿದ್ದು, ಹೊಸ ದಾಖಲೆ ಬರೆದಿದೆ. ಆದರೆ ಇದೇವೇಳೆ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದ ಹಲವೆಡೆ ನದಿಯ ನೀರು ಕಲುಷಿತವಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂಬ ವರದಿಯೊಂದು ಬಹಿರಂಗಪಡಿಸಿದೆ. ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವಾರು ಸ್ಥಳಗಳು ನೀರಿನಲ್ಲಿ ಹೆಚ್ಚಿನ ಪ್ರಮಾಣದ ಫೀಕಲ್ ಕೋಲಿಫಾರ್ಮ್‌ನಿಂದಾಗಿ … Continued

5 ವರ್ಷದ ಮಗಳು ಬಿಡಿಸಿದ ಚಿತ್ರದಿಂದ ಬಯಲಾಯ್ತು ಆತ್ಮಹತ್ಯೆ ಎಂದು ನಂಬಿದ್ದ ಆಕೆಯ ತಾಯಿಯ ಕೊಲೆ ರಹಸ್ಯ….!

ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಬಭಾವಿಸಲಾಗಿದ್ದ ಈ ಘಟನೆಯನ್ನು ಇದು ಕೊಲೆ ಎಂದು ಅವರ ಐದು ವರ್ಷದ ಮಗಳು ಪೇಂಟಿಂಗ್‌ ಮೂಲಕ ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವವನ್ನು ಪ್ರಾರಂಭದಲ್ಲಿ ಎಲ್ಲರೂ ಆತ್ಮಹತ್ಯೆಯೆಂದೇ ಭಾವಿಸಿದ್ದರು.. ಆದರೆ ಆ ದಂಪತಿಯ … Continued

ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ

ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued

ʼಹೈ ಹೀಲ್ಸ್‌ʼ ಚಪ್ಪಲಿ ಕೊಡಿಸಿಲ್ಲವೆಂದು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಹೆಂಡತಿ…!

ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ಅಸಮಾಮಾನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಗಂಡ ಎತ್ತರದ ಹಿಮ್ಮಡಿಯ (ಹೈ ಹೀಲ್ಸ್‌) ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ…! ಹೈ ಹೀಲ್ಸ್‌ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ ವಿಚ್ಛೇದನ ಹಂತಕ್ಕೆ ತಲುಪಿದ್ದು, ಇಲ್ಲಿ ಪತಿ ಪತ್ನಿಯರ ಮಧ್ಯೆ ಸಂಧಾನ ನಡೆಸಿ ಮನೆಗೆ … Continued

ಮಹಾಕುಂಭ ಮೇಳ 2025 : ಪ್ರಯಾಗರಾಜ್‌ ನಲ್ಲಿದ್ದಾರೆ ಈಗ ಸುಮಾರು 10 ಕೋಟಿ ಭಕ್ತರು…!

ಪ್ರಯಾಗರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿ “ನಿಯಂತ್ರಣದಲ್ಲಿದೆ” ಮತ್ತು ‘ಮೌನಿ ಅಮಾವಾಸ್ಯೆ’ ಸಂದರ್ಭದಲ್ಲಿ ‘ಅಮೃತ ಸ್ನಾನ’ (ರಾಯಲ್ ಟಬ್) ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. “ಘಟನೆಯು ಮಂಗಳವಾರ ಮಧ್ಯರಾತ್ರಿ 1 ಗಂಟೆ ಮತ್ತು 2 … Continued

ವೀಡಿಯೊ..| ನಡುರಸ್ತೆಯಲ್ಲೇ ಆಟೋ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ ; ವೀಡಿಯೊ ವೈರಲ್‌ ಆದ ನಂತರ ದೂರು ದಾಖಲಿಸಿದ ಚಾಲಕ

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಪ್ರಯಾಣ ದರದ ಬಗ್ಗೆ ಉಂಟಾದ ಜಗಳದ ನಂತರ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಥಳಿಸಿದ ವೀಡಿಯೊ ವೈರಲ್ ಆಗಿದೆ. ಪ್ರಿಯಾಂಶಿ ಪಾಂಡೆ ಎಂಬ ಯುವತಿ ಆಟೋ ಡ್ರೈವರ್ ವಿಮಲೇಶಕುಮಾರ ಶುಕ್ಲಾ ಎಂಬವರನ್ನು ಬೈಯುತ್ತ ಸೀಟಿನಿಂದ ಎಳೆಯಲು ಪ್ರಯತ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕೈಮುಗಿದು ಬೇಡಿಕೊಂಡರೂ ಆಕೆ ಆತನಿಗೆ ಥಳಿಸುತ್ತಿರುವುದನ್ನು ವೀಡಿಯೊ ತೋರಿಸಿದೆ. ಆಟೋ … Continued

ಮಹಾಕುಂಭ 2025 | ಜ.16 ರಂದು 10 ದೇಶಗಳ 21 ಪ್ರತಿನಿಧಿಗಳಿಂದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

ಪ್ರಯಾಗರಾಜ್‌ : 10 ದೇಶಗಳ 21 ಪ್ರತಿನಿಧಿಗಳನ್ನು ಒಳಗೊಂಡ ಅಂತಾರಾಷ್ಟ್ರೀಯ ನಿಯೋಗವು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಸಿದ್ಧವಾಗಿದೆ. ಜಾಗತಿಕ ಗಮನವನ್ನು ಸೆಳೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಸಂಯೋಜಿಸಲ್ಪಟ್ಟ ಈ ಕಾರ್ಯಕ್ರಮವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. ಫಿಜಿ, ಫಿನ್‌ಲ್ಯಾಂಡ್, ಗಯಾನಾ, ಮಲೇಷ್ಯಾ, ಮಾರಿಷಸ್, ಸಿಂಗಾಪುರ, ದಕ್ಷಿಣ … Continued

ವೀಡಿಯೊ…| ಹೆಲ್ಮೆಟ್ ಇಲ್ಲದ್ದಕ್ಕೆ ಪೆಟ್ರೋಲ್ ಕೊಡಲ್ಲ ಎಂದ ಪೆಟ್ರೋಲ್‌ ಪಂಪ್‌ ಸಿಬ್ಬಂದಿ ; ಪಂಪ್‌ ಸಿಬ್ಬಂದಿಗೆ ʼಕತ್ತಲುʼ ಶಿಕ್ಷೆ ನೀಡಿದ ವ್ಯಕ್ತಿ…!

ಲಕ್ನೋ : ‘ಹೆಲ್ಮೆಟ್ ಇಲ್ಲ, ಪೆಟ್ರೋಲ್ ಇಲ್ಲ’ ನಿಯಮವನ್ನು ಅನುಸರಿಸಲು ಪೆಟ್ರೋಲ್‌ ಪಂಪ್ ಸಿಬ್ಬಂದಿ ಹೇಳಿದ ನಂತರ ಇದು ಯಾರೂ ಊಹಿಸಿರದ ಪರಿಣಾಮಗಳಿಗೆ ಕಾರಣವಾದ ಘಟನೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಹೆಲ್ಮೆಟ್‌ ಇಲ್ಲದ ಕಾರಣಕ್ಕೆ ಪೆಟ್ರೋಲ್‌ ಪಂಪ್‌ನವರು ಇಂಧನ ನಿರಾಕರಿಸಿದ ನಂತರ ವಿದ್ಯುತ್‌ ಇಲಾಖೆಯ ನೌಕರನಾಗಿದ್ದ ಬೈಕ್ ಸವಾರ … Continued