ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಅವರನ್ನು ಭಾನುವಾರ ಸಂಜೆ ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಅವರು ಕೃಷ್ಣ ಜನ್ಮಾಷ್ಟಮಿಗೆ ಮಥುರಾದಲ್ಲಿದ್ದರು, ಅವರ ಆರೋಗ್ಯ ಹದಗೆಟ್ಟಿತು. ಮೂತ್ರ ಮತ್ತು ಆಹಾರದ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ ಅವರನ್ನು ಗ್ವಾಲಿಯರ್‌ನಲ್ಲಿ ತಪಾಸಣೆಗೆ ಒಳಪಡಿಸಲಾಯಿತು, ಆದರೆ ಅವರ ಸ್ಥಿತಿ … Continued

ಐಪಿಎಸ್ ಅಧಿಕಾರಿಯ ಮಗಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ (ಸೆಪ್ಟೆಂಬರ್ 1) 19 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಅನಿಕಾ ರಸ್ತೋಗಿ ಎಂಬ ವಿದ್ಯಾರ್ಥಿನಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿನಿಯು ಹಾಸ್ಟೆಲ್‌ನ ತನ್ನ ಕೊಠಡಿಯ ಬಾಗಿಲು ತೆರೆಯದ ಕಾರಣ … Continued

ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ … Continued

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ರಾಹುಲ್​ ಗಾಂಧಿ ಹೊಲಿಗೆ ಹಾಕಿದ್ದ ಚಪ್ಪಲಿಗೆ ಡಿಮಾಂಡಪ್ಪೋ ಡಿಮಾಂಡು : ಚಪ್ಪಲಿಗೆ ₹10 ಲಕ್ಷದ ಆಫರ್‌ ತಿರಸ್ಕರಿಸಿದ ಅಂಗಡಿಯಾತ..!

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ (Rahul Gandhi) ಸುಲ್ತಾನ್​ಪುರಕ್ಕೆ ಹೋಗಿದ್ದಾಗ ಚಪ್ಪಲಿ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ವೇಳೆ ಅವರು ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಈಗ ಚಿನ್ನದ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಮುಂದೆ ಬಂದಿದ್ದಾರೆ. ರಾಹುಲ್ ಗಾಂಧಿ ಜುಲೈ 26ರಂದು ಮಾನನಷ್ಟ … Continued

ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಹಾಗೂ ೨೦ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಿಬ್ರುಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದವು. ಹಿರಿಯ ರೈಲ್ವೇ ಮತ್ತು ಸ್ಥಳೀಯ … Continued

ಈ ವ್ಯಕ್ತಿಗೆ ಕೇವಲ 40 ದಿನದಲ್ಲಿ 7 ಸಲ ಹಾವು ಕಚ್ಚಿದೆ..! ಅದೂ ಶನಿವಾರವೇ ಹಾವು ಕಚ್ಚಿದೆ…!! ವಿಚಿತ್ರ ಸಂಗತಿಯ ತನಿಖೆಗೆ ಸಮಿತಿ ರಚನೆ

ಫತೇಪುರ: ಉತ್ತರ ಪ್ರದೇಶದ ಫತೇಪುರದಲ್ಲಿ 24 ವರ್ಷದ ಯುವಕನಿಗೆ ಒಂದಲ್ಲ ಎರಡಲ್ಲ, ಕಳೆದ 40 ದಿನಗಳಲ್ಲಿ ಬರೋಬ್ಬರಿ 7 ಬಾರಿ ಹಾವು ಕಚ್ಚಿದೆ. ಕುತೂಹಲಕಾರಿ ಸಂಗತಿಯೆಂದರೆ ಆ ವ್ಯಕ್ತಿಗೆ ಶನಿವಾರವೇ ಹಾವು ಕಚ್ಚಿರುವುದು ವಿಶೇಷವಾಗಿದೆ…! ಹಾವಿನಿಂದ ಕಚ್ಚಿಸಿಕೊಂಡ ಯುವಕನನ್ನು ಕಡಿತದ ನಂತರ ವಿಕಾಸ ದುಬೆ ಎಂದು ಗುರುತಿಸಲಾಗಿದ್ದು, ಆತನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯಕ್ಕೆ … Continued

ಆಘಾತಕಾರಿ..| ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆಗೆ ವಿರೋಧ ; ತಂದೆ-ತಾಯಿ, ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿದ 15 ವರ್ಷದ ಬಾಲಕ…!

ಗಾಜಿಪುರ: ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ವಿರೋಧಿಸಿದ ತಂದೆ-ತಾಯಿ ಮತ್ತು ಸಹೋದರನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಾಜಿಪುರದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7-8 ರ ರಾತ್ರಿ ನಂದಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ನಡೆದ ಕೊಲೆಗಳಿಗೆ ಬಳಸಿದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಾಪರಾಧಿಯನ್ನು … Continued

ಪ್ರಾಂಶುಪಾಲೆಯನ್ನು ಅವರ ಕೊಠಡಿಯಿಂದ ಬಲವಂತವಾಗಿ ಹೊರದಬ್ಬಿದ ಶಾಲಾ ಆಡಳಿತ ಮಂಡಳಿ : ವೀಡಿಯೊ ವೈರಲ್‌

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಬಿಷಪ್ ಜಾನ್ಸನ್ ಗರ್ಲ್ಸ್ ಹೈಸ್ಕೂಲ್​​ನ ಪ್ರಾಂಶುಪಾಲೆ ಪಾರುಲ್ ಸೊಲೊಮನ್ ಅವರನ್ನು ಆಡಳಿತ ಮಂಡಳಿಯು ಬಲವಂತವಾಗಿ ಅವರ ಕಚೇರಿಯಿಂದ ಹೊರದಬ್ಬಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈರಲ್​​ ಆದ ವೀಡಿಯೊದಲ್ಲಿ ಪ್ರಾಂಶುಪಾಲೆ ಪಾರುಲ್ ಅವರನ್ನು ಕುರ್ಚಿಯಿಂದ ಬಲವಂತದಿಂದ ಎಳೆದುಹಾಕಿ ಅದೇ ಸ್ಥಾನಕ್ಕೆ ಹೊಸ ಪ್ರಾಂಶುಪಾಲರನ್ನು ಕೂಡ್ರಿಸಿರುವುದು ಕಂಡುಬಂದಿದೆ. ಸಂಸ್ಥೆಯ ಅಧ್ಯಕ್ಷರ … Continued

ಮಾಲೀಕ ಯಾರೆಂದು ನಿರ್ಧರಿಸಲು ಪೊಲೀಸರು, ಪಂಚಾಯ್ತಿಗೆ ಸಾಧ್ಯವಾಗದಿದ್ದಾಗ ಅದನ್ನು ಬಗೆಹರಿಸಿದ ಎಮ್ಮೆ…!

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪಗಢದ ಪೊಲೀಸರು ಕೆಲ ದಿನಗಳ ಹಿಂದೆ ತನ್ನ ಮಾಲೀಕನ ಮನೆಯಿಂದ ನಾಪತ್ತೆಯಾಗಿದ್ದ ಎಮ್ಮೆಯೊಂದು ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ವಿಶಿಷ್ಟವಾದ ಮಾರ್ಗೋಪಾಯದ ಮೂಲಕ ಕಳೆದು ಹೋದ ಎಮ್ಮೆಯ ಮಾಲೀಕ ಯಾರು ಎಂದು ಕಂಡುಹಿಡಿದಿದ್ದಾರೆ. ಎಮ್ಮೆ ಯಾರಿಗೆ ಸೇರಿದ್ದು ಎಂಬ ಸಮಸ್ಯೆ ಬಗೆಹರಿಸುವಲ್ಲಿ ಪಂಚಾಯ್ತಿ ವಿಫಲವಾದ ಕಾರಣ ಪೊಲೀಸರು ಎಮ್ಮೆಯ ನಿಜವಾದ … Continued