ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ದಾಂಡೇಲಿ : ಗಂಡ ಹೆಂಡತಿಯ ಜಗಳದ ಆರು ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ನಂತರ ಮಗು ಸಾವಿಗೀಡಾದ ಅಮಾನವೀಯ ಘಟನೆ ಶನಿವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಂಪತಿ ಶನಿವಾರ ರಾತ್ರಿ ಜಗಳ‌ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ‌ ನೊಂದ ಮಹಿಳೆ ಆರು ವರ್ಷದ ಮಗು ವಿನೋದ … Continued

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಕಾಳಿ ನದಿಯಲ್ಲಿ ನೀರಿಗಿಳಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನು … Continued

ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್‌ 14ರಿಂದ ನಿರ್ಬಂಧ ವಿಧಿಸಲಾಗಿದೆ. ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವ ಸಮಿತಿ ಕುಮಟಾ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದಿದೆ. ಕುಮಟಾದ ನೆಲ್ಲಿಕೇರಿಯ ಮಹಾಸತಿ ದೇವಸ್ಥಾನದಲ್ಲಿ ಶನಿವಾರ (ಏಪ್ರಿಲ್‌ 6) ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ನಡೆಯಿತು. ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳೇ ಇದ್ದ ಕೂಜಳ್ಳಿಯ ಭಾವಧಾರಾ ಭಜನಾ ಮಂಡಳಿ ಪ್ರಥಮ ಸ್ಥಾನ … Continued