ವರನಿಗೆ ತಿಂಗಳಿಗೆ 1.20 ಲಕ್ಷ ರೂ. ಸಂಬಳವಿದ್ರೂ ಅದು ಸರ್ಕಾರಿ ನೌಕರಿ ಅಲ್ಲದ ಕಾರಣ ಮದುವೆಗೆ ಒಪ್ಪದೆ ಮಂಟಪದಿಂದ ಎದ್ದು ಹೋದ ವಧು…!

ವಧು-ವರರು ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡ ನಂತರ ತಾನು ನಂಬಿದಂತೆ ಮದುಮಗ ಸರ್ಕಾರಿ ನೌಕರಿಯಲ್ಲಿ ಇಲ್ಲ, ಬದಲಾಗಿ ಖಾಸಗಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದ ಮದುಮಗಳು ನಂತರ ಮದುವೆ ಬೇಡ ಎಂದು ಹಠ ಹಿಡಿದು ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ…! ವರನ ಕುಟುಂಬ ಪ್ರಕರಣ ಸುಖಾಂತ್ಯವಾಗಬಹುದು ಎಂದು  ನಿರೀಕ್ಷಿಸಿ … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ಮಸೀದಿಯ ಸರ್ವೆಗೆ ವಿರೋಧ ; ಘರ್ಷಣೆಯಲ್ಲಿ ಮೂವರು ಸಾವು

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ವಿರೋಧಿಸಿದ ಗುಂಪೊಂದು ಪೊಲೀಸರೊಂದಿಗೆ ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದ್ದಾರೆ ಎಂಬ ದೂರಿನ ಆಧಾರದ ಮೇಲೆ ನ್ಯಾಯಾಲಯವು ಸಮೀಕ್ಷೆ ನಡೆಸಲು ನೀಡಿದ ಆದೇಶದ ಮೇರೆಗೆ ಮಸೀದಿ ಸಮೀಕ್ಷೆಯನ್ನು ಪ್ರಾರಂಭಿಸಲಾಯಿತು. ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ … Continued

ಆಹಾರ ನಿಗಮದ (FCI) ಗೋಡೌನ್‌ನಲ್ಲಿ ಹೂಳಲಾಗಿದ್ದ 145 ಮಂಗಗಳ ಶವಗಳು ಪತ್ತೆ…!

ಲಕ್ನೋ: ಒಂದು ವಾರದ ಹಿಂದೆ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮಿನಲ್ಲಿ 145 ಮಂಗಗಳನ್ನು ಸತ್ತಿದ್ದು, ಅವುಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಹತ್ರಾಸ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ (ನವೆಂಬರ್ 22) ಪೊಲೀಸರು ಗುಂಡಿಯಲ್ಲಿ ಹೂತಿದ್ದ ಮಂಗಗಳ ದೇಹಗಳನ್ನು ಹೊರತೆಗೆದಿದ್ದಾರೆ. ನಂತರ ಪಶುವೈದ್ಯರ ತಂಡವು ಶವಗಳನ್ನು … Continued

ಗೋಣಿಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ ; ಬಿಜೆಪಿ ಬೆಂಬಲಿಸಿದ್ದಕ್ಕಾಗಿ ಆಕೆ ಕೊಲೆ : ಕುಟುಂಬದ ಆರೋಪ

ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್‌ನ ಕಂಜಾರಾ ನದಿಯ ಸೇತುವೆಯ ಬಳಿ ದಲಿತ ಯುವತಿಯೊಬ್ಬಳ ಬೆತ್ತಲೆ ಮೃತ ದೇಹವನ್ನು ಗೋಣಿಚೀಲದಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಕುಟುಂಬವು ಪ್ರಶಾಂತ ಯಾದವ ಎಂಬ ವ್ಯಕ್ತಿ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದು, ಅಪರಾಧದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ. ಪ್ರಶಾಂತ ಯಾದವ್‌ ಹಾಗೂ ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ವೀಡಿಯೊ…| ಮದುವೆಯ ಮೆರವಣಿಗೆ ಮೇಲೆ ₹ 20 ಲಕ್ಷ ಮೌಲ್ಯದ ನೋಟುಗಳ ಸುರಿಮಳೆ ಗೈದರು…!

ನವದೆಹಲಿ : ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿನ ನಡೆದ ಮದುವೆ ಮೆರವಣಿಗೆಯ ವೀಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಮದುವೆಯ ಮೆರವಣಿಗೆ ಸಂದರ್ಭದಲ್ಲಿ ನೋಟುಗಳನ್ನು ಮೆರವಣಿಗೆ ಮೇಲೆ ಎಸೆಯಲು ₹ 20 ಲಕ್ಷವನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ. ವೈರಲ್ ವೀಡಿಯೊಗಳಲ್ಲಿ, ಕೆಲವರು ಮನೆಗಳ ಮೇಲೆ ನಿಂತುಕೊಂಡು ನೋಟುಗಳ ಬಂಡಲ್‌ಗಳನ್ನು ಗಾಳಿಗೆ ತೂರುತ್ತಿರುವುದು ಕಂಡುಬಂದಿದೆ. ವರದಿಯ ಪ್ರಕಾರ, ಹೀಗೆ ನೋಟುಗಳನ್ನು … Continued

ಝಾನ್ಸಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳ ಸಾವು, 16 ಮಕ್ಕಳಿಗೆ ಗಾಯ

ಝಾನ್ಸಿ/ಲಕ್ನೋ : ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಮೃತಪಟ್ಟಿವೆ ಹಾಗೂ ಕನಿಷ್ಠ 16 ಮಕ್ಕಳು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಶುಕ್ರವಾರ ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ … Continued

ವೀಡಿಯೊ…| ಒಂದೇ ಬೈಕ್‌ನಲ್ಲಿ 8 ಜನರ ಪ್ರಯಾಣ; ಬೈಕ್‌ ತಡೆದ ಪೊಲೀಸರೇ ಶಾಕ್‌…!

ಶಹಜಹಾನಪುರ : ಅಚ್ಚರಿಯ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ಕುಟುಂಬದ ಏಳು ಜನರೊಂದಿಗೆ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಸವಾರಿಯನ್ನು ಸ್ಥಳೀಯ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ನಿಲ್ಲಿಸಿದ್ದು, ಬೈಕಿನಲ್ಲಿ ಎಂಟು ಜನ ಹೋಗುತ್ತಿರುವುದನ್ನು ನೋಡಿ ಪೊಲೀಸ್‌ ಅಧಿಕಾರಿಯೇ ಗಬರಿಯಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಹಜಹಾನಪುರದ ಮಿರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಿಂದ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ವಕೀಲೆ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : 20 ಲಕ್ಷ ರೂ. ಕೊಡ್ತೇವೆ ಹೇಳಿ ಕೇವಲ ₹ 1 ಲಕ್ಷ ಕೊಟ್ರು ; ಪೊಲೀಸರಿಗೆ ದೂರು ನೀಡಿದ ವಕೀಲೆಯ ಕೊಲೆ ಆರೋಪಿ…!

ಮೀರತ್‌ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ವರ್ಷದ ಹಿಂದಿನ ಕೊಲೆ ಪ್ರಕರಣವು ಅಚ್ಚರಿಯ ತಿರುವು ಪಡೆದುಕೊಂಡಿದೆ. ಕೊಲೆ ಮಾಡಿದ್ದಕ್ಕಾಗಿ ಭರವಸೆ ನೀಡಿದಷ್ಟು ಹಣ ಕೊಟ್ಟಿಲ್ಲ ಎಂದು ಗುತ್ತಿಗೆ ಕೊಲೆಗಾರನೇ ಪೊಲೀಸರಿಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ. ವಕೀಲೆ ಅಂಜಲಿ ಅವರನ್ನು ಕೊಲ್ಲಲು 20 ಲಕ್ಷ ರೂ.ಗಳ ಗುತ್ತಿಗೆ ನೀಡಲಾಗಿತ್ತು, ಆದರೆ ಆ ಭರವಸೆ … Continued