ಉತ್ತರ ಪ್ರದೇಶ ಕಾಲ್ತುಳಿತದ ಘಟನೆ : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿ

ಲಕ್ನೋ : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 116 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಈ ವೇಳೆ ರಜನೀಶ್ ಎಂಬ ಪೋಲೀಸ್ ಪೇದೆಯೊಬ್ಬರು ಎಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ದುರಂತ ದೃಶ್ಯವನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೂ ನಡೆದಿದೆ ಎಂದು … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued

ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ದೆಗೆ ಜಾರಿದ ಕಳ್ಳ ; ಪೊಲೀಸರು ಬಂದು ಎಬ್ಬಿಸಿದಾಗ ಬೆಚ್ಚಿಬಿದ್ದ…!

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ, ಹವಾನಿಯಂತ್ರಣದ (ಎಸಿ) ಅಡಿಯಲ್ಲಿ ನಿದ್ದೆಗೆ ಜಾರಿದ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಸಮಾಮಾನ್ಯ ಘಟನೆ ವರದಿಯಾಗಿದೆ. ಈತನ ಜೊತೆಗೆ ಬಂದಿದ್ದ ಉಳಿದ ಕಳ್ಳರು ಈತನನ್ನು ಗಾಢವಾದ ನಿದ್ರೆಯಿಂದ ಎಚ್ಚರಗೊಳಿಸಲು ವಿಫಲವಾಗಿ ಆತನನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ … Continued

ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

ಮೂರನೇ ಹಂತದ ಮತದಾನದ ವೇಳೆ ಉತ್ತರಪ್ರದೇಶದ ಇಟಾಹ್‌ನಲ್ಲಿ ಯುವಕನೊಬ್ಬ ಒಂದೇ ಬೂತ್ ನಲ್ಲಿ 8 ಬಾರಿ ಮತದಾನ ಮಾಡಿದ್ದಾನೆ. ತಾನು ಪ್ರತಿ ಬಾರಿ ಮತದಾನ ಮಾಡಿದ್ದನ್ನೂ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತಗಟ್ಟೆಯ ಎಲ್ಲ ಸಿಬ್ಬಂದಿಯನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. … Continued

ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಲಕ್ನೋ :   ಕೊಲೆ-ಆತ್ಮಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿ, ತಾಯಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರ ಸಮೀಪದ ರಾಮಪುರ ಮಥುರಾದ ಪಲ್ಹಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 … Continued

ವೀಡಿಯೊ…| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ಲಕ್ನೋ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಫೇಶಿಯಲ್ ಮಾಡಿಸಿಕೊಂಡ ಶಿಕ್ಷಕಿಯೊಬ್ಬರಿಗೆ ಮುಖ್ಯಾಧ್ಯಾಪಕಿಯೊಬ್ಬರು ಕಚ್ಚಿದ ಘಟನೆಯ ಹಸಿಯಾಗಿರುವಾಗಲೇ ಶಾಲೆಗೆ ತಡವಾಗಿ ಬಂದ ಆರೋಪದ ಮೇಲೆ ಪ್ರಾಂಶುಪಾಲರೊಬ್ಬರು ಶಿಕ್ಷಕಿಯೊಬ್ಬರಿಗೆ ಥಳಿಸಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾದ ಸೀಗಾನಾ ಗ್ರಾಮದ ಪೂರ್ವ-ಪ್ರೌಢಶಾಲೆಯ ಪ್ರಾಂಶುಪಾಲೆಯು ಶಿಕ್ಷಕಿ ಮೇಲೆ ಹಲ್ಲೆ ನದಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಹೊಡೆದಾಟದ ಸಮಯದಲ್ಲಿ ತನ್ನ ಬಟ್ಟೆಗಳನ್ನು … Continued

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ…!

ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ಚಲಿಸುವ ರೈಲಿನಲ್ಲಿಯೇ ತನ್ನ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 29 ರಂದು ಮೊಹಮ್ಮದ್ ಅರ್ಷದ್ (28) ಎಂಬಾತ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಝಾನ್ಸಿ ಜಂಕ್ಷನ್‌ಗೆ ಸ್ವಲ್ಪ ಮೊದಲು ಈ ಘಟನೆ ಸಂಭವಿಸಿದೆ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅರ್ಷದ್ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued