ಮಹಾಕುಂಭ 2025 : ತಲೆ ಮೇಲೆ 45 ಕಿಲೋ ತೂಕದ ರದ್ರಾಕ್ಷಿ ಸರ ಹೊತ್ತ ಸನ್ಯಾಸಿ….!

ಪ್ರಯಾಗರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜದ ಸಂಗಮದ ಮಹಾ ಕುಂಭ 2025 ಸೋಮವಾರದಿಂದ ಆರಂಭವಾಗಿದೆ. ಇಲ್ಲಿ ಸೇರುವ ಸಂತರು ಮತ್ತು ಭಕ್ತ ಸಾಗರದ ನಡುವೆ, ಅತೀಂದ್ರಿಯ ಮತ್ತು ತಪಸ್ವಿಗಳ ಒಂದು ಅನನ್ಯ ಸಮೂಹ ಇದೆ, ಅವರ ನಿಗೂಢ ನೋಟ ಮತ್ತು ಅಸಾಧಾರಣ ಆಚರಣೆಗಳು ಅವರನ್ನು ಧಾರ್ಮಿಕ ಉತ್ಸವದಲ್ಲಿ ಆಕರ್ಷಣೆಯ ಕೇಂದ್ರವನ್ನಾಗಿ ಮಾಡಿದೆ. ಅಂಥವರಲ್ಲಿ ರುದ್ರಾಕ್ಷ ಬಾಬಾ … Continued

ವೀಡಿಯೊ..| ಶಾಪಿಂಗ್ ಮಾಲ್‌ ಗೆ ನುಗ್ಗಿದ ಮಂಗ, ಮಹಿಳೆ ಮೇಲೆ ದಾಳಿ; ಹಿಡಿಯಲು ಹೋದವರಿಗೆ ಚಳ್ಳೆ ಹಣ್ಣು ತಿನ್ನಿಸಿದ ವಾನರ..

ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯ ಮಾಲ್‌ನಲ್ಲಿ ಕೋತಿಯೊಂದು ಮಹಿಳಾ ಗ್ರಾಹಕರೊಬ್ಬರ ಮೇಲೆ ದಾಳಿ ಮಾಡಿದ ನಂತರ ಗೊಂದಲ ಉಂಟಾದ ಘಟನೆ ವರದಿಯಾಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಝಾನ್ಸಿಯ ಸಿಟಿ ಕಾರ್ ಮಾಲ್‌ನಲ್ಲಿರುವ ಅಂಗಡಿಯೊಳಗೆ ಮಂಗವೊಂದು ಓಡಾಡುತ್ತಿರುವುದು ಕಂಡುಬಂದಿದೆ. ಮಂಗವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಅದರಿಂದ ತಪ್ಪಿಸಿಕೊಳ್ಳುತ್ತ ಮಂಗವು ಎಲ್ಲೆಂದರಲ್ಲಿ ಓಡಾಡಿದೆ. ಇದ್ದಕ್ಕಿದ್ದಂತೆ ಕೋತಿ ಭಯದಿಂದ ಕುಳಿತಿದ್ದ … Continued

ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ….!

ಮೀರತ್ : ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್‌  ಗಾರ್ಡನ್‌ ನಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಓರ್ವ ಪುರುಷ, ಓರ್ವ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ … Continued

ಗಂಡ, ಆರು ಮಕ್ಕಳನ್ನು ತೊರೆದು ಭಿಕ್ಷುಕನ ಜೊತೆ ಓಡಿಹೋದ ಮಹಿಳೆ…!

ಹರ್ದೋಯ್ : ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಮತ್ತು ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಓಡಿಹೋದ ಘಟನೆ ನಡೆದಿದೆ. ಪತಿ ರಾಜು ಅಪಹರಣದ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ ನಂತರ ಮಹಿಳೆ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ದೂರಿನಲ್ಲಿ, 45 ವರ್ಷದ … Continued

ಫೇಸ್‌ಬುಕ್‌ ಪ್ರೇಮಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಸಿಕ್ಕಿಬಿದ್ದ ಉತ್ತರ ಪ್ರದೇಶದ ವ್ಯಕ್ತಿ…!

ನವದೆಹಲಿ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ 30 ವರ್ಷದ ವ್ಯಕ್ತಿಯೊಬ್ಬನನ್ನು ಅಕ್ರಮವಾಗಿ ಗಡಿ ದಾಟಿದ್ದಕ್ಕಾಗಿ ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ನಂತರ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನು ಭೇಟಿಯಾಗಲು ಗಡಿ ದಾಟಿದ್ದಾಗಿ ವ್ಯಕ್ತಿ ಹೇಳಿದ್ದಾನೆ ಎಂದು ಪಾಕಿಸ್ತಾನದ ಪೊಲೀಸರು ಹೇಳಿದ್ದಾರೆ. ಪಾಕಿಸ್ತಾನದ ಪಂಜಾಬ್ ಪೊಲೀಸರು ಮಂಡಿ ಬಹೌದ್ದೀನ್ ನಗರದಲ್ಲಿ ಬಂಧಿಸಿರುವ ಅಲಿಗಢದ ವ್ಯಕ್ತಿಯನ್ನು ನಾಗ್ಲಾ … Continued

ರೊಟ್ಟಿ ಬಡಿಸುವುದು ತಡವಾಗಿದ್ದಕ್ಕೆ ಮದುವೆ ಮಂಟಪದಿಂದ ಎದ್ದು ಹೊರನಡೆದ ಮದುಮಗ..! ನಂತ್ರ ಮತ್ತೊಬ್ಬ ಹುಡುಗಿ ಜೊತೆ ಮದುವೆ…!!

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಹಮೀದಪುರ ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಊಟ ಬಡಿಸಲು ತಡವಾದ ಕಾರಣಕ್ಕೆ ವರನೊಬ್ಬ ತನ್ನ ಮದುವೆ ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾನೆ ಎಂದು ವರದಿಯಾಗಿದೆ. ಅಸಮಾಧನಗೊಂಡ ವರನು ತನ್ನ ಸಂಬಂಧಿಕರ ಜೊತೆ ಅಸಮಾಧಾನಗೊಂಡು ಮದುವೆ ಮಂಟಪದಿಂದ ಹೊರನಡೆದಿದ್ದಾನೆ. ಮದುವೆಯ ಉಡುಪಿನಲ್ಲಿ ಕಾಯುತ್ತಿದ್ದ ವಧು ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ರೊಟ್ಟಿ ಬಡಿಸುವಲ್ಲಿ … Continued

6 ಜನರನ್ನು ಮದುವೆಯಾದ ಮಹಿಳೆ ; ನಂತರ ನಗದು-ಚಿನ್ನಾಭರಣಗಳೊಂದಿಗೆ ಪರಾರಿ; 7ನೇ ಮದುವೆಗೆ ಯತ್ನಿಸಿದಾಗ ಸಿಕ್ಕಿಬಿದ್ದ ಗ್ಯಾಂಗ್‌…!

ನವದೆಹಲಿ : ಒಬ್ಬಂಟಿ ಪುರುಷರನ್ನು ಮದುವೆಯಾಗಿ ನಂತರ ಅವರ ಮನೆಯಿಂದ ಹಣ ಮತ್ತು ಚಿನ್ನಾಭರಣ ಕದಿಯುತ್ತಿದ್ದ ಗ್ಯಾಂಗ್ ಅನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ, ಪೂನಂ ವಧುವಿನಂತೆ ಪೋಸ್ ಕೊಡುತ್ತಿದ್ದರೆ ಇನ್ನೊಬ್ಬಳು ಸಂಜನಾ ಗುಪ್ತಾ ಎಂಬವಳು ತಾಯಿಯಂತೆ ಪೋಸ್ ನೀಡುತ್ತಿದ್ದಳು. ವಿಮಲೇಶ … Continued

3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

ಪೊಲೀಸ್‌ ಪೋಸ್ಟ್‌ ಮೇಲೆ ದಾಳಿ ಮಾಡಿದ್ದ 3 ಖಲಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು

ಲಕ್ನೋ: ಪಂಜಾಬಿನ ಗುರುದಾಸಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಅಪರಾಧಿಗಳು ಹಾಗೂ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಅವರನ್ನು … Continued

ಮುದ್ದಿನ ಗಿಳಿ ಕಾಣೆಯಾಗಿದೆ…ಅದನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಾಲೀಕ

ಉತ್ತರ ಪ್ರದೇಶದ ಬುಲಂದ್‌ಶಹರ್ ನಿವಾಸಿಯೊಬ್ಬರು ತನ್ನ ಕಾಣೆಯಾದ ಗಿಳಿ ಬಗ್ಗೆ ಸರಿಯಾದ ಮಾಹಿತಿ ನೀಡಿದವರಿಗೆ ಅಥವಾ ಹಿಡಿದು ತಂದುಕೊಟವಟರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನವೀನ್ ಪಾಠಕ್ ಅವರು ಗಿಳಿಯೊಂದಿಗೆ ಇರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಡಿಸೆಂಬರ್ 10 ರಂದು ಗಿಳಿ ಕಾಣೆಯಾಗಿದೆ ಎಂದು ಹೇಳಿದ್ದಾರೆ. ಹಾಗೂ ನಾಪತ್ತೆಯಾದ ಗಿಳಿ ಬಗ್ಗೆ ಮಾಹಿತಿ … Continued